ವೀಕ್ಷಕರ ಸಾಲಲ್ಲಿ ಕೂತು ಮೋದಿ ಮಾತಿಗೆ ತಲೆಯಾಡಿಸಿದ ಅಮರ್ ಸಿಂಗ್!
ಲಕ್ನೋ, ಜುಲೈ 30: ಒಂದಾನೊಂದು ಕಾಲದಲ್ಲಿ ಸಮಾಜವಾದಿ ಪಕ್ಷದ ಪ್ರಮುಖ ಮುಖಂಡರಲ್ಲೊಬ್ಬರಾಗಿದ್ದ ಅಮರ್ ಸಿಂಗ್ ಬಿಜೆಪಿ ಸೇರುತ್ತಾರಾ? ಈ ವದಂತಿ ಹಲವು ದಿನಗಳಿಂದ ಹರಿದಾಡುತ್ತಿದೆ. ಅದಕ್ಕೆ ಪುಷ್ಠಿ ನೀಡುವಂಥ ಘಟನೆಗಳೂ ನಡೆಯುತ್ತಿದೆ.
ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನರೇಂದ್ರ ಮೋದಿ ಅವರು ಉದ್ಯಮಿಗಳನ್ನುದ್ದೇಶಿಸಿ ಮಾತನಾಡುತ್ತಿದ್ದ ಸಮಯದಲ್ಲಿ ಅಮರ್ ಸಿಂಗ್ ಅವರೂ ಹಾಜರಿದ್ದರು. "ಯಾರಿಗೆ ಯಾವುದೇ ಕೆಲಸವನ್ನು ಜನರೆದುರಲ್ಲಿ ಮಾಡುವುದಕ್ಕೆ ಧೈರ್ಯವಿಲ್ಲವೋ ಅಂಥವರು ಎಲ್ಲವನ್ನೂ ಪರದೆಯ ಹಿಂದೆ ಮಾಡುತ್ತಾರೆ. ಈ ಕುರಿತು ಸಮಾಜವಾದಿ ಪಕ್ಷದ ಮಾಜಿ ಮುಖಂಡ ಅಮರ್ ಸಿಂಗ್ ನಿಮಗೆ ಮಾಹಿತಿ ನೀಡುತ್ತಾರೆ. ಅವರು ಇಲ್ಲಿಯೇ ಕುಳಿತಿದ್ದಾರೆ" ಎಂದು ಪ್ರಧಾನಿ ಮೋದಿ ಹೇಳಿದರು. ಇದರಿಂದ ಸಭೆಯಲ್ಲಿದ್ದ ಎಲ್ಲರೂ ಒಮ್ಮೆ ನಕ್ಕರು. ಅಮರ್ ಸಿಂಗ್ ಅವರೂ ನಕ್ಕು ಪ್ರತಿಕ್ರಿಯಿಸಿದರು.
ಈ ಸಭೆ ನಡೆದ ಒಂದು ಗಂಟೆಯ ನಂತರ ಅಮರ್ ಸಿಂಗ್ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಇಬ್ಬರ ನಡುವೆ ನಡೆದ ಮಾತುಕತೆಯ ವಿವರ ಲಭ್ಯವಾಗಿಲ್ಲವಾದರೂ, 2019 ರ ಲೋಕಸಭಾ ಚುನಾವಣೆಗೂ ಮುನ್ನ ಈ ಭೇಟಿ ಮಹತ್ವದ್ದೆನ್ನಿಸಿದೆ. ಅಮರ್ ಸಿಂಗ್ ಉತ್ತರ ಪ್ರದೇಶದ ಪ್ರಭಾವೀ ನಾಯಕರಲ್ಲೊಬ್ಬರು. ಅವರು ಬಿಜೆಪಿ ಪಕ್ಷ ಸೇರಿದ್ದೇ ಆದಲ್ಲಿ ಎಸ್ಪಿ ಸೇರಿದಂತೆ ಇನ್ನಿತರ ವಿರೋಧಪಕ್ಷಗಳಿಗೆ ನಷ್ಟ ಗ್ಯಾರಂಟಿ! ಉತ್ತರ ಪ್ರದೇಶದಲ್ಲಿ ಒಟ್ಟು 80 ಲೋಕಸಭಾ ಕ್ಷೇತ್ರಗಳಿರುವುದರಿಂದ ಈ ರಾಜ್ಯ ಬಹಳ ಮಹತ್ವದ್ದೆನ್ನಿಸಿದೆ.
-
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ












Click it and Unblock the Notifications