ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇರಳ: ಆರ್ ಎಸ್ಎಸ್ ಕಛೇರಿ ಬಳಿ ಬಾಂಬ್ ಸ್ಫೋಟ; ನಾಲ್ವರಿಗೆ ಗಾಯ

ಕೋಝಕ್ಕೋಡ್ ಜಿಲ್ಲೆಯ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ ಎಸ್ಎಸ್) ಕಚೇರಿ ಬಳಿ ಗುರುವಾರ ರಾತ್ರಿ 9 ಗಂಟೆಗೆ ಸಂಭವಿಸಿದ್ದ ಸ್ಫೋಟ.

|
Google Oneindia Kannada News

ಕೋಝಿಕ್ಕೋಡ್ (ಕೇರಳ), ಮಾರ್ಚ್ 3: ಜಿಲ್ಲೆಯ ನಾದಪುರಂನ ಕಲ್ಲಾಚಿ ಎಂಬಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ ಎಸ್ಎಸ್) ಕಚೇರಿಯ ಬಳಿ ಗುರುವಾರ (ಮಾರ್ಚ್ 3) ರಾತ್ರಿ ಸುಮಾರು 9 ಗಂಟೆಗೆ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಬಿಜೆಪಿಯ ನಾಲ್ವರು ಕಾರ್ಯಕರ್ತರು ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ಬಾಬು, ವಿನೀಶ್, ಸುಧೀರ್ ಹಾಗೂ ಸುನಿಲ್ ಎಂದು ಗುರುತಿಸಲಾಗಿದ್ದು, ಇವರಲ್ಲಿ ಬಾಬು ಹಾಗೂ ವಿನೀಶ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.[ಪಿಣರಾಯಿ ತಲೆಗೆ ಆರ್.ಎಸ್.ಎಸ್ ನಾಯಕನಿಂದ 1 ಕೋಟಿ ಬಹುಮಾನ ಘೋಷಣೆ!]

Four BJP workers injured in a blast near RSS office of Nadapuram

ಅಲ್ಪ ಪ್ರಮಾಣದ ಗಾಯಗಳಿಂದ ನರಳುತ್ತಿರುವ ಸುಧೀರ್, ಸುನಿಲ್ ಅವರನ್ನು ಕಲ್ಲಾಚಿಯ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಮನೋರಮಾ ಸುದ್ದಿ ಸಂಸ್ಥೆ ತಿಳಿಸಿದೆ.[ನಟಿಯ ಲೈಂಗಿಕ ದೌರ್ಜನ್ಯ : ಸುನಿಗೆ ಸುಳ್ಳು ಪತ್ತೆ ಪರೀಕ್ಷೆ]

ಘಟನೆಯಿಂದಾಗಿ ನಾದಪುರಂನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ನಾದಪುರಂನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದಾರೆ.

English summary
Four Bharatiya Janata party (BJP) Workers injured when a bomb blast occured near RSS office in Kallachi of Nadapuram, Kozhikode district, Kerala on March 3rd 9 p.m.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X