Drinking Water: ಪ್ಲಾಸ್ಟಿಕ್ ಬಾಟಲ್ನಲ್ಲಿ ನೀರು ಕುಡಿಯುವ ಮುನ್ನ ಈ ಸ್ಟೋರಿ ಓದಿ
ನೀವು ಎಲ್ಲೆಂದರಲ್ಲಿ ಕಾಸು ಕೊಟ್ಟು ವಾಟರ್ ಬಾಟಲ್ ಖರೀದಿಸಿ ನೀರು ಕುಡಿಯುವ ಅಭ್ಯಾಸ ಮಾಡಿಕೊಂಡಿದ್ದೀರಾ? ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಹೋಟೆಲ್, ಸಿನಿಮಾಗಳಲ್ಲಿ ಪ್ಲಾಸ್ಟಿಕ್ ಬಾಟಲ್ಗಳಲ್ಲಿ ಸಿಗುವ ನೀರು ಕುಡಿಯುತ್ತಿದ್ದೀರಾ? ಹಾಗಾದರೆ ನಿಮ್ಮ ಆರೋಗ್ಯ ಅಪಾಯದಲ್ಲಿದೆ! ಹೌದು, ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಈ ಆತಂಕಕಾರಿ ಮಾಹಿತಿಯನ್ನು ತಿಳಿಸಿದೆ. ಪ್ಯಾಕೇಜ್ ಮಾಡಿದ ಕುಡಿಯುವ ಖನಿಜಯುಕ್ತ ನೀರನ್ನು 'ಹೆಚ್ಚು ಅಪಾಯಕಾರಿ ಆಹಾರ' ಪಟ್ಟಿಯಲ್ಲಿ ಹೆಸರಿಸಿದೆ.
ಸಾರ್ವಜನಿಕರ ಆರೋಗ್ಯದ ಮೇಲೆ ಇದು ತೀವ್ರ ಪರಿಣಾಮ ಬೀರುವ ಅಪಾಯ ಇರುವ ಕಾರಣ, ಸುರಕ್ಷತೆಯ ಮಾನದಂಡಗಳನ್ನು ಮತ್ತಷ್ಟು ಕಠಿಣವಾಗಿಸಲು ನಿರ್ಧಾರ ಮಾಡಿದೆ. ಈ ಉತ್ಪನ್ನಗಳನ್ನು ಹೆಚ್ಚಿನ ತಪಾಸಣೆ ಮಾಡಲು ನಿರ್ದೇಶಿಸಿದ್ದು, ಮೂರನೇ ವ್ಯಕ್ತಿಯಿಂದ ಲೆಕ್ಕಪರಿಶೋಧನೆಗೆ ಒಳಗಾಗಲಿದೆ.

ಪ್ಯಾಕೇಜ್ಡ್ ನೀರಿನ ಉದ್ಯಮ ಆರಂಭಿಸಲು ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ನ ಪ್ರಮಾಣ ಪತ್ರದ ಅಗತ್ಯವನ್ನು ಕೇಂದ್ರ ಸರ್ಕಾರ ಅಕ್ಟೋಬರ್ ತಿಂಗಳಿನಲ್ಲಿ ತೆಗೆದುಹಾಕಿದ್ದು, ಈಗ ನಿಯಮಗಳು ಮತ್ತಷ್ಟು ಬಿಗಿಯಾಗಲಿವೆ.
ಎಫ್ಎಸ್ಎಸ್ಎಐ ವರದಿ ಹೇಳಿದ್ದೇನು?
ನವೆಂಬರ್ 29ರಂದು ನೀಡಿರುವ ಆದೇಶದಲ್ಲಿ ಎಫ್ಎಸ್ಎಸ್ಎಐ ಕೆಲವು ಉತ್ಪನ್ನಗಳ ತಯಾರಿಕೆಗೆ ಬಿಐಎಸ್ ಪ್ರಮಾಣಪತ್ರದ ಆದೇಶವನ್ನು ತೆಗೆದುಹಾಕುವ ನಿರ್ಧಾರ ಮಾಡಿದ್ದು, ಪ್ಯಾಕೇಜ್ ಮಾಡಲಾದ ಮತ್ತು ಖನಿಜಯುಕ್ತ ನೀರನ್ನು ಹೆಚ್ಚು ಅಪಾಯಕಾರಿ ಆಹಾರದ ವರ್ಗಗಳಿಗೆ ಸೇರಿಸಲು ನಿರ್ಧರಿಸಿದೆ. ಹೊಸ ನಿಯಮದ ಪ್ರಕಾರ ಪ್ಯಾಕೇಜ್ ನೀರು ತಯಾರಕರು ಪ್ರತಿ ವರ್ಷ ಅಪಾಯ ಆಧಾರಿಯ ತಪಾಸಣೆಗೆ ಒಳಗಾಗಬೇಕಿದ್ದು, ಗುಣಮಟ್ಟ ಕಾಪಾಡುವ ಗುರಿಯನ್ನು ಹೊಂದಿದೆ.
ಮುಂದಿನ ದಿನಗಳಲ್ಲಿ ಈ ಉದ್ಯಮಕ್ಕೆ ಪರವಾನಗಿ ನೀಡುವ ಮೊದಲು ಕಠಿಣ ತಪಾಸಣೆಗಳನ್ನು ನಡೆಸಲಾಗುತ್ತದೆ. ಪ್ಯಾಕೇಜ್ ನೀರಿನ ಉದ್ಯಮ ಆರಂಭಿಸಲು ಇನ್ನುಮುಂದೆ ಬಿಐಎಸ್ ಪ್ರಮಾಣಪತ್ರ ಪಡೆಯುವ ಅಗತ್ಯವಿಲ್ಲ ಆದರೆಪರವಾನಗಿ ಅಥವಾ ನೋಂದಣಿಯನ್ನು ಪಡೆಯುವ ಮೊದಲು ಕಡ್ಡಾಯವಾಗಿ ತಪಾಸಣೆಗೆ ಒಳಗಾಗಬೇಕುತ್ತದೆ ಎಂದು ಹೇಳಿದ್ದಾರೆ.
ಇಷ್ಟು ಮಾತ್ರವಲ್ಲದ ಹೆಚ್ಚಿನ ಅಪಾಯದ ಆಹಾರ ವರ್ಗದ ಅಡಿಯಲ್ಲಿ ಬರುವ ಎಲ್ಲಾ ಉತ್ಪನ್ನಗಳ ತಯಾರಕರು ಕಡ್ಡಾಯವಾಗಿ ಎಫ್ಎಸ್ಎಸ್ಎಐ ಮಾನ್ಯತೆ ಪಡೆದ ಆಹಾರ ಸುರಕ್ಷತಾ ಏಜೆನ್ಸಿಯಿಂದ ವಾರ್ಷಿಕವಾಗಿ ಆಡಿಟ್ಗೆ ಒಳಗಾಗಬೇಕಾಗುತ್ತದೆ.
ಆರೋಗ್ಯದ ಬಗ್ಗೆ ಗಮನವಿರಲಿ
ಇದು ಮಾತ್ರವಲ್ಲದೆ ಇಂದು ಕೆಲವು ಜನಪ್ರಿಯ ಪ್ಯಾಕೇಜ್ ಕುಡಿಯುವ ನೀರಿನ ಕಂಪನಿಗಳ ಹೆಸರನ್ನೇ ಹೋಲುಕ ನಕಲಿ ಕಂಪನಿಗಳು ನಾಯಿಕೊಡೆಗಳಂತೆ ಹಬ್ಬಿದ್ದು ಅಪಾಯವನ್ನು ಮತ್ತಷ್ಟು ಹೆಚ್ಚಿಸಿದೆ. ನೀವು ಕೂಡ ಆರೋಗ್ಯಬ ಬಗ್ಗೆ ಕಾಳಜಿ ವಹಿಸುವುದಾದರೆ ಮನೆಯಿಂದಲೇ ಬಾಟಲ್ನಲ್ಲಿ ಕುಡಿಯುವ ನೀರನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗುವ ಅಭ್ಯಾಸ ರೂಢಿಸಿಕೊಳ್ಳಿ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications