ಡೋಲೋ ಮಾತ್ರೆ ಶಿಫಾರಸ್ಸು ಮಾಡಲು ವೈದ್ಯರಿಗೆ 1000 ಕೋಟಿ ಉಡುಗೊರೆ: ಸುಪ್ರೀಂಗೆ ಮಾಹಿತಿ
ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಔಷಧವಾಗಿ ಜನಪ್ರಿಯವಾಗಿದ್ದ ಪ್ಯಾರಾಸಿಟಮಾಲ್ ಡ್ರಗ್ 'ಡೋಲೋ' ತಯಾರಕರು ವೈದ್ಯರಿಗೆ ಉಚಿತವಾಗಿ 1,000 ಕೋಟಿ ರುಪಾಯಿಗಳನ್ನು ಖರ್ಚು ಮಾಡಿದ್ದಾರೆ ಎಂದು ವೈದ್ಯಕೀಯ ಪ್ರತಿನಿಧಿಗಳ ಮಂಡಳಿ ಗುರುವಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.
ಫೆಡರೇಶನ್ ಆಫ್ ಮೆಡಿಕಲ್ ಮತ್ತು ಸೇಲ್ಸ್ ರೆಪ್ರೆಸೆಂಟೇಟಿವ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಪರವಾಗಿ ಹಾಜರಾದ ಹಿರಿಯ ವಕೀಲ ಸಂಜಯ್ ಪಾರಿಖ್, 650 ಮಿಲಿ ಗ್ರಾಂ ಶಿಫಾರಸ್ಸು ಮಾಡಲು ಡೋಲೋ ಕಂಪನಿಯು 1,000 ಕೋಟಿ ರುಪಾಯಿಗೂ ಹೆಚ್ಚು ಉಚಿತ ಕೊಡುಗೆಗಳನ್ನು ನೀಡಿದೆ. ವೈದ್ಯರು ವೀಚಾರಹೀನ ಡೋಸ್ ಸಂಯೋಜನೆಯನ್ನು ಸೂಚಿಸುತ್ತಿದ್ದಾರೆ ಎಂದು ವಕೀಲರು ಪೀಠಕ್ಕೆ ತಿಳಿಸಿದರು. ಅವರು ತಮ್ಮ ಮಾಹಿತಿಯ ಮೂಲವಾಗಿ ನೇರ ತೆರಿಗೆಗಳ ಕೇಂದ್ರೀಯ ಮಂಡಳಿಯ (CBDT) ವರದಿಯನ್ನು ಉಲ್ಲೇಖಿಸಿದ್ದಾರೆ.
ನ್ಯಾಯಮೂರ್ತಿ ಎ.ಎಸ್ ಬೋಪಣ್ಣ ಅವರನ್ನೊಳಗೊಂಡ ಪೀಠದ ನೇತೃತ್ವ ವಹಿಸಿದ್ದ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್, "ನೀವು ಹೇಳುತ್ತಿರುವುದು ನನ್ನ ಕಿವಿಗೆ ಸಂಗೀತವಲ್ಲ. ನಾನು ಕೂಡ ಕೋವಿಡ್ನಿಂದ ಬಳಲುತ್ತಿದ್ದಾಗ ಇದೇ ಮಾತ್ರೆಯನ್ನು ತೆಗೆದುಕೊಂಡಿದ್ದೆ" ಎಂದು ಹೇಳಿದರು.

ಔಷಧಿಗಳ ಬೆಲೆ ನಿಯಂತ್ರಣದ ಬಗ್ಗೆ ಕಳವಳ
ಫೆಡರೇಶನ್ ಆಫ್ ಮೆಡಿಕಲ್ ಮತ್ತು ಸೇಲ್ಸ್ ರೆಪ್ರೆಸೆಂಟೇಟಿವ್ಸ್ ಅಸೋಸಿಯೇಷನ್ ಆಫ್ ಇಂಡಿಯಾದ ಪಿಐಎಲ್ ಭಾರತದಲ್ಲಿ ಮಾರಾಟವಾಗುತ್ತಿರುವ ಔಷಧಿ ಸೂತ್ರೀಕರಣಗಳು ಮತ್ತು ಔಷಧಿಗಳ ಬೆಲೆಗಳ ನಿಯಂತ್ರಣದ ಬಗ್ಗೆ ಕಳವಳ ವ್ಯಕ್ತಪಡಿಸಿದೆ.
ನ್ಯಾಯಮೂರ್ತಿಗಳಾದ ಡಿ.ವೈ ಚಂದ್ರಚೂಡ್ ಮತ್ತು ಎ.ಎಸ್ ಬೋಪಣ್ಣ ಅವರ ಪೀಠ, ಸಂಜಯ್ ಪಾರಿಖ್ ಅವರ ಅಹವಾಲುಗಳನ್ನು ಆಲಿಸಿದ ನಂತರ, ಇದನ್ನು ಗಂಭೀರ ಸಮಸ್ಯೆ ಎಂದು ಪರಿಗಣಿಸಿದೆ.

ಪ್ರತಿಕ್ರಿಯೆ ನೀಡಲು ಕೇಂದ್ರಕ್ಕೆ ಸೂಚನೆ ಕೊಟ್ಟ ನ್ಯಾಯಾಲಯ
ಪಿಐಎಲ್ಗೆ ಒಂದು ವಾರದೊಳಗೆ ಪ್ರತಿಕ್ರಿಯೆಯನ್ನು ಸಲ್ಲಿಸುವಂತೆ ನ್ಯಾಯಾಲಯವು ಈಗ ಕೇಂದ್ರವನ್ನು ಕೇಳಿದೆ ಮತ್ತು 10 ದಿನಗಳ ನಂತರ ಮತ್ತೆ ಪ್ರಕರಣದ ವಿಚಾರಣೆ ನಡೆಸಲಿದೆ.
ಫೆಡರೇಶನ್ ತಮ್ಮ ಔಷಧಿಗಳನ್ನು ಶಿಫಾರಸು ಮಾಡಲು ಪ್ರೋತ್ಸಾಹಕವಾಗಿ ವೈದ್ಯರಿಗೆ ಉಚಿತ ಉಡುಗೊರೆ ನೀಡುವುದಕ್ಕೆ ಔಷಧೀಯ ಕಂಪನಿಗಳನ್ನು ಹೊಣೆಗಾರರನ್ನಾಗಿ ಮಾಡಲು ನಿರ್ದೇಶನಗಳನ್ನು ಕೋರಿ ಪಿಐಎಲ್ ಅನ್ನು ಮುಂದಿಟ್ಟಿದೆ. ಯೂನಿಫಾರ್ಮ್ ಕೋಡ್ ಆಫ್ ಫಾರ್ಮಾಸ್ಯುಟಿಕಲ್ ಮಾರ್ಕೆಟಿಂಗ್ ಪ್ರಾಕ್ಟೀಸಸ್ (ಯುಸಿಪಿಎಂಪಿ) ಗೆ ಶಾಸನಬದ್ಧ ಬೆಂಬಲವನ್ನು ರಚಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಕೋರಲಾಗಿದೆ.

ಮಿತಿ ಮೀರಿದ ಭ್ರಷ್ಟಾಚಾರ
ಪಾರಿಖ್ ತಮ್ಮ ವಾದಗಳಲ್ಲಿ, "ಯುಸಿಪಿಎಂಪಿಗೆ ಯಾವುದೇ ಶಾಸನಬದ್ಧ ಆಧಾರದ ಅನುಪಸ್ಥಿತಿಯಲ್ಲಿ ಅಂತಹ ಅಭ್ಯಾಸಗಳನ್ನು ನಿಷೇಧಿಸುವ ಯಾವುದೇ ಕಾನೂನು ಅಥವಾ ನಿಯಂತ್ರಣ ಮಾಡಲು ಅವಕಾಶವಿಲ್ಲ," ಎಂದು ಹೇಳಿದ್ದಾರೆ.
"ಭ್ರಷ್ಟಾಚಾರದ ವಿರುದ್ಧದ ಯುಎನ್ ಕನ್ವೆನ್ಷನ್ಗೆ ಸಹಿ ಹಾಕಿದ್ದರೂ ಭಾರತದಲ್ಲಿ ಔಷಧೀಯ ಮಾರುಕಟ್ಟೆ ಅಭ್ಯಾಸಗಳಲ್ಲಿನ ಭ್ರಷ್ಟಾಚಾರವನ್ನು ನಿಯಂತ್ರಣ ಮಾಡಲು ಸಾಧ್ಯವಾಗುತ್ತಿಲ್ಲ" ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಉಡುಗೊರೆ ಪಡೆದು ಔಷಧ ಶಿಫಾರಸ್ಸು ಮಾಡುವ ವೈದ್ಯರು
ವಿಚಾರಣೆಯ ನಂತರ ಮಾತನಾಡಿದ ಸಂಜಯ್ ಪಾರಿಖ್, "ಫಾರ್ಮಾ ಕಂಪನಿಗಳು ನೀಡುವ ಉಡುಗೊರೆಗಳಿಗೆ ಪ್ರತಿಯಾಗಿ ವೈದ್ಯರು ಅನಗತ್ಯ ಔಷಧಗಳನ್ನು ಶಿಫಾರಸು ಮಾಡುತ್ತಾರೆ. ಈ ಸಮಸ್ಯೆಯನ್ನು ನಿಭಾಯಿಸಲು ಯುಸಿಪಿಎಂಪಿ ಕೋಡ್ ಅನ್ನು ರಚಿಸಲಾಗಿದೆ. ದಿನದಿಂದ ದಿನಕ್ಕೆ ಸಮಸ್ಯೆ ಹೆಚ್ಚಾಗುತ್ತಿದೆ" ಎಂದು ಹೇಳಿದರು.
"500 ಮಿಗ್ರಾಂ ಪ್ಯಾರೆಸಿಟಮಾಲ್ಗೆ ಔಷಧಿ ಬೆಲೆಯನ್ನು ಪ್ರಾಧಿಕಾರ ನಿರ್ಧರಿಸಿದೆ. ಆದರೆ ಅದನ್ನು 650 ಎಂಜಿಗೆ ಹೆಚ್ಚಿಸಿದಾಗ ಅದರ ಬೆಲೆಯನ್ನು ಪ್ರಾಧಿಕಾರ ನಿರ್ಧರಿಸುವ ಅಧಿಕಾರ ಹೊಂದಿಲ್ಲ. ಅದಕ್ಕಾಗಿಯೇ ಡೋಲೋ 650 ಮಾತ್ರೆಯನ್ನು ಹೆಚ್ಚು ಪ್ರಚಾರ ಮಾಡಲಾಗುತ್ತಿದೆ. ಇದು ಉಚಿತಗಳ ಉದಾಹರಣೆಯಾಗಿದೆ. ಮಾರುಕಟ್ಟೆಯಲ್ಲಿ ಹೆಚ್ಚು ಆ್ಯಂಟಿಬಯೋಟಿಕ್ಗಳು ಅಗತ್ಯವಿಲ್ಲದಿದ್ದರೂ ವಿಭಿನ್ನ ರೂಪಗಳಲ್ಲಿ ಪ್ರಚಾರ ಮಾಡಲಾಗುತ್ತಿದೆ. ಔಷಧ ಸೂತ್ರೀಕರಣಗಳನ್ನು ನಿಯಂತ್ರಿಸಲು ಶಾಸನಬದ್ಧ ಚೌಕಟ್ಟು ಇರಬೇಕು" ಎಂದು ಪಾರಿಖ್ ಹೇಳಿದರು.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications