Breaking News: ಮಾಜಿ ರಾಷ್ಟ್ರಪತಿ, ಪ್ರಣಬ್ ಮುಖರ್ಜಿ ವಿಧಿವಶ
ನವದೆಹಲಿ, ಆ. 31: ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ನಿಧನರಾಗಿದ್ದಾರೆ ಎಂದು ಅವರ ಪುತ್ರ ಅಭಿಜಿತ್ ಮುಖರ್ಜಿ ಅವರು ದುಃಖತಪ್ತರಾಗಿ ಪ್ರಕಟಿಸಿದ್ದಾರೆ.
Recommended Video
84 ವರ್ಷದ ಪ್ರಣಬ್ ಮುಖರ್ಜಿ ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಸೇನಾ ಆಸ್ಪತ್ರೆಯಲ್ಲಿ ಅವರಿಗೆ ಆಪರೇಷನ್ ಮಾಡಲಾಗಿತ್ತು. ಬಳಿಕ ಅವರ ಆರೋಗ್ಯ ಹದಗೆಟ್ಟಿತ್ತು. ಕೊರೊನಾವೈರಸ್ ಸೋಂಕಿನಿಂದಲೂ ಬಳಲುತ್ತಿದ್ದರು. ಬಂಗಾಳದಲ್ಲಿ 1935, ಡಿಸೆಂಬರ್ 11ರಂದು ಜನಿಸಿದ ಪ್ರಣಬ್ ಮುಖರ್ಜಿ ಕಾಂಗ್ರೆಸ್ ಮೂಲಕ ರಾಜಕೀಯ ಜೀವನ ಪ್ರಾರಂಭಿಸಿದರು. 2012ರಿಂದ 2017ರವರೆಗೆ ಭಾರತದ 13ನೇ ರಾಷ್ಟ್ರಪತಿಯಾಗಿ ಅತ್ಯುನ್ನತ ಹುದ್ದೆ ಅಲಂಕರಿಸಿದ್ದರು.

ಅಭಿಜಿತ್ ಮುಖರ್ಜಿ ಟ್ವೀಟ್ ಮಾಡಿ
With a Heavy Heart , this is to inform you that my father Shri #PranabMukherjee has just passed away inspite of the best efforts of Doctors of RR Hospital & prayers ,duas & prarthanas from people throughout India !
— Abhijit Mukherjee (@ABHIJIT_LS) August 31, 2020
I thank all of You 🙏
ಆರ್ ಆರ್ ಆಸ್ಪತ್ರೆಯ ನುರಿತ ವೈದ್ಯರ ಸತತ ಪ್ರಯತ್ನದ ನಡುವೆ ಚಿಕಿತ್ಸೆ ಫಲಕಾರಿಯಾಗದೆ ನನ್ನ ತಂದೆ ಶ್ರೀ ಪ್ರಣಬ್ ಮುಖರ್ಜಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಭಾರವಾದ ಹೃದಯದಿಂದ ತಿಳಿಸುತ್ತಿದ್ದೇನೆ. ದೇಶದ ವಿವಿಧೆಡೆಗಳಿಂದ ನನ್ನ ತಂದೆಗಾಗಿ ಪ್ರಾರ್ಥಿಸಿದ ಎಲ್ಲರಿಗೂ ನನ್ನ ನಮನಗಳು ಎಂದು ಟ್ವೀಟ್ ಮಾಡಿದ್ದಾರೆ.
84 ವರ್ಷದ ಪ್ರಣಬ್ ಮುಖರ್ಜಿ ಅವರು ಭಾರತ ಕಂಡ ಉತ್ತಮ ರಾಜಕೀಯ ಮುಖಂಡರಲ್ಲಿ ಒಬ್ಬರಾಗಿದ್ದರು. ಕಾಂಗ್ರೆಸ್ ಪಕ್ಷಕ್ಕೆ ನಿಷ್ಠರಾಗಿದ್ದ ಪ್ರಣಬ್ ಮುಖರ್ಜಿ ಅವರು ರಕ್ಷಣ, ವಿತ್ತ, ಬಾಹ್ಯ ಇಲಾಖೆ, ಆದಾಯ, ನೌಕಾ, ಸಾರಿಗೆ, ಸಂಪರ್ಕ ವ್ಯವಸ್ಥೆ, ಆರ್ಥಿಕ ಇಲಾಖೆ, ವಾಣಿಜ್ಯ ಹಾಗು ಉದ್ದಿಮೆ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.
ಬೆಂಗಾಳದ ಮಿರಾತಿ ಎಂಬಲ್ಲಿ ಜನಿಸಿದ ಪ್ರಣಬ್ ಅವರು ಎಂಎ, ಸ್ನಾತಕೋತ್ತರ(ರಾಜಕೀಯ), ಎಲ್ ಎಲ್ ಬಿ ಪದವೀಧರರಾಗಿದ್ದರು. ಉಪಾಧ್ಯಾಯರಾಗಿ, ಪತ್ರಕರ್ತರಾಗಿ ವೃತ್ತಿ ಬದುಕು ಆರಂಭಿಸಿದವರು ಕೊನೆಗೆ ತಮ್ಮ ತಂದೆಯ ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ತಮ್ಮಲ್ಲೂ ಬೆಳೆಸಿಕೊಂಡು ರಾಜಕೀಯ ರಂಗಕ್ಕೆ ಧುಮುಕಿದರು. ಕಾಂಗ್ರೆಸ್ ಪಕ್ಷದ ವಿವಿಧ ಹುದ್ದೆ, ಸಚಿವ ಸ್ಥಾನ ಪಡೆದು ಕೊನೆಗೆ ರೈಸಿನಾ ಹಿಲ್ಸ್ ನ ಮಾಲೀಕರಾಗಿ ದೇಶದ ಪ್ರಥಮ ಪ್ರಜೆಯಾಗಿ ಕಾರ್ಯ ನಿರ್ವಹಿಸಿದ್ದು ಈಗ ಇತಿಹಾಸ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications