PMGKAY: ಭಾರತದಲ್ಲಿ ಉಚಿತ ಅಕ್ಕಿ ವಿತರಣೆ ಯೋಜನೆ ವಿಸ್ತರಣೆ, ಎಷ್ಟು ವರ್ಷ? ವರದಿ-ವಿವರ
ಬೆಂಗಳೂರು, ನವೆಂಬರ್ 06: ಪಂಚರಾಜ್ಯ ಚುನಾವಣೆಗೆ ಉತ್ಸುಕತೆಯಿಂದ ಕೇಂದ್ರ ಬಿಜೆಪಿ ಸರ್ಕಾರ ರ್ಯಾಲಿ ನಡೆಸುತ್ತಿದೆ. ರ್ಯಾಲಿಯ ಸಮಾವೇಶದಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿಯವರು ಉಚಿತ ಪಡಿತರ ವಿತರಣೆಯನ್ನು ಮುಂದಿನ ಐದು ವರ್ಷದವರೆಗೆ ಮುಂದುವರಿಸುವುದಾಗಿ ಘೋಷಿಸಿದ್ದಾರೆ.
ಮಧ್ಯಪ್ರದೇಶ ಮತ್ತು ಛತ್ತೀಸ್ಗಢದಲ್ಲಿ ಚುನಾವಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಮುಂದಿನ ಐದು ವರ್ಷಗಳು ದೇಶದ 80 ಕೋಟಿ ಜನರ ಮನೆಯಲ್ಲಿ ಒಲೆ ಉರಿಯಲಿದೆ. ಹಸಿವಿಗಾಗಿ ಹೋರಾಟ ಅಂತ್ಯಗೊಳ್ಳಲಿದೆ. ಇದು 'ನಮ್ಮ ಸರ್ಕಾರದ ಗ್ಯಾರಂಟಿ' ಎಂದು ಶನಿವಾರ ಮತ್ತು ಭಾನುವಾರದ ತಮ್ಮ ಭಾಷಣಗಳಲ್ಲಿ ಪ್ರಧಾನಿ ಮೋದಿಯವರು ಆಶ್ವಾಸನೆ ನೀಡಿದ್ದಾರೆ.

ಅರ್ಹ ಫಲಾನುಭವಿಗಳಿಗೆ ಉಚಿತ ಪಡಿತರ ವಿತರಿಸುವ ಯೋಜನೆಯಾದ 'ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ (PMGKAY) ಯೋಜನೆ'ಯನ್ನು ಇನ್ನೂ ಐದು ವರ್ಷಗಳವರೆಗೆ ವಿಸ್ತರಿಸುವುದಾಗಿ ಪ್ರಧಾನಿ ಹೇಳಿದ್ದಾರೆ. ಚುನಾವಣೆ ಹೊತ್ತಲ್ಲಿ ಇಂತಹ ಘೋಷಣೆಗಳು ಗೆಲ್ಲುವ ತಂತ್ರಗಾರಿಕೆಯೂ ಹೌದು ಎನ್ನಲಾಗುತ್ತಿದೆ.
ಡಿಸೆಂಬರ್ಗೆ ಯೋಜನೆ ಮುಕ್ತಾಯದ ಸಮಯ
ಕೊರೊನಾ ನಂತರ PMGKAY ಅಡಿ ಕಳೆದ ಮೂರು ವರ್ಷಗಳಿಂದ ದೇಶದಲ್ಲಿ ಬಡವರಿಗೆ ಉಚಿತ ಪಡಿತರ ನೀಡಲಾಗುತ್ತಿದೆ. ಮುಂದಿನ ಡಿಸೆಂಬರ್ ಅಂತ್ಯಕ್ಕೆ ಉಚಿತ ಯೋಜನೆ ಮುಕ್ತಾಯಗೊಳ್ಳಲಿದೆ. ಈ ಸಮಯದಲ್ಲಿ ಮತ್ತೆ ಅದನ್ನು ಮುಂದಿನ ಐದು ವರ್ಷಗಳ ವರೆಗೆ ವಿಸ್ತರಣೆ ಮಾಡಲು ಕೇಂದ್ರ ಮನಸ್ಸು ಮಾಡಿದೆ. ಆಡಳಿತ ಪಕ್ಷದ ಈ ಚುನಾವಣಾ ತಂತ್ರವು ವಿಪಕ್ಷಗಳ ಮೈತ್ರಿ ಕೂಟವಾದ 'ಇಂಡಿಯಾ'ಗೆ (INDIA) ನುಂಗಲಾರದ ತುತ್ತಾಗಲಿದೆ.
ಕೋವಿಡ್ ಸಾಂಕ್ರಾಮಿಕ ವರ್ಷ 202ರಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ-2013 (NFSA) ಅಡಿ ಕೇಂದ್ರ ಸರ್ಕಾರ ದೇಶದ ಪಡಿತರ ಕಾರ್ಡ್ ಹೊಂದಿದ ಅರ್ಹರಿಗೆ ಐದು ಕೆ.ಜಿ ಉಚಿತ ಆಹಾರ ಧಾನ್ಯ ಒದಗಿಸಲು ಈ PMGKAY ಪರಿಚಯಿಸಲಾಯಿತು. ಅತ್ಯಂತ ಕಡಿಮೆ ಬೆಲೆಗೆ ಆಹಾರ ಧಾನ್ಯಗಳನ್ನು ಪಡೆಯಲು ಯುಪಿಎ ಸರ್ಕಾರವು ಅವಧಿಯಲ್ಲಿ ಜನರಿಗೆ ಅರ್ಹತೆ ನೀಡಲಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

ಯೋಜನೆಯ ಲಾಭ ಪಡೆಯುವವರ ಸಂಖ್ಯೆ-ಮಾಹಿತಿ
ಕಳೆದ ವರ್ಷ 2022ರಲ್ಲಿ ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ವೇಳೆ ಈ ಯೋಜನೆಯನ್ನು 2022 ರಿಂದ 2023ರ ಡಿಸೆಂಬರ್ ವರೆಗೆ ಮತ್ತೆ ವಿಸ್ತರಣೆ ಮಾಡಲಾಯಿತು. ಸದ್ಯ ಉಚಿತ ಆಹಾರ ಧಾನ್ಯ ವಿತರಣೆ ಯೋಜನೆ ಮುಕ್ತಾಯಕ್ಕೆ ಇನ್ನೊಂದು ತಿಂಗಳಿರುವಾಗಲೇ ಮತ್ತೆ ಐದು ವರ್ಷ ವಿಸ್ತರಣೆ ಮಾಡುವುದಾಗಿ ಸ್ವತಃ ಪ್ರಧಾನಿಯೇ ಘೋಷಿಸಿದ್ದಾರೆ.
PMGKAY ಯೋಜನೆಯು NFSA ಅಡಿಯಲ್ಲಿ ಎರಡು ರೀತಿಯ ಪಡಿತರ ಚೀಟಿದಾರರನ್ನು ಒಳಗೊಂಡಿದೆ. 'ಅಂತ್ಯೋದಯ' ಅನ್ನ ಯೋಜನೆ (AAY) ಮತ್ತು ಆದ್ಯತಾ ಕುಟುಂಬಗಳಿಗೆ (PHH) ಪಡಿತರ ಚೀಟಿ ವ್ಯಾಪ್ತಿಯಲ್ಲಿ ಒಟ್ಟು 81.35 ಕೋಟಿ ಫಲಾನುಭವಿಗಳು (20 ಕೋಟಿ ಕುಟುಂಬ) ಒಳಗೊಂಡಿದೆ. ಅಂದರೆ ದೇಶದ ಮೂರನೇ ಎರಡರಷ್ಟು ಜನಸಂಖ್ಯೆ ಈ ಪಡಿತರ ಫಲಾನುಭವಿಗಳಾಗಿದ್ದಾರೆ ಎಂದು ಸರ್ಕಾರದ ಮೂಲಗಳು ಹೇಳುತ್ತವೆ.
ಕೇಂದ್ರ ಆಹಾರ ಸಚಿವರ ಪ್ರತಿಕ್ರಿಯೆ
ಎಎವೈ ಫಲಾನುಭವಿಗಳ ಕುಟುಂಬದಲ್ಲಿ ಸದಸ್ಯರು ಎಷ್ಟೇ ಇದ್ದರೂ ಅವರು ಪ್ರತಿ ತಿಂಗಳಿಗೆ ಉಚಿತ 35 ಕೆಜಿ ಆಹಾರಧಾನ್ಯಗಳನ್ನು ಪಡೆಯಲು ಅರ್ಹರಾಗಿದ್ದಾರೆ. ಬಿಪಿಎಲ್ ಕಾರ್ಡುದಾರರಿಗೆ ಕುಟುಂಬದ ಪ್ರತಿ ವ್ಯಕ್ತಿ ಉಚಿತವಾಗಿ ತಲಾ ಐದು ಕೆ.ಜಿಗೆ ಅರ್ಹರಾಗಿದ್ದಾರೆ.
PMGKAY ಯೋಜನೆ ಪರಿಚಯಿಸಿದ 2020ರ ಸಾಲಿನಲ್ಲಿ ಕೇಂದ್ರ ಸರ್ಕಾರವು ತನ್ನ ಕೇಂದ್ರ ಸಂಗ್ರಹಣೆ ಪೂಲ್ನಿಂದ 3.9 ಲಕ್ಷ ಕೋಟಿ ರೂಪಾಯಿ ವೆಚ್ಚದಲ್ಲಿ 1,118 ಲಕ್ಷ ಮೆಟ್ರಿಕ್ ಟನ್ ಆಹಾರಧಾನ್ಯಗಳನ್ನು ಅರ್ಹರಿಗೆ ವಿತರಿಸಿದೆ.
ಪಡಿತರ ಚೀಟಿ-ಅರ್ಹತೆ ಆಧಾರದಲ್ಲಿ ಪ್ರತಿ 5 ಕೆಜಿ ಮತ್ತು 35 ಕೆಜಿಯ ಸಂಪೂರ್ಣ ಪ್ರಮಾಣವು ಉಚಿತವಾಗಿ ಲಭ್ಯವಿರುತ್ತದೆ. ಹೆಚ್ಚುವರಿ ಆಹಾರಧಾನ್ಯಗಳ ಅಗತ್ಯವಿಲ್ಲ ಎಂದು ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ಸ್ಪಷ್ಟಪಡಿಸಿದ್ದಾರೆ.
-
ಆಂಧ್ರಪ್ರದೇಶದಲ್ಲಿ ಕಲಬೆರಕೆ ಹಾಲು ಸೇವಿಸಿ 16 ಮಂದಿ ಸಾವು: ಹಲವು ರಾಜ್ಯಗಳಲ್ಲಿ ಅಧಿಕಾರಿಗಳಿಂದ ದಾಳಿ -
ರೈಲಿನಲ್ಲಿ ಆಹಾರ ಗುಣಮಟ್ಟ, ಅಧಿಕೃತ ವೆಂಡರ್ ಮಾಹಿತಿ ತಿಳಿಯಲು QR ಕೋಡ್ ವ್ಯವಸ್ಥೆ, ಏನಿದು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications