ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ: ಅಚ್ಚರಿಯ ಕೊಡುಗೆ ನೀಡಿದ ಬಿಜೆಪಿ ಸಿಎಂ
ಗುವಹಾಟಿ, ಜ 13: ದ್ವಿತೀಯ ಪಿಯುಸಿ-2017ರಲ್ಲಿ ಅತ್ಯುತ್ತಮ ಅಂಕಗಳಿಸಿದ ಸುಮಾರು ಒಂದು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಅಸ್ಸಾಂ ಸರಕಾರ ಶುಕ್ರವಾರ (ಜ 12) ಅಚ್ಚರಿಯ ಕೊಡುಗೆಯನ್ನು ನೀಡಿದೆ.
'ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ' ಎನ್ನುವ ಮಾತಿನಂತೆ ಮತ್ತು ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನಾವಾಲ, ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಯನಿಯರಿಗೆ ದ್ವಿಚಕ್ರ ವಾಹನವನ್ನು (ಸ್ಕೂಟಿ) ವಿತರಿಸಿದ್ದಾರೆ.
ವಿದ್ಯಾರ್ಥಿನಿಯರಿಗೆ ಸ್ಕೂಟಿ ವಿತರಿಸಿ ಮಾತನಾಡಿದ ಸೋನಾವಾಲ, ನಿಮ್ಮ ವಿದ್ಯಾಭ್ಯಾಸಕ್ಕೆ ನಮ್ಮ ಸರಕಾರದ ಪ್ರೋತ್ಸಾಹವಿದೆ, ಇನ್ನೂ ಹೆಚ್ಚು ಹೆಚ್ಚು ಓದಿ ಶೈಕ್ಷಣಿಕ ಕ್ಷೇತ್ರದಲ್ಲಿ ಮುಂದಕ್ಕೆ ಬನ್ನಿ, ರಾಜ್ಯ ಮತ್ತು ದೇಶಕ್ಕೆ ಹೆಮ್ಮೆತನ್ನಿ. ಇಂತಹ ಕೊಡುಗೆಗಳು ಇನ್ನೂ ಹೆಚ್ಚು ನಿಮಗೆ ಸಿಗಲಿವೆ ಎಂದಿದ್ದಾರೆ.

ವಿದ್ಯಾರ್ಥಿನಿಯರಿಗೆ ಅಸ್ಸಾಂ ಮುಖ್ಯಮಂತ್ರಿ ಸೋನಾವಲಾ ಅವರ ಈ ಸ್ಪೂರ್ತಿದಾಯಕ ಹೇಳಿಕೆ ರಾಜ್ಯದಲ್ಲಿ ವ್ಯಾಪಕ ಪ್ರಶಂಸೆಗೊಳಗಾಗಿದೆ. ನಮ್ಮ ಸರಕಾರ ಉತ್ತಮ ಮಟ್ಟದ ಶಿಕ್ಷಣವನ್ನು ನೀಡಲು ಬದ್ದವಾಗಿದೆ. ಮನೆಯೊಂದರಲ್ಲಿ ಹೆಣ್ಣುಮಕ್ಕಳು ಓದುವುದನ್ನು ಮುಂದುವರಿಸಿದರೆ, ಕುಟುಂಬದಲ್ಲಿ ಬಹಳಷ್ಟು ಬದಲಾವಣೆ ಸಾಧ್ಯ ಎಂದು ಸೋನಾವಾಲ ಹೇಳಿದ್ದಾರೆ.
ಸ್ಕೂಟಿ ವಿತರಿಸಿರುವ ಉದ್ದೇಶ, ವಿದ್ಯಾರ್ಥಿನಿಯರು ಭಯಭೀತರಾಗದೇ ಜೊತೆಗೆ ಆತ್ಮವಿಶ್ವಾಸದಿಂದ ಮುಂದಿನ ಶಿಕ್ಷಣ ಮುಂದುವರಿಸಲಿ ಎನ್ನುವುದು. ಮಕ್ಕಳ ಶಿಕ್ಷಣಕ್ಕೆ ನಮ್ಮ ಸರಕಾರ ಕೊಡುತ್ತಿರುವ ಸಣ್ಣ ಬಹುಮಾನವಿದು. ಒಂದು ಸಾವಿರದಿಂದ ಐದು ಸಾವಿರಕ್ಕೆ ಸ್ಕೂಟಿ ವಿತರಿಸುವ ಉದ್ದೇಶವನ್ನು ಹೊಂದಿದ್ದೇವೆ ಎಂದು ಸಿಎಂ ಸೋನಾವಾಲ ಹೇಳಿದ್ದಾರೆ.
ವಿದ್ಯಾರ್ಥಿನಿಯರಿಗೆ ವಿತರಿಸಲಾಗಿರುವ ಸ್ಕೂಟಿಯ ವಿಮೆ ಮತ್ತು ನೊಂದಣಿ ಖರ್ಚನ್ನು ಸರಕಾರವೇ ಭರಿಸಲಿದೆ ಎಂದು ಬಿಜೆಪಿ ನೇತೃತ್ವದ ಅಸ್ಸಾಂ ಸರಕಾರದ ಸಿಎಂ ಸರ್ಬಾನಂದ ಸೋನಾವಾಲ ಹೇಳಿದ್ದಾರೆ. ಜೊತೆಗೆ, ಪ್ರೈಮರಿಯಿಂದ ಎಸ್ ಎಸ್ ಎಲ್ ಸಿ ವರೆಗಿನ ಸರಕಾರೀ ಶಾಲಾ ಮಕ್ಕಳಿಗೆ ಉಚಿತ ಪಠ್ಯಪುಸ್ತಕವನ್ನೂ ಸಿಎಂ ವಿತರಿಸಿದ್ದಾರೆ.
-
ಕೃಷ್ಣಾ ಮೇಲ್ದಂಡೆ ಯೋಜನೆಗೆ 5,000 ಕೋಟಿ ರೂ. ಘೋಷಿಸಿದ ಸಿಎಂ ಸಿದ್ಧರಾಮಯ್ಯ -
ಕೇರಳ ಸೇರಿ 5 ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ: ಏಪ್ರಿಲ್ 9 ರಿಂದ ಮತದಾನ ಆರಂಭ , ಮೇ 4ಕ್ಕೆ ಫಲಿತಾಂಶ -
CBSE 12ನೇ ತರಗತಿಯ ಹಿಂದಿ ಪರೀಕ್ಷೆ: ಪ್ರಶ್ನೆಪತ್ರಿಕೆ ಸುಲಭ, ನಿಗದಿತ ಸಮಯದಲ್ಲೇ ಪರೀಕ್ಷೆ ಬರೆದು ನಿರಾಳರಾದ ವಿದ್ಯಾರ್ಥಿಗಳು -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
ಇಂದು ಸಂಜೆ 4 ಗಂಟೆಗೆ 5 ರಾಜ್ಯಗಳ ವಿಧಾನಸಭಾ ಚುನಾವಣಾ ವೇಳಾಪಟ್ಟಿ ಪ್ರಕಟಿಸಲು ಚುನಾವಣಾ ಆಯೋಗ ಸಜ್ಜು -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ












Click it and Unblock the Notifications