ಹಿಮಾಚಲ ಪ್ರದೇಶಕ್ಕೆ ರೋಪ್ವೇಗಳು, ಶುದ್ಧ ಇಂಧನ ಯೋಜನೆಗಳ ಭರವಸೆ ನೀಡಿದ ಗಡ್ಕರಿ
ಭರ್ಮೌರ್, ನವೆಂಬರ್ 8: ಹಿಮಾಚಲ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗೆ ಬಿಜೆಪಿ ಪ್ರಚಾರ ಬಿರುಸುಗೊಂಡಿದೆ. ನವೆಂಬರ್ 12 ರಂದು ಚುನಾವಣೆ ನಡೆಯಲಿರುವ ಹಿಮಾಚಲ ಪ್ರದೇಶಕ್ಕೆ ಹೆಚ್ಚಿನ ರೋಪ್ವೇಗಳು, ಕೇಬಲ್ ರೈಲು ವ್ಯವಸ್ಥೆ, ಸುರಂಗಗಳು ಮತ್ತು ಶುದ್ಧ ಇಂಧನ ಯೋಜನೆಗಳ ಭರವಸೆಯನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ನೀಡಿದ್ದಾರೆ.
ಭರ್ಮೌರ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಜನಕ್ ರಾಜ್ ಪರ ಗಡ್ಕರಿ ಪ್ರಚಾರ ನಡೆಸುತ್ತಿದ್ದಾರೆ. ಚಂಬಾ ಜಿಲ್ಲೆಯ ಬುಡಕಟ್ಟು ಪ್ರದೇಶದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಗಡ್ಕರಿ, ''ಇಲ್ಲಿ ರಸ್ತೆಗಳನ್ನು ನಿರ್ಮಿಸುವುದು ಕಷ್ಟ. ಸುರಂಗ ಯೋಜನೆಗಳು, ರೋಪ್ವೇಗಳು ಮತ್ತು ಫ್ಯೂನಿಕ್ಯುಲರ್ ರೈಲು ವ್ಯವಸ್ಥೆಗಳ ಅವಶ್ಯಕತೆಯಿದೆ. ನಾವು ಈ ಪರ್ವತಗಳನ್ನು ವಿದ್ಯುತ್ ಸಾರಿಗೆ ವ್ಯವಸ್ಥೆಯ ಮೂಲಕ ಸಂಪರ್ಕಿಸಲು ಸಾಧ್ಯವಾದರೆ, ಇವುಗಳು ನಿಮ್ಮ ಪ್ರಯಾಣವನ್ನು ಸುಗಮಗೊಳಿಸುತ್ತದೆ ಮತ್ತು ಸಂಪರ್ಕವನ್ನು ಸುಧಾರಿಸುತ್ತದೆ, ''ಎಂದು ಅವರು ಹೇಳಿದರು.
ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಇದೇ ರೀತಿಯ ರೋಪ್ವೇ, ಕೇಬಲ್ ಕಾರ್ ಮತ್ತು ಫ್ಯೂನಿಕ್ಯುಲರ್ ರೈಲ್ವೆ ಯೋಜನೆಗಳನ್ನು ಪ್ರಾರಂಭಿಸಲಾಗಿದೆ ಎಂದು ಅವರು ಹೇಳಿದರು. "ಪಠಾಣ್ಕೋಟ್-ಭರ್ಮೌರ್ ಹೆದ್ದಾರಿ ಯೋಜನೆಗೆ ಸಹ ಅನುಮೋದನೆ ನೀಡಲಾಗಿದೆ ಮತ್ತು ನಿಮ್ಮ ಪ್ರಯಾಣವನ್ನು ಸುಗಮಗೊಳಿಸಲು ಉತ್ತಮ ಗುಣಮಟ್ಟದ ರಸ್ತೆಯನ್ನು ನಿರ್ಮಿಸಲಾಗುವುದು ಎಂದು ನಾನು ಭರವಸೆ ನೀಡುತ್ತೇನೆ" ಎಂದು ಗಡ್ಕರಿ ಹೇಳಿದರು.

ಸರ್ಕಾರವು ಕೈಗೊಂಡಿರುವ ವಿವಿಧ ಶುದ್ಧ ಇಂಧನ ಮತ್ತು ವಿದ್ಯುತ್ ಚಲನಶೀಲತೆ ಯೋಜನೆಗಳನ್ನು ಹೈಲೈಟ್ ಮಾಡಿದ ಕೇಂದ್ರ ಸಚಿವರು, ಹಿಮಾಚಲ ಪ್ರದೇಶದಲ್ಲಿ ಜಲವಿದ್ಯುತ್ ಯೋಜನೆಗಳು ಉದ್ಯೋಗವನ್ನು ಸೃಷ್ಟಿಸಲು ಸಹಾಯ ಮಾಡುತ್ತದೆ ಎಂದು ಹೇಳಿದರು.
ಇಲ್ಲಿ ಪೆಟ್ರೋಲ್ ಪಂಪ್ಗಳು ಮತ್ತು ಗ್ಯಾಸ್ ಸ್ಟೇಷನ್ಗಳ ಕೊರತೆಯ ಬಗ್ಗೆ ಮಾತನಾಡಿದ ಗಡ್ಕರಿ,"ಇಲ್ಲಿ ಸೌರ ಮೇಲ್ಛಾವಣಿ ಯೋಜನೆಗಳನ್ನು ಕಾರ್ಯಗತಗೊಳಿಸಬಹುದು, ಇದು ಎಲೆಕ್ಟ್ರಿಕ್ ಕಾರುಗಳು, ಬಸ್ಗಳು ಮತ್ತು ಆಟೋ-ರಿಕ್ಷಾಗಳಿಗೆ ಶಕ್ತಿ ನೀಡುತ್ತದೆ" ಎಂದು ಅವರು ಹೇಳಿದರು, ಅವರು ಸಾರಿಗೆ ಸಚಿವರಾಗಿ ದೇಶಕ್ಕೆ ಎಲೆಕ್ಟ್ರಿಕ್ ಬಸ್ಸುಗಳು, ಕಾರುಗಳು ಮತ್ತು ರಿಕ್ಷಾಗಳನ್ನು ತಂದಿದ್ದಾರೆ ಮತ್ತು ಶೀಘ್ರದಲ್ಲೇ ಎಲೆಕ್ಟ್ರಿಕ್ ಟ್ರ್ಯಾಕ್ಟರ್ಗಳು ಮತ್ತು ಟ್ರಕ್ಗಳನ್ನು ಪ್ರಾರಂಭಿಸಲಾಗುವುದು ಎಂದಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ನವೆಂಬರ್ 12 ರಂದು ಮತದಾನ ನಡೆಯಲಿದೆ ಮತ್ತು ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications