ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಮನೋಜ್ ಸಿನ್ಹಾ!
ಉತ್ತರಪ್ರದೇಶದ ಮುಖ್ಯಮಂತ್ರಿ ಸ್ಥಾನಕ್ಕೆ ರೈಲ್ವೆ ಖಾತೆ ರಾಜ್ಯ ಸಚಿವ ಮನೋಜ್ ಸಿನ್ಹಾ ಹೆಸರು ಬಹುತೇಕ ಅಂತಿಮವಾಗಿದೆ. ಅಧಿಕೃತ ಘೋಷಣೆ ಬಾಕಿಯಿದ್ದು, ಶನಿವಾರ ಸಂಜೆ ನಡೆಯುವ ಪಕ್ಷದ ಶಾಸಕಾಂಗ ಸಭೆಯಲ್ಲಿ ಆಯ್ಕೆ ಘೋಷಣೆ ಆಗುವ ಸಾಧ್ಯತೆ ಇದೆ
ಲಖನೌ, ಮಾರ್ಚ್ 18: ಉತ್ತರಪ್ರದೇಶ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಬಲವಾಗಿ ಕೇಳಿಬರುತ್ತಿರುವ ಹೆಸರು ಮನೋಜ್ ಸಿನ್ಹಾ ಅವರದು. ಶನಿವಾರ ಬೆಳಗ್ಗೆ ವಾರಣಾಸಿಯ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ವಾರಣಾಸಿಯ ಕಾಲ ಭೈರವ ಮಂದಿರದಲ್ಲಿ ಪೂಜೆ ಸಲ್ಲಿಸಿ, ಆ ನಂತರ ಲಖನೌ ಕಡೆಗೆ ಹೊರಟಿದ್ದಾರೆ.
ಶನಿವಾರ ಸಂಜೆ 5ಕ್ಕೆ ಬಿಜೆಪಿಯ ಶಾಸಕಾಂಗ ಸಭೆ ನಡೆಯಲಿದೆ. ಕೇಂದ್ರದಲ್ಲಿ ಸಚಿವರಾಗಿರುವ ಸಿನ್ಹಾ, ಉತ್ತರಪ್ರದೇಶದ ಮುಖ್ಯಮಂತ್ರಿಯಾಗುವ ಸೂಚನೆ ದೊರೆತಿದೆ. ಕಳೆದ ಕೆಲವು ದಿನಗಳಿಂದ ಅವರ ಹೆಸರು ಗಿರಕಿ ಹೊಡೆಯುತ್ತಿತ್ತು. ಆದರೆ ದೆಹಲಿಯಲ್ಲಿ ಮಾಧ್ಯಮದವರ ಜತೆಗೆ ಶುಕ್ರವಾರ ಮಾತನಾಡಿದ ಅವರು, ಮುಖ್ಯಮಂತ್ರಿ ಹುದ್ದೆ ರೇಸಿನಲ್ಲಿ ನಾನಿಲ್ಲ ಎಂದಿದ್ದರು.[ಯುಪಿಯಲ್ಲಿ ಯಾರಿಗೆ ಒಲಿಯಲಿದೆ ಮುಖ್ಯಮಂತ್ರಿ ಪಟ್ಟ?]

ಆದರೆ, ಪಕ್ಷದ ಮೂಲಗಳ ಪ್ರಕಾರ ಮನೋಜ್ ಸಿನ್ಹಾ ಅವರಿಗೆ ಪಟ್ಟ ಕಟ್ಟುವುದು ನಿಶ್ಚಿತ. ನರೇಂದ್ರ ಮೋದಿ ಹಾಗೂ ಅಮಿತ್ ಷಾ ಇಬ್ಬರೂ ಸೇರಿ ಮನೋಜ್ ಸಿನ್ಹಾ ಅವರ ಆಯ್ಕೆ ಮಾಡಿದ್ದಾರೆ. ರಾಜ್ ನಾಥ್ ಸಿಂಗ್ ಅವರೂ ಮುಖ್ಯಮಂತ್ರಿ ಹುದ್ದೆ ಅಲಂಕರಿಸಬಹುದಾದದವರ ಪಟ್ಟಿಯಲ್ಲಿ ಪ್ರಮುಖವಾಗಿ ಕೇಳಿಬಂದಿದ್ದರು.[ಉತ್ತರಪ್ರದೇಶ ಮುಖ್ಯಮಂತ್ರಿ ಆಯ್ಕೆ, ಮುಂದುವರಿದ ಕುತೂಹಲ]
ಮನೋಜ್ ಸಿನ್ಹಾ ಅಯ್ಕೆ ನಿರ್ಧಾರದಲ್ಲಿ ರಾಜ್ ನಾಥ್ ಸಿಂಗ್ ಸಹ ಇದ್ದರು. ಆರೆಸ್ಸೆಸ್ ನ ಒಪ್ಪಿಗೆ ಕೂಡ ಪಡೆಯಲಾಗಿದೆ ಎಂದು ತಿಳಿದುಬಂದಿದೆ.
-
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ












Click it and Unblock the Notifications