ಅರವಿಂದ್ ಕೇಜ್ರಿವಾಲ್ ವಿರುದ್ದ ಮತ್ತೊಂದು ಪಿಐಎಲ್‌; ಸಿಎಂ ಸ್ಥಾನ ಅಪಾಯದಲ್ಲಿ?

ಜೈಲಿನಲ್ಲಿರುವ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ದೆಹಲಿ ಹೈಕೋರ್ಟ್‌ನಲ್ಲಿ ಹೊಸ ಪಿಐಎಲ್ ಹಾಕಲಾಗಿದ್ದು, ಅವರ ಮುಖ್ಯಮಂತ್ರಿ ಸ್ಥಾನಕ್ಕೆ ಕುತ್ತು ತಂದಿದೆ.

ಕೇಜ್ರಿವಾಲ್ ಅವರನ್ನು ದೆಹಲಿ ಸಿಎಂ ಸ್ಥಾನದಿಂದ ವಜಾಗೊಳಿಸುವಂತೆ ಹಿಂದೂ ಸೇನೆ ಶುಕ್ರವಾರ ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರನ್ನು ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಹುದ್ದೆಯಿಂದ ವಜಾಗೊಳಿಸುವಂತೆ ನ್ಯಾಯಾಲಯಕ್ಕೆ ಆದೇಶ ನೀಡಬೇಕು ಎಂದು ಹಿಂದೂ ಸೇನೆ ಸಲ್ಲಿಸಿರುವ ಅರ್ಜಿಯಲ್ಲಿ ಒತ್ತಾಯಿಸಲಾಗಿದೆ.

Fresh PIL Filed in Delhi High Court Threatens Arvind Kejriwal s CM Position

ಕೇಂದ್ರ ಸರ್ಕಾರವು ಲೆಫ್ಟಿನೆಂಟ್ ಗವರ್ನರ್ ನಿಯಮದ ಮೂಲಕ ದೆಹಲಿಯನ್ನು ನಡೆಸಬೇಕು ಎಂದು ಮನವಿ ಮಾಡಲಾಗಿದೆ. ಈಗಾಗಲೇ ಜೈಲಿನಲ್ಲಿರುವ ಕೇಜ್ರಿವಾಲ್ ಅವರಿಗೆ ಇದು ಮತ್ತೊಂದು ಸಂಕಷ್ಟವಾಗಿದೆ.

ಅರ್ಜಿ ವಜಾಮಾಡಿದ ಹೈಕೋರ್ಟ್

ಈ ಮೊದಲು ದೆಹಲಿಯ ಎನ್‌ಸಿಟಿಯ ಮುಖ್ಯಮಂತ್ರಿ ಹುದ್ದೆಯಿಂದ ಅರವಿಂದ್ ಕೇಜ್ರಿವಾಲ್ ಅವರನ್ನು ವಜಾಗೊಳಿಸುವಂತೆ ನಿರ್ದೇಶನ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ಗುರುವಾರ ವಜಾಗೊಳಿಸಿತ್ತು. ಪಿಐಎಲ್ ಅನ್ನು ವಜಾಗೊಳಿಸಿದ ನ್ಯಾಯಾಲಯ, ಈ ವಿಷಯದಲ್ಲಿ ನ್ಯಾಯಾಂಗದ ಹಸ್ತಕ್ಷೇಪಕ್ಕೆ ಅವಕಾಶವಿಲ್ಲ ಎಂದು ಹೇಳಿದೆ.

ಕೇಜ್ರಿವಾಲ್ ಮತ್ತು ಎಎಪಿ ಮಂತ್ರಿಗಳು ಬಂಧನದಲ್ಲಿರುವಾಗಲೂ ಮುಖ್ಯಮಂತ್ರಿ ದೆಹಲಿ ಸರ್ಕಾರವನ್ನು ನಡೆಸುವುದನ್ನು ಮುಂದುವರೆಸುತ್ತಾರೆ. ಅವರು ಜೈಲಿನಿಂದಲೇ ಆದೇಶಗಳನ್ನು ಹೊರಡಿಸುತ್ತಾರೆ.

ಹೊಸ ಪಿಐಎಲ್

ಹಿಂದೂ ಸೇನೆಯ ಅಧ್ಯಕ್ಷ ವಿಷ್ಣು ಗುಪ್ತಾ ಅವರು ಸಲ್ಲಿಸಿದ ಹೊಸ ಪಿಐಎಲ್, ಬಂಧನದ ಸಂದರ್ಭದಲ್ಲಿ, ಮುಖ್ಯಮಂತ್ರಿಗಳು ನ್ಯಾಯಾಂಗ ಬಂಧನದಿಂದ ಅಥವಾ ಪೊಲೀಸ್ ಕಸ್ಟಡಿಯಿಂದ ತಮ್ಮ ಸರ್ಕಾರವನ್ನು ನಡೆಸುವ ಅನುಮತಿ ಸಂವಿಧಾನದಲ್ಲಿ ಇಲ್ಲ ಎಂದು ಹೇಳಿದೆ.

ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನು ಬಂಧಿಸಿದಾಗಿನಿಂದ, ದೆಹಲಿಯ ಎನ್‌ಸಿಟಿಯ ಸರ್ಕಾರದ ಕಾರ್ಯನಿರ್ವಹಣೆಯನ್ನು ಸಂವಿಧಾನದ ಯೋಜನೆಗೆ ಅನುಗುಣವಾಗಿ ನಡೆಸಲಾಗಿಲ್ಲ ಎಂದು ಮನವಿಯಲ್ಲಿ ವಾದಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+