ಮಾಜಿ ಸಂಸದನ ಮನೆಯಲ್ಲಿ ಬೆಂಕಿ : ಸೊಸೆ, ಮೊಮ್ಮಕ್ಕಳು ಸಜೀವ ದಹನ
ಹೈದರಾಬಾದ್, ನವೆಂಬರ್ 04 : ತೆಲಂಗಾಣದ ವಾರಂಗಲ್ ಕ್ಷೇತ್ರದ ಮಾಜಿ ಸಂಸದ ಎಸ್.ರಾಜಯ್ಯ ಅವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ರಾಜಯ್ಯ ಅವರ ಸೊಸೆ ಮತ್ತು ಮೂವರು ಮೊಮ್ಮಕ್ಕಳು ಸಜೀವವಾಗಿ ದಹನವಾಗಿದ್ದಾರೆ. ವಾರಂಗಲ್ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜಯ್ಯ ಅವರು ಬುಧವಾರ ನಾಮಪತ್ರ ಸಲ್ಲಿಸಬೇಕಾಗಿತ್ತು.
ಬುಧವಾರ ಮುಂಜಾನೆ ವಾರಂಗಲ್ನ ಹನುಮಕೊಂಡದಲ್ಲಿರುವ ಎಸ್.ರಾಜಯ್ಯ ಅವರ ನಿವಾಸದಲ್ಲಿ ಈ ದುರಂತ ನಡೆದಿದ್ದು, ರಾಜಯ್ಯ ಅವರ ಸೊಸೆ ಸಾರಿಕಾ ಮತ್ತು ಮೊಮ್ಮಕ್ಕಳಾದ ಅಭಿನವ್, ಅಯಾನ್, ಶ್ರೀಯಾನ್ ಸಜೀವವಾಗಿ ದಹನವಾಗಿದ್ದಾರೆ. ವಾರಂಗಲ್ ಪೊಲೀಸ್ ಆಯುಕ್ತ ಸುಧೀರ್ ಬಾಬು ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

2002ರಲ್ಲಿ ಎಸ್.ರಾಜಯ್ಯ ಅವರ ಪುತ್ರ ಅನಿಲ್ ಅವರನ್ನು ಸಾರಿಕಾ ಪ್ರೀತಿಸಿ ವಿವಾಹವಾಗಿದ್ದರು. ಗ್ಯಾಸ್ ಸೋರಿಕೆಯಿಂದಾಗಿ ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದ್ದು, ಪರಿಶೀಲನೆ ಮುಂದುವರೆದಿದೆ.
ಆತ್ಮಹತ್ಯೆ ಶಂಕೆ : ಸಾರಿಕಾ ಅವರು ಮೂವರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸಾರಿಕಾ ಅವರು ಮಾವನ ವಿರುದ್ಧ ಹಿಂದೆ ವರದಕ್ಷಿಣೆ ಕಿರುಕುಳದ ಕೇಸ್ ದಾಖಲಿಸಿದ್ದರು. ಹಿಂದೆ ಎರಡು ಬಾರಿ ಆತ್ಮಹತ್ಯೆ ಮಾಡಿಕೊಳ್ಳಲು ಸಹ ಪ್ರಯತ್ನ ನಡೆಸಿದ್ದರು.
ಇಂದು ನಾಮಪತ್ರ ಸಲ್ಲಿಸಬೇಕಿತ್ತು : ವಾರಂಗಲ್ ಕ್ಷೇತ್ರದ ಉಪ ಚುನಾವಣೆ ನಡೆಯುತ್ತಿದ್ದು ಮಾಜಿ ಸಂಸದ ಎಸ್.ರಾಜಯ್ಯ ಅವರು ಬುಧವಾರ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಬೇಕಿತ್ತು. ಇದಕ್ಕೂ ಮೊದಲೇ ಈ ದುರಂತ ಸಂಭವಿಸಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications