'ಕ್ಷಿಪಣಿ ಮಾನವ' ಎಪಿಜೆ ಅಬ್ದುಲ್ ಕಲಾಂ ವಿಧಿವಶ
ಶಿಲ್ಲಾಂಗ್, ಜುಲೈ 27 : ಭಾರತರತ್ನ, ಕ್ಷಿಪಣಿ ಮಾನವ, ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರು ಸೋಮವಾರ ಸಂಜೆ ವಿಧಿವಶವಾಗಿದ್ದಾರೆ.. ಅವರಿಗೆ 84 ವರ್ಷ ವಯಸ್ಸಾಗಿತ್ತು.
ಶಿಲ್ಲಾಂಗ್ ನಲ್ಲಿ ಉಪನ್ಯಾಸ ನೀಡುವ ಸಂದರ್ಭದಲ್ಲಿ ಕುಸಿದು ಬಿದ್ದರು. ನಂತರ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಹೃದಯಾಘಾತಕ್ಕೆ ಒಳಗಾಗಿ ಕೊನೆಯುಸಿರೆಳೆದರು. [ಸ್ಫೂರ್ತಿ ತುಂಬುವ ಡಾ.ಕಲಾಂ ಸ್ಫೂರ್ತಿ ಹೇಳಿಕೆಗಳು]
"I love teaching and I love to be a teacher" ಗ್ರಾಮೀಣ ಭಾಗದ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಬೇಕು ಎಂದು ಹೇಳುತ್ತಿದ್ದ ಕಲಾಂ ಅವರು ತಾವು ಬಯಸಿದ್ದಂತೆ ಮರಣವನ್ನಪ್ಪಿದ್ದಾರೆ.

'ನಾನು ಯಾವುದೇ ಕಾಯಿಲೆಗೆ ತುತ್ತಾಗಿ ಸಾವು ಕಾಣಬಾರದು' ಎಂದು ಬಯಸಿದ್ದರು. ಅದರಂತೆ, ಮೇಘಾಲಯದ ರಾಜಧಾನಿ ಶಿಲ್ಲಾಂಗ್ ನ ಐಐಎಂನಲ್ಲಿ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡುವಾಗ ಕುಸಿದು ಬಿದ್ದರು.[ಅಂದಿನಿಂದ ಇಂದಿನವರೆಗೆ ನಮ್ಮ ರಾಷ್ಟ್ರಪತಿಗಳು]
ಅಬ್ದುಲ್ ಕಲಾಂ ಅವರ ನಿಧನಕ್ಕೆ ದೇಶದೆಲ್ಲೆಡೆಯಿಂದ ಸಂತಾಪ ಸಂದೇಶಗಳು ಹರಿದು ಬರುತ್ತಿವೆ. ತಮಿಳುನಾಡಿನ ರಾಮೇಶ್ವರಂನಲ್ಲಿ ಬಡ ಕುಟುಂಬದಲ್ಲಿ ಜನಿಸಿದ ಅಬ್ದುಲ್ ಅವರು ಇಸ್ರೋ, ಡಿಆರ್ ಡಿಒ ವಿಜ್ಞಾನಿಯಾಗಿ ಭಾರತದ ಕ್ಷಿಪಣಿ ನಿರ್ಮಾತೃವಾಗಿ, ಗುರುವಾಗಿ ಬೆಳೆದರು. ಭಾರತವನ್ನು ವೈಜ್ಞಾನಿಕವಾಗಿ ಶೈಕ್ಷಣಿಕವಾಗಿ ಬೆಳೆಸಿದರು.
PM @narendramodi condoles the passing away of former President Dr. APJ Abdul Kalam. https://t.co/9ZiyzeOWm5
— PMO India (@PMOIndia) July 27, 2015 ಶೋಕಾಚರಣೆ: ದೇಶದ ಜನತೆಗೆ ಆದರ್ಶಪ್ರಾಯವಾಗಿದ್ದ ಅಬ್ದುಲ್ ಕಲಾಂ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ದೇಶದೆಲ್ಲೆಡೆ ಏಳು ದಿನಗಳ ಕಾಲ ಶೋಕಾಚರಣೆ ಘೋಷಿಸಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಮಂಗಳವಾರ (ಜುಲೈ 28) ಸರ್ಕಾರಿ ಶಾಲಾ, ಕಾಲೇಜು, ಕಚೇರಿಗಳಿಗೆ ರಜೆ ಘೋಷಿಸಿದ್ದನ್ನು ರದ್ದುಪಡಿಸಲಾಯಿತು. ಕಲಾಂ ಆಶಯದಂತೆ ರಜೆಯನ್ನು ರದ್ದುಪಡಿಸಲಾಗಿದೆ ಎಂದು ಹೇಳಲಾಗಿದೆ. [ವಿವರ ಇಲ್ಲಿದೆ ನೋಡಿ]
ಅಂತ್ಯ ಸಂಸ್ಕಾರ: ಅಬ್ದುಲ್ ಕಲಾಂ ಅವರ ಪಾರ್ಥೀವ ಶರೀರವನ್ನು ಶಿಲ್ಲಾಂಗ್ ನಿಂದ ಮಂಗಳವಾರ ಬೆಳಗ್ಗೆ 6.30ಕ್ಕೆ ನವದೆಹಲಿಗೆ ಕರೆ ತರಲಾಗುತ್ತದೆ. ದೆಹಲಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಕಲಾಂ ಅವರ ಹುಟ್ಟೂರು ರಾಮೇಶ್ವರಂನಲ್ಲಿ ಅಂತ್ಯ ಸಂಸ್ಕಾರ ನಡೆಸಲಾಗುತ್ತದೆ. ಅಂತಿಮ ಸಂಸ್ಕಾರ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಸೇರಿ ಅನೇಕ ಗಣ್ಯರು ಪಾಲ್ಗೊಳ್ಳುವ ನಿರೀಕ್ಷೆ ಇದೆ.
ಜನ ಸಾಮಾನ್ಯರ ಪ್ರಥಮ ಪ್ರಜೆ: 1998ರಲ್ಲಿ ಪೋಖ್ರಾನ್ ಅಣ್ವಸ್ತ್ರ ಪರೀಕ್ಷೆ ಯಶಸ್ಸು ಪಡೆದ ಅಬ್ದುಲ್ ಕಲಾಂ ಅವರು 2002 ರಿಂದ 2007 ರ ತನಕ ದೇಶದ 11 ನೇ ರಾಷ್ಟ್ರಪತಿಯಾಗಿ ಕಾರ್ಯನಿರ್ವಹಿಸಿದರು. ಕಲಾಂ ಅವರ ಕಟ್ಟಕಡೆಯ ಟ್ವೀಟ್:
Going to Shillong.. to take course on Livable Planet earth at iim.With @srijanpalsingh and Sharma.
— APJ Abdul Kalam (@APJAbdulKalam) July 27, 2015 ಅವುಲ್ ಫಕೀರ್ ಜೈನುಲಬ್ದೀನ್ ಅಬ್ದುಲ್ ಕಲಾಂ ಅವರು ಸದಾ ಕಾಲ ತಮ್ಮ ಗುರು ಶಿವಶಂಕರ್ ಅಯ್ಯರ್, ರೆ. ಫಾದರ್ ಚಿನ್ನದೊರೈ ಅವರನ್ನು ಹಾಗೂ ಭಾರತದ ಸರ್ವಧರ್ಮ ಸಹಿಷ್ಣುತೆಯ ಶಕ್ತಿಯನ್ನು ಎಲ್ಲೆಡೆ ಸ್ಮರಿಸುತ್ತಿದ್ದರು.
ವೀಣಾವಾದನ, ಸಂಗೀತ, ಕನಸು ಹೀಗೆ ಸದಭಿರುಚಿಯ ಕಲೆ ಅರಿತಿದ್ದ ನಗುಮುಖದ ಕಲಾಂ ಅವರು ಮಕ್ಕಳ ಅಚ್ಚುಮೆಚ್ಚಿನ ಅಜ್ಜನಾಗಿ ಸದಾ ಸ್ಮರಣೀಯರಾಗಿ ಅಜರಾಮರವಾಗಿರುತ್ತಾರೆ. (ಒನ್ ಇಂಡಿಯಾ ಸುದ್ದಿ)
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications