ಮೋದಿಕೇರ್ ನಿಂದ ಇಂದ್ರಧನುಷ್ ವರೆಗೆ ಮೋದಿ ಸರ್ಕಾರದ ಜನಪ್ರಿಯ ಯೋಜನೆಗಳು
ನವದೆಹಲಿ, ಅಕ್ಟೋಬರ್ 22: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರವು ದೇಶದಲ್ಲಿ ಆರೋಗ್ಯ ಕಾಳಜಿಯ ಕುರಿತು ಹಲವಯ ಯೋಜನೆಗಳನ್ನು ಜಾರಿಗೆ ತಂದಿದೆ.
ರಾಷ್ಟ್ರೀಯ ಆರೋಗ್ಯ ರಕ್ಷಣೆ ಮಿಷನ್ ಅಡಿಯಲ್ಲಿ ಹಲವರು ಆರೋಗ್ಯ ವಿಮೆಯ ಸೌಲಭ್ಯ ಪಡೆಯುವಂತೆ ಮಾಡಲಾಗಿದೆ. ವಿಶ್ವದ ಅತೀದೊಡ್ಡ ಆರೋಗ್ಯ ವಿಮೆ ಎಂಬ ಖ್ಯಾತಿಗಳಿಸಿದ ಮೋದಿ ಕೇರ್ ಮೂಲಕ ಪ್ರತಿ ಕುಟುಂಬಕ್ಕೆ ವಾರ್ಷಿಕ 5 ಲಕ್ಷ ರೂ.ವರೆಗೆ ಆರೋಗ್ಯ ವಿಮಾ ಸೌಲಭ್ಯ ನೀಡಲಾಗುತ್ತಿದೆ.
ಇಂದ್ರಧನುಷ್ ಯೋಜನೆಯ ಮೂಲಕ 3.15 ಕೋಟಿ ಮಕ್ಕಳಿಗೆ ಮತ್ತು 80 ಲಕ್ಷದಷ್ಟು ಗರ್ಭಿಣಿಯರಿಗೆ ಚುಚ್ಚುಮದ್ದು ನೀಡಲಾಗಿದ್ದು, ರೋಗ ನಿರೋಧಕ ಶಕ್ತಿ ಹೆಚ್ಚುವಂತೆ ಮಾಡುವುದು ಇದರ ಉದ್ದೇಶವಾಗಿದೆ. 528 ಜಿಲ್ಲೆಗಳಲ್ಲಿ ಈ ಯೋಜನೆ ವ್ಯಾಪಿಸಿದೆ.

ಆಯುಷ್ಮಾನ್ ಭಾರತ ಯೋಜನೆಯು ಸಮಾಜದ ಬಡ ವರ್ಗವನ್ನು ಮುಟ್ಟುವ ಉದ್ದೇಶವನ್ನು ಹೊಂದಿದೆ.
ಮೋದಿ ಕೇರ್ ನ ಮುಖ್ಯ ಲಕ್ಷಣಗಳು
* ಕುಟುಂಬದ ಗಾತ್ರ, ವಯಸ್ಸು ಮತ್ತು ಲಿಂಗದ ನಿರ್ಬಂಧವಿಲ್ಲ.
* ಎಸ್ ಇ ಸಿಸಿ ದತ್ತಾಂಶದ ಪ್ರಕಾರ ಎಲ್ಲಾ ಅರ್ಹ ಕುಟುಂಬಗಳೂ ಈ ಯೋಜನೆಯ ಫಲಾನುಭವಿಗಳು.
* ಆಸ್ಪತ್ರೆಗೆ ಸೇರಿದರೆ ಕುಟುಂಬ ಯಾವುದೇ ರೀತಿಯ ಹಣ ಕಟ್ಟುವ ಅಗತ್ಯವಿಲ್ಲ, ಇದು ನಗದು ರಹಿತ ಸೇವೆಯಾಗಿದೆ.
* ಆಸ್ಪತ್ರೆಗೆ ದಾಖಲಾಗುವ ಪೂರ್ವದ ಮತ್ತು ನಂತರದ ಎರಡೂ ಸಂದರ್ಭಗಳೂ ಈ ವಿಮೆಯ ವ್ಯಾಪ್ತಿಗೆ ಬರುತ್ತವೆ.
* ದೇಶದ ಯಾವುದೇ ಸರ್ಕಾರಿ ಮತ್ತು ಕೆಲವು ನಿರ್ದಿಷ್ಟ ಖಾಸಗಿ ಆಸ್ಪತ್ರೆಗಳಲ್ಲಿ ಈ ಸೌಲಭ್ಯ ಪಡೆಯಬಹುದು.
* ಯಾವುದೇ ಸರ್ಕಾರಿ ಗುರುತಿನ ಚೀಟಿಯೊಂದಿಗೆ ಈ ಸೌಲಭ್ಯವನ್ನು ಪಡೆಯಬಹುದು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications