ಅಂತ್ಯ ಸಂಸ್ಕಾರ ಸ್ಥಳ ತಲುಪಿದ ಮಾರ್ಷಲ್ ಅರ್ಜಾನ್ ಸಿಂಗ್ ಪಾರ್ಥಿವ ಶರೀರ
ವಾಯು ಸೇನಾ ಮುಖ್ಯಸ್ಥ ಅರ್ಜಾನ್ ಸಿಂಗ್ ಗೆ ಅಂತಿಮ ನಮನ. ಬ್ರಾರ್ ಸ್ಕ್ವಯರ್ ನಲ್ಲಿ ಅಂತ್ಯ ಸಂಸ್ಕಾರ.
ನವದೆಹಲಿ, ಸೆಪ್ಟೆಂಬರ್ 18: ಶನಿವಾರ ರಾತ್ರಿ ನಿಧನರಾಗಿದ್ದ ವಾಯುಸೇನಾ ಮಾರ್ಷಲ್ ಅರ್ಜಾನ್ ಸಿಂಗ್ ಅವರ ಮೃತದೇಹ ಅವರ ಅಂತ್ಯಸಂಸ್ಕಾರ ನಡೆಯಲಿರುವ ಬ್ರಾರ್ ಸ್ಕ್ವಯರ್ ಗೆ ಬಂದು ಸೇರಿದೆ.
ಶನಿವಾರ (ಸೆ. 16) ಬೆಳಗ್ಗೆ ಹೃದಯಾಘಾತಕ್ಕೊಳಗಾಗಿದ್ದ ಅವರು, ಅಂದು ರಾತ್ರಿಯೇ ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಇದೀಗ, ಬ್ರಾರ್ ಸ್ಕ್ವಯರ್ ನಲ್ಲಿ ಅವರ ಅಂತ್ಯ ಸಂಸ್ಕಾರ ಪ್ರಕ್ರಿಯೆ ಸಾಗಿದೆ.
ಈ ವೇಳೆ, ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬ್ರಾರ್ ಸ್ಕ್ವಯರ್ ನಲ್ಲಿ ಸಿಂಗ್ ಅವರಿಗೆ ಪುಷ್ಪಗುಚ್ಛವಿಟ್ಟು ಅಂತಿಮ ನಮನ ಸಲ್ಲಿಸಿದರು. ಅವರ ನಂತರ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಹಿರಿಯ ಬಿಜೆಪಿ ನಾಯಕ ಎಲ್.ಕೆ. ಆಡ್ವಾಣಿ ಅವರೂ ದಿವಂಗತ ಸೇನಾನಿಗೆ ಪುಷ್ಪ ನಮನ ಸಲ್ಲಿಸಿದರು.

ಇದಕ್ಕೂ ಮುನ್ನ, ದೆಹಲಿಯ ಕಂಟೋನ್ಮೆಂಟ್ ನಲ್ಲಿರುವ ಅರ್ಜಾನ್ ಸಿಂಗ್ ಅವರ ನಿವಾಸದಲ್ಲಿ ಅವರಿಗೆ ಅಂತಿಮ ನಮನ ಸಲ್ಲಿಸಲಾಯಿತು. ಅಲ್ಲಿಂದ 8 ಕಿ.ಮೀ. ದೂರದಲ್ಲಿರುವ ಬ್ರಾರ್ ಸ್ಕ್ವಯರ್ ನಲ್ಲಿ ಅವರ ಅಂತ್ಯಸಂಸ್ಕಾರಕ್ಕೆ ಸ್ಥಳ ಗುರುತಿಸಲಾಗಿದ್ದು, ಅಲ್ಲಿಗೆ ಸಿಂಗ್ ಅವರ ಪಾರ್ಥೀವ ಶರೀರವನ್ನು ಕರೆದೊಯ್ಯಲಾಯಿತು.

ಹೂವು ಹಾರಗಳಿಂದ ಅಲಂಕೃತಗೊಂಡಿದ್ದ ವಾಹನದಲ್ಲಿ ಸಿಂಗ್ ಅವರ ಪಾರ್ಥಿವ ಶರೀರವಿದ್ದ ಶವಪೆಟ್ಟಿಗೆಯನ್ನು ಇರಿಸಿದ ಸೈನಿಕರು ಅವರ ಶವ ಯಾತ್ರೆಗೆ ಸನ್ನದ್ಧರಾದರು. ಆ ಟ್ರಕ್ ನ ಮುಂದೆ ಹಾಗೂ ಹಿಂದೆ ಸೇನಾ ವಾಹನಗಳು ಸಾಗಿದವು. ಈ ವಾಹನಗಳು ಸಾಗುವ ಹಾದಿನಲ್ಲಿ ಝೀರೋ ಟ್ರಾಫಿಕ್ ಅನುಕೂಲ ಮಾಡಿಕೊಡಲಾಗಿತ್ತು.

ಏತನ್ಮಧ್ಯೆ, ಸುದ್ದಿಗಾರರೊಂದಿಗೆ ಮಾತನಾಡಿರುವ ಕೇಂದ್ರ ರಕ್ಷಣಾ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು, ಸಿಂಗ್ ಅವರ ಅಂತ್ಯ ಸಂಸ್ಕಾರಕ್ಕೂ ಮುನ್ನ ಕುಶಾಲ ತೋಪುಗಳ ವಂದನೆ ನೀಡಲಾಗುವುದು ಎಂದು ತಿಳಿಸಿದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications