ಪರಮಾಣು ಅಸ್ತ್ರಗಳ ಬಳಕೆ ಅಥವಾ ಬಳಕೆಯ ಬೆದರಿಕೆ ಸ್ವೀಕಾರಾರ್ಹವಲ್ಲ: ಪರೋಕ್ಷವಾಗಿ ರಷ್ಯಾಗೆ ಎಚ್ಚರಿಸಿದ ಜಿ20 ರಾಷ್ಟ್ರಗಳು
ನವದೆಹಲಿ, ಸೆಪ್ಟೆಂಬರ್ 09: ಪರಮಾಣು ಅಸ್ತ್ರಗಳ ಬಳಕೆ ಅಥವಾ ಬಳಕೆಯ ಬೆದರಿಕೆ ಸ್ವೀಕಾರಾರ್ಹವಲ್ಲ ಎಂದು ಜಿ 20 ರಾಷ್ಟ್ರಗಳು ಎಚ್ಚರಿಕೆ ನೀಡಿವೆ. ಈ ಮೂಲಕ ರಷ್ಯಾ ಹಾಗೂ ಚೀನಾ ದೇಶಗಳಿಗೆ ಪರೋಕ್ಷವಾಗಿ ಸಂದೇಶ ರವಾನಿಸಲಾಗಿದೆ.
ಉಕ್ರೇನ್ ಮೇಲೆ ರಷ್ಯಾ ನಡೆಸುತ್ತಿರುವ ದಾಳಿ ಹಾಗೂ ಮಾಸ್ಕೋ ಹಾಕುತ್ತಿರುವ ಬೆದರಿಕೆಗಳನ್ನು ಉಲ್ಲೇಖಿಸದೇ ಜಿ20 ಸಭೆಯಲ್ಲಿ ಪರೋಕ್ಷವಾಗಿ ಹೇಳಿಕೆಗಳನ್ನು ದಾಖಲಿಸಲಾಯಿತು.

ಉಕ್ರೇನ್ನಲ್ಲಿ ಸಮಗ್ರ ಶಾಂತಿ ಹಾಗೂ ನ್ಯಾಯಯುತ ಘನತೆಯನ್ನು ಸ್ಥಾಪಿಸಬೇಕೆಂದು ಜಿ20 ನಾಯಕರು ಪ್ರತಿಪಾದಿಸಿದ್ದಾರೆ.
ಕಳೆದ ವರ್ಷ ಇಂಡೋನೇಷ್ಯಾದಲ್ಲಿ ನಡೆದ ಶೃಂಗಸಭೆಯ ನಂತರ ಈ ಜಿ20 ಘೋಷಣೆಯು ಹೆಚ್ಚು ಸ್ಪಷ್ಟವಾಗಿದೆ. ಉಕ್ರೇನ್ ವಿರುದ್ಧ ರಷ್ಯಾದ ಆಕ್ರಮಣವನ್ನು ಜಿ20 ದೇಶಗಳು ಪ್ರಬಲವಾಗಿ ಖಂಡಿಸಿವೆ.
ಜಿ20 ನವದೆಹಲಿ ನಾಯಕರ ಘೋಷಣೆಯು ಪಾಶ್ಚಿಮಾತ್ಯ ರಾಷ್ಟ್ರಗಳಿಂದ ಒಂದು ಪ್ರಮುಖ ಏರಿಕೆಯಾಗಿ ಕಂಡುಬಂದಿದೆ, ಇದು ಉಕ್ರೇನ್ ಮತ್ತು ಯುದ್ಧದಲ್ಲಿ ರಷ್ಯಾದ ಪಾತ್ರವನ್ನು ಉಲ್ಲೇಖಿಸುವಾಗ ಬಲವಾದ ಭಾಷೆಯನ್ನು ಒತ್ತಾಯಿಸುತ್ತದೆ ಎಂದು ವರದಿಯಾಗಿದೆ.
ಉಕ್ರೇನ್ನಲ್ಲಿ ರಷ್ಯಾ ದೇಶವು ಆಕ್ರಮಣ ಮಾಡುತ್ತಿದೆ. ರಷ್ಯಾ ಪ್ರಧಾನಿ ವ್ಲಾಡಿಮಿರ್ ಪುಟಿನ್ ಅವರು ಜಾಗತಿಕ ನಾಯಕರ ಬೆದರಿಕೆಗೂ ಮಣಿಯುತ್ತಿಲ್ಲ. ಜಿ20 ಸಭೆಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹಾಗೂ ಚೀನಾ ದೇಶದ ಅಧ್ಯಕ್ಷ ಜಿನ್ಪಿಂಗ್ ಅವರು ಗೈರಾಗಿದ್ದಾರೆ. ಇದು ಜಿ20 ದೇಶಗಳ ಕೆಂಗಣ್ಣಿಗೆ ಗುರಿಯಾಗಿದೆ.
ಜಾಗತಿಕ ಆಹಾರ ಮತ್ತು ಇಂಧನ ಭದ್ರತೆ, ಸ್ಥೂಲ-ಹಣಕಾಸು ಸ್ಥಿರತೆ, ಹಣದುಬ್ಬರ ಮತ್ತು ಬೆಳವಣಿಗೆಗೆ ಸಂಬಂಧಿಸಿದಂತೆ ಜಿ20 ದೇಶಗಳು ಚರ್ಚೆ ನಡೆಸಿವೆ. ಉಕ್ರೇನ್ನಲ್ಲಿ ಇದರ ಪರಿಣಾಮಗಳನ್ನು ನಾಯಕರು ಎತ್ತಿ ತೋರಿಸಿದರು.
ಈ ವರ್ಷದ ಜಿ 20 ಸಭೆಯ ಸಾರಥ್ಯವನ್ನು ಭಾರತ ವಹಿಸಿಕೊಂಡಿದೆ. ಇದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications