ಹಾರ್ದಿಕ್ ಪಟೇಲ್ ವಿರುದ್ಧ ಕೇಸು ದಾಖಲಿಸಿದ ಪೊಲೀಸರು
ಗಾಂಧಿನಗರ, ಡಿಸೆಂಬರ್ 01: ಅನುಮತಿ ಪಡೆಯದೆ ಚುನಾವಣಾ ಪ್ರಚಾರ ಸಮಾವೇಶ ನಡೆಸಿದ್ದಕ್ಕಾಗಿ ಪಾಟಿದಾರ್ ಮುಖಂಡ ಹಾರ್ದಿಕ್ ಪಟೇಲ್ ವಿರುದ್ಧ ಗಾಂಧಿನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮನ್ಸಾದಲ್ಲಿ ಆಯೋಜಿಸಿದ್ದ ಚುನಾವಣಾ ಸಮಾವೇಶದಿಂದ ಶಾಂತಿ ಭಂಗವಾಗಿದೆ, ಕಾನೂನು ಉಲ್ಲಂಘನೆಯಾಗಿದೆ ಎಂದು ಹಾರ್ದಿಕ್ ಹಾಗೂ ಆರು ಮಂದಿಯ ವಿರುದ್ಧ ಗಾಂಧಿನಗರ ಪೊಲೀಸರು ದೂರು ದಾಖಲಿಸಲಾಗಿದೆ.

ಹಾರ್ದಿಕ್ ಹೊರತಾಗಿ ಸಮಾವೇಶವನ್ನು ಸಂಘಟಿಸಿದ್ದ ಉಮಿಯಾ ಡೆಕೊರೇಟರ್ಸ್ ಮಾಲಕ ಧರ್ಮೇಶ್ ಪಟೇಲ್ ವಿರುದ್ಧ ಐಪಿಸಿ ಸೆಕ್ಷನ್ 188 ಅನ್ವಯ ಪ್ರಕರಣ ದಾಖಲಾಗಿದೆ. ಕಾನೂನು ಉಲ್ಲಂಘಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಗಾಂಧಿನಗರ ಎಸ್ಪಿ ವೀರೇಂದ್ರ ಸಿಂಗ್ ಯಾದವ್ ಹೇಳಿದ್ದಾರೆ.
ಕಳೆದೆರಡು ವರ್ಷಗಳಿಂದ ಹಾರ್ದಿಕ್ ಪಟೇಲ್ ಅವರು ರಾಜ್ಯಾದ್ಯಂತ ಹಲವಾರು ಪ್ರತಿಭಟನಾ ಜಾಥಗಳನ್ನು ಆಯೋಜಿಸುತ್ತಿದ್ದಾರೆ. ಸರಕಾರದ ಅಥವಾ ಸ್ಥಳೀಯಾಡಳಿತಗಳ ಅನುಮತಿ ಪಡೆಯುತ್ತಿಲ್ಲ ಎಂದು ಆರೋಪಿಸಲಾಗಿದೆ.
ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಹುಟ್ಟೂರು ಮನ್ಸಾದಲ್ಲಿ ಬಿಜೆಪಿಯನ್ನು ನಡುಗಿಸುವಂಥ ಮಾಹಿತಿ ಬಹಿರಂಗ ಪಡಿಸುವುದಾಗಿ ಘೋಷಿಸಿದ್ದ ಹಾರ್ದಿಕ್ ಅವರು ಏನೂ ಹೇಳಿರಲಿಲ್ಲ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications