ದೀಪಾವಳಿಗೆ ಭರ್ಜರಿ ಗಿಫ್ಟ್ ಸಿಗಲಿದೆ ಫ್ರೀ ಸಿಲಿಂಡರ್ ಎಲ್ಲಿ, ಯಾಕೆ
Deepavali Festival: ದೀಪಾವಳಿ ಹಬ್ಬಕ್ಕೆ ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದೆ. ಈ ಸಂದರ್ಭದಲ್ಲೇ ಜನರಿಗೆ ಅದ್ಭುತವಾದ ಗಿಫ್ಟ್ವೊಂದು ಸಿಕ್ಕಿದೆ. ಈಗಾಗಲೇ ದೇಶದ ವಿವಿಧ ಭಾಗದಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ಗಗನಮುಖಿಯಾಗಿದೆ. ಈ ನಡುವೆ ಈ ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಉಚಿತವಾಗಿ ನೀಡುವ ಮೂಲಕ ದೀಪವಾವಳಿಗೆ ಭರ್ಜರಿ ಗಿಫ್ಟ್ ನೀಡಲಾಗುತ್ತಿದೆ.
ದೀಪಾವಳಿಗೆ ಕೆಲವೇ ದಿನಗಳು ಬಾಕಿ ಉಳಿದಿರುವಾಗ ಆಂಧ್ರಪ್ರದೇಶದ ಜನರಿಗೆ ಭರ್ಜರಿ ಗಿಫ್ಟ್ ಸಿಕ್ಕಿದೆ. ನೆರೆಯ ಆಂಧ್ರಪ್ರದೇಶದಲ್ಲಿ ಅರ್ಹ ಫಲಾನುಭವಿ ಮಹಿಳೆಯರಿಗೆ ಉಚಿತವಾಗಿ ಅಡುಗೆ ಅನಿಲ (ಗ್ಯಾಸ್ ಸಿಲಿಂಡರ್) ಸಿಲಿಂಡರ್ ನೀಡಲಾಗುತ್ತಿದೆ. ಈ ಯೋಜನೆಗೆ ದೀಪಂ ಎಂದು ಹೆಸರಿಡಲಾಗಿದೆ. ಆಂಧ್ರಪ್ರದೇಶದ ಪ್ರಮುಖ ಯೋಜನೆಗಳಲ್ಲಿ ಒಂದಾಗಿರುವ ದೀಪಂ ಯೋಜನೆಗೆ ಅಕ್ಟೋಬರ್ 31ರಂದು ಚಾಲನೆ ನೀಡುವುದಕ್ಕೆ ಆಂಧ್ರಪ್ರದೇಶ ಸರ್ಕಾರ ನಿರ್ಧರಿಸಿದ್ದು, ದೀಪವಾಳಿಗೆ ಈ ರಾಜ್ಯದ ಜನರಿಗೆ ಭರ್ಜರಿ ಗಿಫ್ಟ್ ಸಿಕ್ಕಂತಾಗಿದೆ.

ಚುನಾವಣೆ ಭರವಸೆ: ಆಂಧ್ರಪ್ರದೇಶದಲ್ಲಿ ಈಚೆಗೆ ವಿಧಾನಸಭೆ ಚುನಾವಣೆ ನಡೆದಿದ್ದು, ತೆಲುಗುದೇಶಂ ಪಾರ್ಟಿ ಹಾಗೂ ಜನಸೇನಾ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿ ಇದೆ. ಚುನಾವಣೆಗೂ ಮುಂಚೆ ಟಿಡಿಪಿ ಹಲವು ಪ್ರಮುಖ ಭರವಸೆಗಳನ್ನು ನೀಡಿತ್ತು. ಅದರಲ್ಲಿ ಪ್ರತಿ ವರ್ಷ ಅರ್ಹ ಮಹಿಳೆಯರಿಗೆ ಮೂರು ಗ್ಯಾಸ್ ಸಿಲಿಂಡರ್ಗಳನ್ನು ನೀಡುವುದು ಸಹ ಸೇರಿದೆ. ಈ ಭರವಸೆಗಳನ್ನು ಇದೀಗ ಈಡೇರಿಸಲು ಆಂಧ್ರಪ್ರದೇಶ ಸರ್ಕಾರ ಮುಂದಾಗಿದೆ.
ಚುನಾವಣೆಗೂ ಮುಂಚೆ ಆಂಧ್ರಪ್ರದೇಶದಲ್ಲಿ ಅಧಿಕಾರಕ್ಕೆ ಬಂದರೆ ವರ್ಷಕ್ಕೆ ಮೂರು ಗ್ಯಾಸ್ ಸಿಲಿಂಡರ್ ಸೇರಿದಂತೆ ಆರು ಪ್ರಮುಖ ಭರವಸೆಗಳನ್ನು ನೀಡಿತ್ತು. ಈಚೆಗೆ ಸಭೆ ನಡೆಸಿರುವ ಚಂದ್ರಬಾಬು ನಾಯ್ಡು ಅವರು ಅಮರಾವತಿಯ ಸಿಬ್ಬಂದಿ ಸಚಿವಾಲಯದಲ್ಲಿ ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ದೀಪಾವಳಿ ಸಂದರ್ಭದಲ್ಲಿ ಗ್ಯಾಸ್ ಸಿಲಿಂಡರ್ ನೀಡುವ ಸಂಬಂಧ ಸಿದ್ಧತೆ ಮಾಡಿಕೊಳ್ಳುವಂತೆ ಈಗಾಗಲೇ ಸೂಚನೆ ನೀಡಲಾಗಿತ್ತು. ಆ ಸೂಚನೆಗಳನ್ನು ಇದೀಗ ಪರಿಶೀಲನೆ ಮಾಡಲಾಗಿದೆ.
ವಿರೋಧ ಪಕ್ಷಗಳು ಪ್ರಶ್ನಿಸಿದ್ದವು: ಚುನಾವಣೆ ಪೂರ್ವದಲ್ಲಿ ನೀಡಿದ್ದ ಆರು ಪ್ರಮುಖ ಭರವಸೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆಂಧ್ರಪ್ರದೇಶದ ವಿರೋಧ ಪಕ್ಷಗಳು ಆರೋಪಿಸಿದ್ದವು. ಅಲ್ಲದೇ ಆಂಧ್ರಪ್ರದೇಶದಲ್ಲಿ ಚುನಾವಣೆ ವೇಳೆ ಚಂದ್ರಬಾಬು ನಾಯ್ಡು ಅವರು ಭಾರೀ ದೊಡ್ಡ ದೊಡ್ಡ ಭರವಸೆಗಳನ್ನೇ ನೀಡಿದ್ದರು. ಆದರೆ, ಅವುಗಳನ್ನು ಸಾಕಾರಗೊಳಿಸದೆ ಲಡ್ಡು ವಿವಾದವನ್ನು ಮುನ್ನೆಲೆಗೆ ತಂದಿದ್ದಾರೆ ಎಂದು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ವೈಎಸ್ಆರ್ ಕಾಂಗ್ರೆಸ್ನ ಜಗನಗಗ ಮೋಹನ್ ರೆಡ್ಡಿ ಅವರು ದೂರಿದ್ದರು.
ಆಂಧ್ರಪ್ರದೇಶದಲ್ಲಿ ಚುನಾವಣೆ ಪೂರ್ವದಲ್ಲಿ ನೀಡಿದ್ದ ಆರು ಪ್ರಮುಖ ಭರವಸೆಗಳನ್ನು ಶೀಘ್ರ ಈಡೇರಿಸಬೇಕು ಎಂದು ಅವರು ಒತ್ತಾಯ ಮಾಡಿದ್ದರು.
ಆಂಧ್ರಪ್ರದೇಶದಲ್ಲಿ ಆರು ಪ್ರಮುಖ ಭರವಸೆಗಳನ್ನು ನೀಡಿಯೇ ತೆಲುಗುದೇಶಂ ಪಕ್ಷವು ಚುನಾವಣೆಯಲ್ಲಿ ಸ್ಪರ್ಧೆ ಮಾಡಿತ್ತು. ಈ ಬಾರಿ ತೆಲುಗುದೇಶಂ ಪಾರ್ಟಿ ಹಾಗೂ ಆಂಧ್ರಪ್ರದೇಶದ ನಟ ಹಾಗೂ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಪಾರ್ಟಿ ಭರ್ಜರಿ ಜಯಗಳಿಸಿದೆ. ವೈಎಸ್ಆರ್ ಕಾಂಗ್ರೆಸ್ ಈ ಬಾರಿ ನೆಲಕ್ಕಚ್ಚಿದೆ.
-
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral -
LPG ಪೂರೈಕೆ ವ್ಯತ್ಯಯ: ಬೆಂಗಳೂರಿನ ಪಿಜಿಗಳಲ್ಲೂ ಆಹಾರ ಪೂರೈಕೆ ಸ್ಥಗಿತದ ಭೀತಿ, ಆತಂಕದಲ್ಲಿ 10 ಲಕ್ಷ ಮಂದಿ -
LPG: ಬೆಂಗಳೂರಿಗೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಪೂರೈಕೆ ತಕ್ಷಣವೇ ಆರಂಭಿಸಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ












Click it and Unblock the Notifications