ಮಾಜಿ ರಕ್ಷಣಾ ಸಚಿವ ಜಸ್ವಂತ್ ಸಿಂಗ್ ನಿಧನ
ನವದೆಹಲಿ, ಸೆಪ್ಟೆಂಬರ್ 27 : ಧೀರ್ಘ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಕ್ಷಣಾ ಸಚಿವ, ಹಿರಿಯ ಬಿಜೆಪಿ ನಾಯಕ ಜಸ್ವಂತ್ ಸಿಂಗ್ ವಿಧಿವಶರಾದರು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ಗಣ್ಯರು ಹಿರಿಯ ನಾಯಕನ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಭಾನುವಾರ ದೆಹಲಿಯಲ್ಲಿ 82 ವರ್ಷದ ಜಸ್ವಂತ್ ಸಿಂಗ್ ನಿಧನ ಹೊಂದಿದರು. 1980 ರಿಂದ 2014ರ ತನಕ ಲೋಕಸಭೆ ಅಥವ ರಾಜ್ಯಸಭೆಗೆ ಆಯ್ಕೆಯಾಗುತ್ತಿದ್ದ ಜಸ್ವಂತ್ ಸಿಂಗ್ ಅತಿ ಹೆಚ್ಚು ಕಾಲ ಕಾರ್ಯ ನಿರ್ವಹಣೆ ಮಾಡಿದ ಜನಪ್ರತಿನಿಧಿ ಎಂಬ ಹೆಗ್ಗಳಿಕೆ ಹೊಂದಿದ್ದರು.
1938ರ ಜನವರಿ 3ರಂದು ಜಸ್ವಂತ್ ಸಿಂಗ್ ಜನಿಸಿದ್ದರು. ಭಾರತದ ರಕ್ಷಣಾ ಸಚಿವರಾಗಿ ಜಸ್ವಂತ್ ಸಿಂಗ್ ಕಾರ್ಯ ನಿರ್ವಹಣೆ ಮಾಡಿದ್ದರು. ಬಿಜೆಪಿಯ ಸಂಸ್ಥಾಪಕದಲ್ಲಿ ಜಸ್ವಂತ್ ಸಿಂಗ್ ಸಹ ಒಬ್ಬರು. ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವಾರು ಗಣ್ಯರು ಜಸ್ವಂತ್ ಸಿಂಗ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಜಸ್ವಂತ್ ಸಿಂಗ್ ಧೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮನೆಯಲ್ಲಿ ಜಾರಿ ಬಿದ್ದಿದ್ದ ಅವರು ಕೋಮಾಕ್ಕೆ ಜಾರಿದ್ದರು.
|
ಸಂತಾಪ ಸೂಚಿಸಿದ ಮೋದಿ
ಪ್ರಧಾನಿ ನರೇಂದ್ರ ಮೋದಿ ಜಸ್ವಂತ್ ಸಿಂಗ್ ಪುತ್ರ ಮನ್ವೇಂದ್ರ ಸಿಂಗ್ಗೆ ಕರೆ ಮಾಡಿ ಸಂತಾಪ ಸೂಚಿಸಿದ್ದಾರೆ. ಕಳೆದ ಆರು ವರ್ಷಗಳಿಂದ ಅವರು ಆನಾರೋಗ್ಯ ಪೀಡಿತರಾಗಿದ್ದರು.
|
ಸಾಮಾಜಿಕ ನಿಲುವು ಹೊಂದಿದ್ದರು
ಜಸ್ವಂತ್ ಸಿಂಗ್ ಅವರನ್ನು ಸಾಮಾಜಿಕ ಮತ್ತು ರಾಜಕೀಯ ನಿಲುವಳಿಗಾಗಿ ನೆನಪು ಮಾಡಿಕೊಳ್ಳಬೇಕು ಎಂದು ನರೇಂದ್ರ ಮೋದಿ ಹೇಳಿದ್ದಾರೆ. ಬಿಜೆಪಿ ಸಂಘಟನೆಗೂ ಅವರು ಕೊಡುಗೆ ನೀಡಿದ್ದಾರೆ ಎಂದು ಸಂತಾಪ ಸೂಚಿಸಿದ್ದಾರೆ.
|
ರಕ್ಷಣಾ ಖಾತೆ ನಿಭಾಯಿಸಿದ್ದರು
ದೇಶಕ್ಕಾಗಿ ಜಸ್ವಂತ್ ಸಿಂಗ್ ಅಪಾರ ಸೇವೆ ಸಲ್ಲಿಸಿದ್ದಾರೆ. ಅಟಲ್ ಜೀ ಸರ್ಕಾರದಲ್ಲಿ ಅವರು ರಕ್ಷಣೆ, ಹಣಕಾಸು ಮತ್ತು ವಿದೇಶಾಂಗ ಖಾತೆಯನ್ನು ನಿಭಾಯಿಸಿದ್ದರು ಎಂದು ಮೋದಿ ನೆನೆಪು ಮಾಡಿಕೊಂಡಿದ್ದಾರೆ.
|
ರಾಜನಾಥ್ ಸಿಂಗ್ ಸಂತಾಪ
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜಸ್ವಂತ್ ಸಿಂಗ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ CSR ರಾಷ್ಟ್ರೀಯ ಸಮಾವೇಶ: ವಿಕಸಿತ ಭಾರತ ಚರ್ಚೆ -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications