Buddhadeb Bhattacharya: ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ ವಿಧಿವಶ
ಕೋಲ್ಕತ್ತಾ, ಆಗಸ್ಟ್ 08: ಕಮ್ಯುನಿಸ್ಟ್ ನಾಯಕ, ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ವಿಧಿವಶರಾದರು. ನವೆಂಬರ್ 2000 ದಿಂದ ಮೇ 2011ರ ತನಕ ಬುದ್ಧದೇವ್ ಭಟ್ಟಾಚಾರ್ಯ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿದ್ದರು. ಹಲವು ಗಣ್ಯರು ಮಾಜಿ ಮುಖ್ಯಮಂತ್ರಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
80 ವರ್ಷದ ಬುದ್ಧದೇವ್ ಭಟ್ಟಾಚಾರ್ಯ ದಕ್ಷಿಣ ಕೋಲ್ಕತ್ತಾದಲ್ಲಿರುವ ನಿವಾಸದಲ್ಲಿ ಗುರುವಾರ ಮುಂಜಾನೆ ಮೃತಪಟ್ಟಿದ್ದಾರೆ. ಹಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಉಸಿರಾಟದ ಸಮಸ್ಯೆಯನ್ನು ಎದುರಿಸುತ್ತಿದ್ದ ಅವರು ಕೆಲವು ದಿನಗಳ ಹಿಂದೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.

ಕಳೆದ ವರ್ಷ ಆಸ್ಪತ್ರೆಯಲ್ಲಿ ಬುದ್ಧದೇವ್ ಭಟ್ಟಾಚಾರ್ಯ ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿತ್ತು. ಆದರೆ ಅವರು ಅದರಿಂದ ಚೇತರಿಸಿಕೊಂಡಿದ್ದರು. ಬುಧವಾರ ಮುಂಜಾನೆ ಅವರು ವಿಧಿವಶರಾಗಿದ್ದು, ಪತ್ನಿ ಮೀರಾ ಮತ್ತು ಮಗ ಸುಚೇತನ ಅವರನ್ನು ಆಗಲಿದ್ದಾರೆ.
ಮಾಜಿ ಮುಖ್ಯಮಂತ್ರಿಗಳು: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಸಿಪಿಎಂ ಪಕ್ಷದ ತೀರ್ಮಾನ ಕೈಗೊಳ್ಳುವ ಸಮಿತಿಯ ಮಾಜಿ ಸದಸ್ಯರಾಗಿದ್ದರು. ಜ್ಯೋತಿ ಬಸು ಅವರ ಬಳಿಕ 2000 ದಿಂದ 2011ರ ತನಕ ರಾಜ್ಯದ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಣೆ ಮಾಡಿದ್ದರು.
2011ರ ವಿಧಾನಸಭೆ ಚುನಾವಣೆಯಲ್ಲಿ ಬುದ್ಧದೇವ್ ಭಟ್ಟಾಚಾರ್ಯ ಸಿಪಿಎಂ ಪಕ್ಷವನ್ನು ಮುನ್ನಡೆಸಿದ್ದರು. ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಐತಿಹಾಸಿಕ ಜಯ ಸಾಧಿಸಿತ್ತು ಮತ್ತು 34 ವರ್ಷದ ರಾಜ್ಯದಲ್ಲಿನ ಕಮ್ಯುನಿಷ್ಟ್ ಆಡಳಿತವನ್ನು ಅಂತ್ಯಗೊಳಿಸಿತ್ತು.
ಕೋಲ್ಕತ್ತಾದ ಪ್ರತಿಷ್ಠಿತ ಪ್ರೆಸಿಡೆನ್ಸಿ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಬುದ್ಧದೇವ್ ಭಟ್ಟಾಚಾರ್ಯ ರಾಜಕೀಯಕ್ಕೆ ಬರುವ ಮೊದಲು ಶಿಕ್ಷಕರಾಗಿದ್ದರು. ಶಾಸಕರಾಗಿ, ಸಚಿವರಾಗಿ ಕೆಲಸ ಮಾಡಿದ್ದ ಅವರು 2000ದಲ್ಲಿ ಜ್ಯೋತಿ ಬಸು ಅಧಿಕಾರದಿಂದ ಇಳಿಯುವ ಮೊದಲು ಉಪ ಮುಖ್ಯಮಂತ್ರಿಯಾಗಿದ್ದರು.
ಬುದ್ಧದೇವ್ ಭಟ್ಟಾಚಾರ್ಯ ನೇತೃತ್ವದಲ್ಲಿ 2001ರಲ್ಲಿ ವಿಧಾನಸಭೆ ಚುನಾವಣೆಯನ್ನು ಎದುರಿಸಿ ಸಿಪಿಎಂ ಪಕ್ಷ ಅಧಿಕಾರವನ್ನು ಪಡೆದಿತ್ತು. 2006ರ ತನಕ ಬುದ್ಧದೇವ್ ಭಟ್ಟಾಚಾರ್ಯ ನೇತೃತ್ವದ ಸರ್ಕಾರ ಜ್ಯೋತಿ ಬಸು ಸರ್ಕಾರಕ್ಕೆ ಹೋಲಿಕೆ ಮಾಡಿದರೆ ಹಲವು ಬದಲಾವಣೆಗಳನ್ನು ತಂದಿತ್ತು.
2006ರ ಚುನಾವಣೆಯಲ್ಲಿ ಕೇವಲ 30 ಸೀಟು ಗೆದ್ದಿದ್ದ ಟಿಎಂಸಿ ಪಕ್ಷ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಸಿಂಗೂರಿನಲ್ಲಿ ನ್ಯಾನೊ ಕಾರು ತಯಾರಿಕಾ ಘಟಕ ಸ್ಥಾಪನೆ ಮಾಡುವುದರ ವಿರುದ್ಧ ಬೃಹತ್ ಹೋರಾಟ ನಡೆಸಿದ್ದರು. ಅಂತಿಮವಾದಿ ಟಾಟಾ ಮೋಟರ್ಸ್ಗೆ ಗುಜರಾತ್ಗೆ ಘಟಕ ಸ್ಥಳಾಂತರ ಮಾಡಿತ್ತು.
ಈ ಹೋರಾಟ, ಪ್ರತಿಭಟನೆ, ಹಿಂಸಾಚಾರ ಬುದ್ಧದೇವ್ ಭಟ್ಟಾಚಾರ್ಯ ಸರ್ಕಾರಕ್ಕೆ ಭಾರೀ ಹಿನ್ನಡೆ ಉಂಟು ಮಾಡಿತ್ತು. ನಂದಿಗ್ರಾಮದಲ್ಲಿ ಟಾಟಾ ಮೋಟರ್ಸ್ಗೆ ಭೂ ಸ್ವಾಧೀನ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ 14 ಜನರು ಮೃತಪಟ್ಟಿದ್ದರು. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಾಜಕೀಯ ಬದಲಾವಣೆಗೂ ಕಾರಣವಾಯಿತು.
2011ರ ಚುನಾವಣೆಯಲ್ಲಿ ಬುದ್ಧದೇವ್ ಭಟ್ಟಾಚಾರ್ಯ ಸರ್ಕಾರದ ವಿರುದ್ಧದ ಆಡಳಿತ ವಿರೋಧ ಅಲೆ ಟಿಎಂಸಿಗೆ ವರವಾಯಿತು. ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷ 2011ರ ಚುನಾವಣೆಯಲ್ಲಿ 184 ಸೀಟುಗಳಲ್ಲಿ ಜಯಗಳಿಸುವ ಮೂಲಕ ರಾಜ್ಯದಲ್ಲಿ ಕಮ್ಯುನಿಷ್ಟ್ ಆಡಳತಿ ಅಂತ್ಯಗೊಳಿಸಿತು.
-
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ?












Click it and Unblock the Notifications