ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನನ್ನ ಮನೆಗಳ ಮೇಲೆ ಐಟಿ ದಾಳಿಗೆ ಸಂಚು: ಚಿದಂಬರಂ ಆರೋಪ

|
Google Oneindia Kannada News

ನವದೆಹಲಿ, ಏಪ್ರಿಲ್ 8: ಲೋಕಸಭೆ ಚುನಾವಣೆಯ ಪ್ರಚಾರಕ್ಕೆ ಅಡ್ಡಿಪಡಿಸುವ ಸಲುವಾಗಿ ತಮ್ಮ ಮನೆ ಮೇಲೆ ಅದಾಯ ತೆರಿಗೆ ಇಲಾಖೆ ದಾಳಿ ನಡೆಸಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿದೆ ಎಂದು ಮಾಜಿ ಸಚಿವ ಪಿ. ಚಿದಂಬರಂ ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರದ ನಡೆಗಳನ್ನು ದೇಶದ ಜನರು ಗಮನಿಸುತ್ತಿದ್ದಾರೆ. ಈ ಚುನಾವಣೆಯಲ್ಲಿ ಅವರಿಗೆ ಸರಿಯಾದ ಉತ್ತರ ನೀಡಲಿದ್ದಾರೆ ಎಂದು ಅವರು ಹೇಳಿದ್ದಾರೆ.

 ಮೂರ್ಖ ಸರ್ಕಾರ ಮಾತ್ರ ಭದ್ರತೆಯ ಗುಟ್ಟು ರಟ್ಟು ಮಾಡುತ್ತದೆ: ಚಿದಂಬರಂ ಮೂರ್ಖ ಸರ್ಕಾರ ಮಾತ್ರ ಭದ್ರತೆಯ ಗುಟ್ಟು ರಟ್ಟು ಮಾಡುತ್ತದೆ: ಚಿದಂಬರಂ

'ಶಿವಗಂಗಾ ಕ್ಷೇತ್ರ ಮತ್ತು ಚೆನ್ನೈನಲ್ಲಿರುವ ನನ್ನ ಮನೆಗಳ ಮೇಲೆ ದಾಳಿ ನಡೆಸಲು ಅದಾಯ ತೆರಿಗೆ ಇಲಾಖೆ ಯೋಜನೆ ರೂಪಿಸಿದೆ ಎಂದು ನನಗೆ ತಿಳಿದುಬಂದಿದೆ. ಪತ್ತೆ ತಂಡವನ್ನು ನಾವು ಸ್ವಾಗತಿಸುತ್ತೇವೆ' ಎಂದು ಚಿದಂಬರಂ ಟ್ವೀಟ್ ಮಾಡಿದ್ದಾರೆ.

former finance minister P Chidambaram alleged IT raid on his residences welcome the search party

'ನಮ್ಮಲ್ಲಿ ಮುಚ್ಚಿಡಲು ಏನೂ ಇಲ್ಲ ಎಂಬುದು ಆದಾಯ ತೆರಿಗೆ ಇಲಾಖೆಗೆ ತಿಳಿದಿದೆ. ಅವರು ಮತ್ತು ಇತರೆ ಸಂಸ್ಥೆಗಳು ಈ ಹಿಂದೆಯೂ ನಮ್ಮ ಮನೆಗಳಲ್ಲಿ ಹುಡುಕಾಟ ನಡೆಸಿದ್ದರು. ಆದರೆ ಏನೂ ಸಿಕ್ಕಿರಲಿಲ್ಲ. ಚುನಾವಣಾ ಪ್ರಚಾರವನ್ನು ಕೆಡಿಸುವುದೇ ಇದರ ಉದ್ದೇಶ' ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ.

 ಕಳಂಕಿತ ಕಾರ್ತಿ ಚಿದಂಬರಂ ಸ್ಪರ್ಧೆಗೆ ಕಾಂಗ್ರೆಸ್‌ ಪಕ್ಷದಲ್ಲೇ ವಿರೋಧ ಕಳಂಕಿತ ಕಾರ್ತಿ ಚಿದಂಬರಂ ಸ್ಪರ್ಧೆಗೆ ಕಾಂಗ್ರೆಸ್‌ ಪಕ್ಷದಲ್ಲೇ ವಿರೋಧ

ಈ ಸರ್ಕಾರದ ಎಲ್ಲ ನಡವಳಿಕೆಗಳನ್ನು ಜನರು ನೋಡುತ್ತಿದ್ದಾರೆ. ಈ ಚುನಾವಣೆಯಲ್ಲಿ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಬಂಪರ್ ಘೋಷಣೆಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಬಂಪರ್ ಘೋಷಣೆ

ಪಿ. ಚಿದಂಬರಂ ಅವರ ಮಗ ಕಾರ್ತಿ ಚಿದಂಬರಂ ತಮಿಳುನಾಡಿನ ಶಿವಗಂಗಾ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಕಾರ್ತಿ ವಿರುದ್ಧ ವಿವಿಧ ಭ್ರಷ್ಟಾಚಾರ ಪ್ರಕರಣಗಳಿದ್ದು, ಜಾಮೀನಿನ ಮೇಲೆ ಹೊರಗಿದ್ದಾರೆ.

English summary
Former Finance minister P Chidambaram accused the government is planning to do Income Tax raids on his residences in Sivaganga and Chennai. 'We will welcome the search party' he said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X