ಮತ್ತೆ ಸಂಕಷ್ಟಕ್ಕೆ ಸಿಲುಕಿದ ದೇವಮಾತೆ ರಾಧೇ ಮಾ
ಮುಂಬೈ, ಡಿ. 18: ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾತೆ ರಾಧೇ ಮಾ ಬಂಧನದ ಭೀತಿಯಿಂದ ಪಾರಾಗಿ ಬಾಂಬೆ ಹೈಕೋರ್ಟ್ ನಿಂದ ನಿರೀಕ್ಷಿತಾ ಜಾಮೀನು ಪಡೆದುಕೊಂಡಿದ್ದಾರೆ. ಆದರೆ, ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಧೇ ಮಾ ವಿರುದ್ಧ ತನಿಖೆ ನಡೆಸುವಂತೆ ಹರಿಯಾಣ ಹೈಕೋರ್ಟ್ ಪೊಲೀಸರಿಗೆ ನಿರ್ದೇಶಿಸಿದೆ.
ಪಂಜಾಬಿನ ಫಗ್ವಾರ ನಿವಾಸಿ ಅವರು ಸಲ್ಲಿಸಿರುವ ದೂರಿನ ಅನ್ವಯ ರಾಧೇ ಮಾ ಅವರು ಸ್ವಯಂಘೋಷಿತ ದೇವಮಾತೆ ಎಂದು ಕರೆದುಕೊಳ್ಳುವುದು, ದುರ್ಗಾ ಮಾತೆಯ ಅವತಾರ ಎಂದು ಹೇಳಿಕೊಂಡಿರುವುದು ಎಲ್ಲವೂ ಧಾರ್ಮಿಕ ಭಾವನೆಗೆ ಧಕ್ಕೆ ತರುತ್ತಿದೆ. ಈ ಬಗ್ಗೆ ಕೂಡಲೇ ಕ್ರಮ ಜರುಗಿಸಬೇಕು ಎಂದು ಕೋರಲಾಗಿದೆ.[ಸ್ವಯಂ ಘೋಷಿತ ದೇವಮಾತೆ ರಾಧೇ ಮಾಗೆ ರಿಲೀಫ್]

ಅರ್ಜಿ ವಿಚಾರಣೆ ನಡೆಸಿದ ಹರ್ಯಾಣ ಹೈಕೋರ್ಟ್, ಈ ಬಗ್ಗೆ ಮೂರು ತಿಂಗಳೊಳಗೆ ತನಿಖೆ ನಡೆಸಿ ವಿಚಾರಣೆ ಕೈಗೊಳ್ಳುವಂತೆ ಕಪುರ್ಥಾಲಾ ಪೊಲೀಸರಿಗೆ ಆದೇಶಿಸಲಾಗಿದೆ.
ರಾಧೇ ಮಾ ವಿರುದ್ಧ ಅರ್ಜಿ ಹಾಕಿರುವ ಸುರೇಂದ್ರ ಮಿತ್ತಲ್ ಅವರು ಮಾತನಾಡಿ, ದುರ್ಗಾ ದೇವಿಯ ಅವತಾರ ಎಂದು ಹೇಳಿಕೊಂಡು ಧರ್ಮದ ಹೆಸರಿನಲ್ಲಿ ಸಾರ್ವಜನಿಕರಿಗೆ ಮೋಸ ಮಾಡಲಾಗುತ್ತಿದೆ. ರಾಧೇ ಮಾ ವಿರುದ್ಧ ಈಗಾಗಲೇ ಕೇಳಿ ಬಂದಿರುವ ದೂರುಗಳು ಇತ್ಯರ್ಥವಾಗಿಲ್ಲ, ಆಪಾದನೆಗಳಿಂದ ಆಕೆ ಮುಕ್ತರಾಗಿಲ್ಲ ಹೀಗಾಗಿ ದೇವಿಯಂತೆ ವಸ್ತ್ರಧರಿಸಿ ಭಕ್ತರ ಜೊತೆ ನಡೆದುಕೊಳ್ಳುವುದನ್ನು ನೋಡಲು ಆಗುವುದಿಲ್ಲ ಎಂದಿದ್ದಾರೆ.
ಈಗಾಗಲೇ ವರದಕ್ಷಿಣೆ ಕಿರುಕುಳಕ್ಕೆ ಕುಮ್ಮಕ್ಕು ನೀಡಿರುವ ಆರೋಪ, ಸೆಕ್ಸ್ ರಾಕೆಟ್ ನಡೆಸಿರುವ ಆರೋಪವನ್ನು ರಾಧೇ ಮಾ ಹೊತ್ತುಕೊಂಡಿದ್ದಾರೆ. (ಒನ್ ಇಂಡಿಯಾ ಸುದ್ದಿ)
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications