ರೈತ ಗಜೇಂದ್ರ ಸಿಂಗ್ ಆತ್ಮಹತ್ಯೆ, ಮೂರು ಪ್ರಶ್ನೆಗಳು
ನವದೆಹಲಿ, ಏ. 23 : ಆಮ್ ಆದ್ಮಿ ಪಕ್ಷ ಬುಧವಾರ ಆಯೋಜಿಸಿದ್ದ ಸಮಾವೇಶದ ಸಂದರ್ಭದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮುಂತಾದ ನಾಯಕರ ಸಮ್ಮುಖದಲ್ಲಿಯೇ ರಾಜಸ್ಥಾನದಿಂದ ಬಂದಿದ್ದ ರೈತ ಗಜೇಂದ್ರ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರೈತ ಆತ್ಮಹತ್ಯೆ ನಂತರ ರಾಜಕೀಯ ಪಕ್ಷಗಳ ಕೆಸರೆರಚಾಟ ಆರಂಭವಾಗಿದೆ.
ರೈತ ಗಜೇಂದ್ರ ಸಿಂಗ್ ಆತ್ಮಹತ್ಯೆ ಕುರಿತು ತನಿಖೆ ನಡೆಸಲು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಆದೇಶ ನೀಡಿದ್ದಾರೆ. ದೆಹಲಿ ಪೊಲೀಸರು ತನಿಖೆಗೆ ವಿಶೇಷ ತಂಡವನ್ನೂ ರಚಿಸಿದ್ದಾರೆ. ರೈತನ ಸಾವಿನ ಕುರಿತು ಮೂರು ಪ್ರಶ್ನೆಗಳಿಗೆ ಈಗ ಉತ್ತರ ಬೇಕಾಗಿದೆ.

* ಬೆಳೆಹಾನಿಯಿಂದಾಗಿ ಗಜೇಂದ್ರ ಸಿಂಗ್ ಆತ್ಮಹತ್ಯೆ ಮಾಡಿಕೊಂಡರೆ?
* ಸಮಾವೇಶದ ಬಗ್ಗೆ ದೆಹಲಿ ಪೊಲೀಸರು ನೀಡಿದ್ದ ಪತ್ರವನ್ನು ಆಪ್ ನಿರ್ಲಕ್ಷಿಸಿತೇ?
* ಸಮಾವೇಶಕ್ಕೆ ಗಜೇಂದ್ರ ಸಿಂಗ್ಗೆ ಆಮ್ ಆದ್ಮಿ ಪಕ್ಷ ಆಹ್ವಾನ ನೀಡಿತ್ತೆ?
ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ? : ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು ಗಜೇಂದ್ರ ಸಿಂಗ್ ಅವರು ಬೆಳೆದ ಬೆಳೆಗಳು ಹಾನಿಯಾದಾಗ ರಾಜಸ್ಥಾನ ಸರ್ಕಾರ ಪರಿಹಾರ ನೀಡಲಿಲ್ಲ. ಆದ್ದರಿಂದ ಅವರು ಆತ್ಮಹತ್ಯೆ ಮಾಡಿಕೊಂಡರು ಎಂದು ಆರೋಪಿಸಿವೆ. [ರೈತ ಆತ್ಮಹತ್ಯೆ: ಕೇಜ್ರಿವಾಲ್ ಗೆ ಛೀಮಾರಿ]
ಆದರೆ, ರಾಜಸ್ಥಾನ ಬೆಳೆಹಾನಿಯ ಪ್ರಮಾಣ ಶೇ 33ರಷ್ಟು ಮಾತ್ರ. ಅದಕ್ಕೆ ನಿಯಮದಂತೆ ಪರಿಹಾರವನ್ನು ವಿತರಣೆ ಮಾಡಲಾಗಿದೆ ಎಂದು ಹೇಳಿದೆ. ರಾಜಸ್ಥಾನದ ದೌಸ ಗ್ರಾಮದಲ್ಲಿ ಗಜೇಂದ್ರ ಸಿಂಗ್ ಕುಟುಂಬ ನೆಲಸಿತ್ತು ಮತ್ತು ಅವರು ಆರ್ಥಿಕವಾಗಿ ಇತರ ಕುಟುಂಬಗಳಿಗೆ ಹೋಲಿಕೆ ಮಾಡಿದಾಗ ಸದೃಢವಾಗಿದ್ದರು ಎಂದು ಹೇಳಿದೆ. [ಅಣ್ಣಾ ಜೊತೆ ಕೈ ಜೋಡಿಸಿದ ಕೇಜ್ರಿವಾಲ್]
ಆಮ್ ಆದ್ಮಿ ಪಕ್ಷದ ನಿರ್ಲಕ್ಷ್ಯ : ಕೇಂದ್ರ ಸರ್ಕಾರದ ಭೂಸ್ವಾಧೀನ ಕಾಯ್ದೆ ವಿರೋಧಿ ಸಮಾವೇಶವನ್ನು ಜಂತರ್ ಮಂತರ್ನಿಂದ ಬೇರೆ ಸ್ಥಳಕ್ಕೆ ವರ್ಗಾಯಿಸುವಂತೆ ದೆಹಲಿ ಪೊಲೀಸರು ಆಮ್ ಆದ್ಮಿ ಪಕ್ಷಕ್ಕೆ ಪತ್ರ ಬರೆದಿದ್ದರು. ರಾಮ್ಲೀಲಾ ಮೈದಾನದಂತಹ ಪ್ರದೇಶದಲ್ಲಿ ಜನರನ್ನು ನಿಯಂತ್ರಿಸುವುದು ಸುಲಭ ಎಂದು ಪತ್ರದಲ್ಲಿ ತಿಳಿಸಲಾಗಿತ್ತು. ಆದರೆ, ಆಮ್ ಆದ್ಮಿ ಪಕ್ಷ ಈ ಪತ್ರವನ್ನು ನಿರ್ಲಕ್ಷಿಸಿತ್ತೇ? ಎಂಬುದು ಪ್ರಶ್ನೆಯಾಗಿದೆ.
ಗಜೇಂದ್ರ ಸಿಂಗ್ನನ್ನು ಪಕ್ಷ ಆಹ್ವಾನಿಸಿತ್ತೇ? : ಆತ್ಮಹತ್ಯೆ ಮಾಡಿಕೊಂಡ ರೈತ ಗಜೇಂದ್ರ ಸಿಂಗ್ನನ್ನು ಆಮ್ ಆದ್ಮಿ ಪಕ್ಷವೇ ಸಮಾವೇಶಕ್ಕಾಗಿ ಆಹ್ವಾನಿಸಿತ್ತೇ? ಎಂಬುದು ಪ್ರಮುಖ ಪ್ರಶ್ನೆಯಾಗಿದೆ. ರಾಜಸ್ಥಾನದಲ್ಲಿ ಕೆಲವು ದಿನಗಳ ಹಿಂದೆ ನಡೆದ ಕಿಸಾನ್ ವಿಕಾಸ್ ಸಮಾವೇಶದಲ್ಲಿಯೂ ಸಿಂಗ್ ಪಾಲ್ಗೊಂಡಿದ್ದ.
ಗಜೇಂದ್ರ ಸಿಂಗ್ ಅವರ ಜೊತೆ ಆಗಮಿಸಿದವರ ಪ್ರಕಾರ ಅವರಿಗೆ ಸಮಾವೇಶಕ್ಕಾಗಿ ಸಿಂಗ್ಗೆ ಆಹ್ವಾನ ನೀಡಲಾಗಿತ್ತು. ದೌಸಾ ಗ್ರಾಮದಿಂದ ಸಿಂಗ್ಗೆ ಮಾತ್ರ ಆಹ್ವಾನವಿತ್ತು. ಪ್ರಕರಣದ ತನಿಖೆ ನಡೆಸುವ ಪೊಲೀಸರು ಈ ಎಲ್ಲಾ ವಿವರಗಳನ್ನು ಕಲೆ ಹಾಕಿ ತನಿಖೆಯನ್ನು ಮುಂದುವರೆಸಲಿದ್ದಾರೆ. [ಪಿಟಿಐ ಚಿತ್ರ]
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications