Free LPG Cylinder: ಉಚಿತ ಎಲ್ಪಿಜಿ ಸಿಲಿಂಡರ್ ಬಗ್ಗೆ ಬಿಗ್ ಅಪ್ಡೇಟ್
ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ದೇಶದ ಎಲ್ಲ ಮಹಿಳೆಯರಿಗೆ ಎಲ್ಪಿಜಿ ಸಿಲಿಂಡರ್ ಸಂಪರ್ಕ ನೀಡುವ ಮೂಲಕ ಕ್ರಾಂತಿ ಮಾಡುತ್ತಿದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಉಚಿತ ಸಿಲಿಂಡರ್ಗಳನ್ನು ನೀಡಲಾಗುತ್ತಿದೆ. ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ಬಡತನ ರೇಖೆಗಿಂತ ಕೆಳಗಿರುವ ಮಹಿಳೆಯರಿಗೆ ಉಚಿತವಾಗಿ ಅಡುಗೆ ಅನಿಲವನ್ನು ಪೂರೈಕೆ ಮಾಡುವ ಗುರಿ ಹೊಂದಿದೆ. ಇದು ಯಾವ ಮಹಿಳೆಯರಿಗೆ ಉಚಿತವಾಗಿ ಸಿಗಲಿದೆ? ಈ ಸೇವೆ ಪಡೆದುಕೊಳ್ಳುವುದು ಹೇಗೆ? ಎನ್ನುವ ವಿವರ ಇಲ್ಲಿದೆ.
ಈ ಹಿಂದೆ ಅಡುಗೆಗಾಗಿ ಮನೆಗಳಲ್ಲಿ ಒಲೆ ಬಳಕೆ ಮಾಡಲಾಗುತ್ತಿತ್ತು. ಈ ಸಾಂಪ್ರದಾಯಿಕ ಅಡುಗೆ ವಿಧಾನದಿಂದ ಮಹಿಳೆಯರ ಆರೋಗ್ಯದ ಮೇಲೆ ಪರಿಣಾಮವೂ ಬೀರುತ್ತಿತ್ತು. ಇದನ್ನು ಮನಗಂಡ ಕೇಂದ್ರ ಸರ್ಕಾರವು ಪ್ರತಿ ಕುಟುಂಬಕ್ಕೆ ಎಲ್ಪಿಜಿ ಸಿಲಿಂಡರ್ ಸೇವೆ ಒದಗಿಸುವ ಗುರಿ ಹಾಕಿಕೊಂಡಿದೆ. ಅಲ್ಲದೆ ಸಬ್ಸಿಡಿ ಮೂಲಕ ಎಲ್ಪಿಜಿ ಸಿಲಿಂಡರ್ ಅನ್ನು ಮನೆ ಬಾಗಿಲಿಗೆ ಪೂರೈಕೆಯೂ ಮಾಡಲಾಗುತ್ತಿದೆ. ಇದಕ್ಕಾಗಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು 2016ರಲ್ಲೇ ಶುರು ಮಾಡಲಾಯಿತು.

ಗ್ರಾಮೀಣ ಮತ್ತು ವಂಚಿತ ಕುಟುಂಬಗಳಿಗೆ ಎಲ್ಪಿಜಿ ಸಿಲಿಂಡರ್ ಲಭ್ಯವಾಗುವಂತೆ ಮಾಡುವುದು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಪ್ರಮುಖ ಉದ್ದೇಶವಾಗಿದೆ.ಮೋದಿ ಸರ್ಕಾರದ ಈ ಮಹತ್ವದ ಯೋಜನೆಯಲ್ಲಿ ಇದುವರೆಗೂ ದೇಶಾದ್ಯಂತ ಒಂದು ಕೋಟಿಗೂ ಹೆಚ್ಚಿನ ಮಹಿಳೆಯರು ಇದರ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಈ ಯೋಜನೆಯಲ್ಲಿ ಫಲಾನುಭವಿಗಳಿಗೆ 14.2 ಕೆಜಿ ದೇಶೀಯ ಅಡುಗೆ ಅನಿಲ ಸಿಲಿಂಡರ್ (ವರ್ಷಕ್ಕೆ ಒಂಬತ್ತು) ಅನ್ನು 300 ರೂ.ಗಳಲ್ಲಿ ನೀಡಲಾಗುತ್ತದೆ.
ಮಹಿಳೆಯರು ಮತ್ತು ಮಕ್ಕಳಿಗೆ ಶುದ್ಧ ಅಡುಗೆ ಇಂಧನವಾದ ಎಲ್ಪಿಜಿ ಒದಗಿಸುವ ಮೂಲಕ ಅವರ ಆರೋಗ್ಯವನ್ನು ಕಾಪಾಡುವುದು ಈ ಯೋಜನೆಯ ಗುರಿ. ಇದರಿಂದಾಗಿ ಅವರು ಹೊಗೆಯಾಡುವ ಅಡುಗೆಮನೆಗಳಲ್ಲಿ ಮಹಿಳೆಯರು ತಮ್ಮ ಆರೋಗ್ಯವನ್ನು ಅಪಾಯಕ್ಕೆ ಸಿಲುಕಿಸಬೇಕಾಗಿಲ್ಲ. ಈ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ 2016ರ ಮೇ 1ರಂದು ಉತ್ತರ ಪ್ರದೇಶದಲ್ಲಿ ಪ್ರಾರಂಭಿಸಿದರು. ಈ ಯೋಜನೆಯಡಿ ಬಿಪಿಎಲ್ ಕುಟುಂಬಗಳಿಗೆ 5 ಕೋಟಿ ಎಲ್ಪಿಜಿ ಸಂಪರ್ಕಗಳನ್ನು ಒದಗಿಸುವ ಗುರಿ ಹೊಂದಿತ್ತು.

ಭಾರತ ಸರ್ಕಾರದ ಒಂದು ಯೋಜನೆಯು ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಅತ್ಯಂತ ಕಡಿಮೆ ಬೆಲೆಗೆ ಅಡುಗೆ ಅನಿಲವನ್ನು ಪೂರೈಸುವುದು ಈ ಯೋಜನೆಯ ಮುಖ್ಯ ಉದ್ದೇಶ. 14.5 ಕೆ.ಜಿ ತೂಕದ 12 ಇಂಧನ ಸಿಲಿಂಡರ್ಗಳಿಗೆ ವರ್ಷಕ್ಕೆ 200 ರೂಪಾಯಿ ಸಬ್ಸಿಡಿ ನೀಡಲು ಸಚಿವ ಸಂಪುಟ ಅನುಮೋದನೆ ನೀಡಿತ್ತು. 2023-24ರ ಹಣಕಾಸು ವರ್ಷಕ್ಕೆ 7,680 ರೂಪಾಯಿ ಕೋಟಿ ಭರಿಸಲಾಗಿತ್ತು. ಈ ಯೋಜನೆಯ ಗ್ರಾಹಕರ ಸರಾಸರಿ ಬಳಕೆಯು 2021-22ರಲ್ಲಿ ಶೇ 20ರಷ್ಟು ಹೆಚ್ಚಾಗಿತ್ತು.
-
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral












Click it and Unblock the Notifications