G20 Summit: ದೆಹಲಿ ಮೆಟ್ರೋ ಸೇವಾ ಅವಧಿಯಲ್ಲಿ ಬದಲಾವಣೆ
ದೆಹಲಿ ಸೆಪ್ಟೆಂಬರ್ 8: ದೆಹಲಿ ಮೆಟ್ರೋ ಸೇವೆಗಳು ಎಲ್ಲಾ ಮಾರ್ಗಗಳಲ್ಲಿ ಸೆಪ್ಟೆಂಬರ್ 8, 9 ಮತ್ತು 10 ರಂದು ಬೆಳಿಗ್ಗೆ 4 ರಿಂದ ಪ್ರಾರಂಭವಾಗುತ್ತವೆ. ಜಿ 20 ಶೃಂಗಸಭೆಯ ದೃಷ್ಟಿಯಿಂದ ದೆಹಲಿ ಮೆಟ್ರೋ ಸೇವೆಗಳು ಬೆಳಿಗ್ಗೆ 4 ರಿಂದ ಪ್ರಾರಂಭವಾಗಲಿದೆ ಎಂದು DMRC ಬುಧವಾರ ತಿಳಿಸಿದ್ದಾರೆ.
ಅಲ್ಲದೆ ಸುಪ್ರೀಂ ಕೋರ್ಟ್, ಪಟೇಲ್ ಚೌಕ್ ಮತ್ತು ಆರ್ಕೆ ಆಶ್ರಮ ಮಾರ್ಗದ ಮೆಟ್ರೋ ನಿಲ್ದಾಣಗಳಲ್ಲಿ ಪಾರ್ಕಿಂಗ್ ಸೌಲಭ್ಯಗಳನ್ನು ಸೆಪ್ಟೆಂಬರ್ 8 ರಂದು ಬೆಳಿಗ್ಗೆ 4 ರಿಂದ ಸೆಪ್ಟೆಂಬರ್ 11 ರ ಮಧ್ಯಾಹ್ನದವರೆಗೆ ಬಂದ್ ಮಾಡಲಾಗುವುದು ಎಂದು ದೆಹಲಿ ಮೆಟ್ರೋ ರೈಲು ನಿಗಮ (ಡಿಎಂಆರ್ಸಿ) ತಿಳಿಸಿದೆ.

ಜಿ 20 ಶೃಂಗಸಭೆಗೆ ಭದ್ರತೆ, ಕಾನೂನು ಮತ್ತು ಸುವ್ಯವಸ್ಥೆ, ಸಂಚಾರ ವ್ಯವಸ್ಥೆಗಳನ್ನು ನಿರ್ವಹಿಸಲು ನಿಯೋಜಿಸಲಾದ ಇತರ ಸಹಾಯಕ ಏಜೆನ್ಸಿಗಳ ಜನರು ಮತ್ತು ಪೊಲೀಸ್ ಸಿಬ್ಬಂದಿ ಸಂಚಾರಕ್ಕೆ ಅನುಕೂಲವಾಗುವಂತೆ ನೋಡಿಕೊಳ್ಳಲಿದ್ದಾರೆ. ಮೆಗಾ ಈವೆಂಟ್ ಅನ್ನು ಸೆಪ್ಟೆಂಬರ್ 9 ರಿಂದ 10 ರವರೆಗೆ ಪ್ರಗತಿ ಮೈದಾನದಲ್ಲಿ ಹೊಸದಾಗಿ ನಿರ್ಮಿಸಲಾದ ಅಂತರರಾಷ್ಟ್ರೀಯ ಸಮಾವೇಶ ಮತ್ತು ಪ್ರದರ್ಶನ ಕೇಂದ್ರ ಭಾರತ್ ಮಂದಪಂನಲ್ಲಿ (Bharat Mandapam) ಆಯೋಜಿಸಲಾಗಿದೆ.
ದೆಹಲಿ ಮೆಟ್ರೋ ರೈಲು ಸೇವೆಗಳು ಎಲ್ಲಾ ಮಾರ್ಗಗಳ ಟರ್ಮಿನಲ್ ನಿಲ್ದಾಣಗಳಿಂದ ಸೆಪ್ಟೆಂಬರ್ 8, 9 ಮತ್ತು 10 ಮೂರು ದಿನಗಳ ಕಾಲ ಬೆಳಿಗ್ಗೆ 4 ರಿಂದ ಪ್ರಾರಂಭವಾಗುತ್ತವೆ ಎಂದು DMRC ಹೇಳಿಕೆಯಲ್ಲಿ ತಿಳಿಸಿದೆ. 10ರ ನಂತರ ಬೆಳಿಗ್ಗೆ 6 ಗಂಟೆಯ ನಂತರ ಮೆಟ್ರೋ ರೈಲುಗಳು ಎಲ್ಲಾ ಮಾರ್ಗಗಳಲ್ಲಿ ಚಲಿಸಲಿವೆ ಎಂದು ಅದು ಹೇಳಿದೆ.
ದೆಹಲಿಯಲ್ಲಿ ಶಾಲಾ-ಕಾಲೇಜುಗಳು ಮೂರು ದಿನ ಕ್ಲೋಸ್
ರಾಷ್ಟ್ರ ರಾಜಧಾನಿಯಲ್ಲಿ G20 ಶೃಂಗಸಭೆಯ ದೃಷ್ಟಿಯಿಂದ ಸೆಪ್ಟೆಂಬರ್ 8 ರಿಂದ ಸೆಪ್ಟೆಂಬರ್ 10 ರವರೆಗೆ ದೆಹಲಿಯಾದ್ಯಂತ ಎಲ್ಲಾ ಶಾಲೆಗಳು, ಕಾಲೇಜುಗಳು ಮತ್ತು ಕಚೇರಿಗಳು ಮುಚ್ಚಲ್ಪಡುತ್ತವೆ. ನಗರದಾದ್ಯಂತ ನಿಗದಿಯಾಗಿರುವ ಸಂಚಾರ ನಿರ್ಬಂಧಗಳು ಮತ್ತು ಕಾರ್ಯಕ್ರಮಗಳಿಂದ ಜನರಿಗೆ ಯಾವುದೇ ತೊಂದರೆಯಾಗದಂತೆ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ದೆಹಲಿ ಸಚಿವ ಅತಿಶಿ ಹೇಳಿದ್ದಾರೆ.

ಶನಿವಾರದಿಂದ ಪ್ರಾರಂಭವಾಗುವ ಎರಡು ದಿನಗಳ ಶೃಂಗಸಭೆಯಲ್ಲಿ ಹಲವಾರು ವಿಶ್ವ ನಾಯಕರು ಭಾಗವಹಿಸಲಿದ್ದಾರೆ. ವಿದೇಶಿ ಪ್ರತಿನಿಧಿಗಳನ್ನು ಸ್ವಾಗತಿಸಲು ರಾಷ್ಟ್ರ ರಾಜಧಾನಿ ಸಿದ್ಧವಾಗಿದೆ. "ನಮ್ಮ ದೇಶವು ಜಿ 20 ಶೃಂಗಸಭೆಯನ್ನು ಆಯೋಜಿಸುತ್ತಿರುವುದು ಅತ್ಯಂತ ಹೆಮ್ಮೆಯ ವಿಷಯವಾಗಿದೆ. ಜಿ 20 ಶೃಂಗಸಭೆ ನಡೆಯುವ ಪ್ರಗತಿ ಮೈದಾನದಲ್ಲಿ ಭವ್ಯವಾದ ಕನ್ವೆನ್ಷನ್ ಸೆಂಟರ್ ಅನ್ನು ಸಿದ್ಧಪಡಿಸಿದ್ದಕ್ಕೆ ನಾನು ಕೇಂದ್ರವನ್ನು ಅಭಿನಂದಿಸುತ್ತೇನೆ. ಜಿ 20 ಶೃಂಗಸಭೆಗಾಗಿ ಹತ್ತು ರಸ್ತೆಗಳನ್ನು ನವೀಕರಿಸಲಾಗಿದೆ ಮತ್ತು ವ್ಯಾಪಕವಾದ ಸೌಂದರ್ಯೀಕರಣ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ" ಎಂದು ಅತಿಶಿ ಹೇಳಿದರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications