ವಾಜಪೇಯಿ ಆರೋಗ್ಯದಲ್ಲಿ ಏರುಪೇರು: ಏಮ್ಸ್ಗೆ ದಾಖಲು
Recommended Video

ನವದೆಹಲಿ, ಜೂನ್ 11: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಾಜಪೇಯಿ ಅವರ ಆರೋಗ್ಯದಲ್ಲಿ ವಯೋಸಹಜ ಸಮಸ್ಯೆಗಳು ಕಾಣಿಸಿಕೊಂಡಿವೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸುವಂತೆ ವೈದ್ಯರು ಸೂಚನೆ ನೀಡಿದ್ದರು.
ಪ್ರತಿ ಬಾರಿ ನಡೆಸಲಾಗುವ ಆರೋಗ್ಯ ತಪಾಸಣೆಯ ಸಲುವಾಗಿ ಅವರನ್ನು ಆಸ್ಪತ್ರೆಗೆ ಕರೆತರಲಾಗಿದೆ. ಏಮ್ಸ್ ನಿರ್ದೇಶಕ ಡಾ. ರಣದೀಪ್ ಗುಲೇರಿಯಾ ಅವರ ಮೇಲ್ವಿಚಾರಣೆಯಲ್ಲಿ ವಾಜಪೇಯಿ ಅವರ ಆರೋಗ್ಯ ತಪಾಸಣೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

93 ವರ್ಷ ವಯಸ್ಸಿನ ವಾಜಪೇಯಿ ಅವರು ಸುಮಾರು ಹತ್ತು ವರ್ಷಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ.
2001ರಲ್ಲಿ ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಬಳಿಕ ಅವರು ನಡೆದಾಡಲು ಕಷ್ಟಪಡುವಂತಾಗಿತ್ತು. 2009ರಲ್ಲಿ ಅವರು ಪಾರ್ಶ್ವವಾಯುವಿಗೆ ತುತ್ತಾದ ಬಳಿಕ ಮಾತನಾಡುವುದು ಸಹ ಅಸಾಧ್ಯವಾಗಿದೆ.
ಸದಾ ಗಾಲಿಕುರ್ಚಿಯಲ್ಲಿಯೇ ಸಹಾಯಕರ ನೆರವಿನಿಂದ ಓಡಾಡುವ ಸ್ಥಿತಿಗೆ ತಲುಪಿರುವ ವಾಜಪೇಯಿ ಅವರು, ತಮ್ಮ ಆತ್ಮೀಯರನ್ನು ಸಹ ಗುರುತಿಸುವಲ್ಲಿ ವಿಫಲರಾಗುತ್ತಿದ್ದಾರೆ.
ಡೆಮೆನ್ಷಿಯಾ ಮತ್ತು ದೀರ್ಘಕಾಲದ ಮಧುಮೇಹದಿಂದ ಅವರು ಬಳಲುತ್ತಿದ್ದಾರೆ. ಇತ್ತೀಚಿನ ಕೆಲವು ವರ್ಷಗಳಿಂದ ಅವರು ಸಾರ್ವಜನಿಕ ಕಾರ್ಯಕ್ರಮಗಳಿಂದ ದೂರವೇ ಉಳಿದಿದ್ದಾರೆ. ಏಮ್ಸ್ನಲ್ಲಿ ವೈದ್ಯಕೀಯ ತಪಾಸಣೆಗೆ ಒಳಗಾಗುವುದರ ಹೊರತುಪಡಿಸಿ ಅವರು ಮನೆಯಿಂದ ಹೊರಗೆ ಬರುತ್ತಿಲ್ಲ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications