Gas Bill: ಗ್ಯಾಸ್ ಬಿಲ್ ಹೆಸರಲ್ಲಿ 1 ಕೋಟಿ ರೂಪಾಯಿಗೂ ಹೆಚ್ಚು ಲೂಟಿ ಮಾಡಿದ ಸೈಬರ್ ವಂಚಕರು
ಭಾರತದಲ್ಲಿ ಸೈಬರ್ ಅಪರಾಧಗಳ ಹಾವಳಿ ಮಿತಿಮೀರುತ್ತಿದ್ದು, ಈಗ ಮುಂಬೈ ಮೂಲದ ಹೊಸ ಮಾದರಿಯ ವಂಚನೆಯ ಜಾಲವೊಂದು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದೆ. ಗ್ಯಾಸ್ ಕಂಪನಿಯ ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡುವ ವಂಚಕರು, ಕೇವಲ ಕೆಲವೇ ನಿಮಿಷಗಳಲ್ಲಿ ಜನರ ಬ್ಯಾಂಕ್ ಖಾತೆಗಳನ್ನು ಪೂರ್ಣವಾಗಿ ಖಾಲಿ ಮಾಡುತ್ತಿದ್ದಾರೆ. ಸದ್ಯ ಗ್ಯಾಸ್ ಬಿಲ್ ಹೆಸರಲ್ಲಿ 1 ಕೋಟಿ ರೂಪಾಯಿ ಲೂಟಿ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ವರದಿಯಾದ ಮಾಹಿತಿಯ ಪ್ರಕಾರ, ಕಳೆದ ಒಂದು ತಿಂಗಳ ಅವಧಿಯಲ್ಲೇ ಇಂತಹ ವಂಚನೆಯ ಪ್ರಕರಣಗಳಿಂದ ಸುಮಾರು 1 ಕೋಟಿ ರೂಪಾಯಿಗೂ ಅಧಿಕ ಹಣ ಲೂಟಿಯಾಗಿದೆ. ಈ ಜಾಲವು ಗ್ರಾಹಕರನ್ನು ಬೆದರಿಸಿ ಅವರ ಮೊಬೈಲ್ ಮೇಲೆ ಸಂಪೂರ್ಣ ನಿಯಂತ್ರಣ ಸಾಧಿಸುವ ಮೂಲಕ ಈ ಕೃತ್ಯ ಎಸಗುತ್ತಿದೆ. ಸೈಬರ್ ಅಪರಾಧಗಳ ಅಲೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಈಗ ವಂಚಕರು 'ಗ್ಯಾಸ್ ಕನೆಕ್ಷನ್' ಕಡಿತಗೊಳಿಸುವ ಬೆದರಿಕೆ ಹಾಕಿ ಜನರ ಬ್ಯಾಂಕ್ ಖಾತೆಗೆ ಕನ್ನ ಹಾಕುತ್ತಿದ್ದಾರೆ. ಕಳೆದ ಒಂದು ತಿಂಗಳಲ್ಲೇ ಮುಂಬೈನಲ್ಲಿ ಇಂತಹ ಪ್ರಕರಣಗಳಿಂದ ಸುಮಾರು ಒಂದು ಕೋಟಿಗೂ ಅಧಿಕ ಹಣ ಲೂಟಿಯಾಗಿರುವುದು ಆತಂಕ ಮೂಡಿಸಿದೆ.

ವಂಚನೆ ಹೇಗೆ?
ಈ ವಂಚನೆಯು ಅತ್ಯಂತ ವ್ಯವಸ್ಥಿತವಾದ ಹಂತಗಳಲ್ಲಿ ನಡೆಯುತ್ತದೆ. ಮೊದಲಿಗೆ ಸಂತ್ರಸ್ತರಿಗೆ ಎಸ್ಎಂಎಸ್ (SMS) ಅಥವಾ ವಾಟ್ಸಾಪ್ ಮೂಲಕ ಸಂದೇಶವೊಂದು ಬರುತ್ತದೆ. ಅದರಲ್ಲಿ "ನಿಮ್ಮ ಗ್ಯಾಸ್ ಬಿಲ್ ಪಾವತಿ ಬಾಕಿ ಇದೆ, ಕೂಡಲೇ ಪಾವತಿಸದಿದ್ದರೆ ಇಂದು ರಾತ್ರಿಯೇ ನಿಮ್ಮ ಗ್ಯಾಸ್ ಕನೆಕ್ಷನ್ ಕಡಿತಗೊಳಿಸಲಾಗುವುದು" ಎಂದು ಎಚ್ಚರಿಕೆ ನೀಡಲಾಗಿರುತ್ತದೆ. ಈ ಸಂದೇಶದಿಂದ ಗ್ರಾಹಕರು ಗಾಬರಿಗೊಂಡ ತಕ್ಷಣ, ವಂಚಕರು ಕಂಪನಿಯ ಪ್ರತಿನಿಧಿಗಳಂತೆ ಕರೆ ಮಾಡುತ್ತಾರೆ. ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಿಕೊಡುವುದಾಗಿ ನಂಬಿಸಿ, ಒಂದು ಮೊಬೈಲ್ ಅಪ್ಲಿಕೇಶನ್ (APK ಫೈಲ್) ಲಿಂಕ್ ಕಳುಹಿಸಿ ಅದನ್ನು ಡೌನ್ಲೋಡ್ ಮಾಡುವಂತೆ ಸಂತ್ರಸ್ತರನ್ನು ಒತ್ತಾಯಿಸುತ್ತಾರೆ.
ಒಮ್ಮೆ ಗ್ರಾಹಕರು ಆ ಅಪಾಯಕಾರಿ ಎಪಿಕೆ ಫೈಲ್ ಅನ್ನು ಇನ್ಸ್ಟಾಲ್ ಮಾಡಿದರೆ, ವಂಚಕರಿಗೆ ಆ ಮೊಬೈಲ್ನ ಸಂಪೂರ್ಣ ನಿಯಂತ್ರಣ ಲಭ್ಯವಾಗುತ್ತದೆ. ಈ ಅಪ್ಲಿಕೇಶನ್ ಮೂಲಕ ವಂಚಕರು ಸಂತ್ರಸ್ತರ ಬ್ಯಾಂಕಿಂಗ್ ವಿವರಗಳು, ಪಾಸ್ವರ್ಡ್ಗಳು ಮತ್ತು ಮೊಬೈಲ್ಗೆ ಬರುವ ಒಟಿಪಿ (OTP) ಗಳನ್ನು ಸುಲಭವಾಗಿ ವೀಕ್ಷಿಸುತ್ತಾರೆ. ಸಂತ್ರಸ್ತರಿಗೆ ತಿಳಿಯದಂತೆಯೇ ಅವರ ಖಾತೆಯಿಂದ ಹಣವನ್ನು ವರ್ಗಾವಣೆ ಮಾಡಿಕೊಳ್ಳಲಾಗುತ್ತದೆ. ಇಂತಹ ವಂಚನೆಗಳಿಂದ ಪಾರಾಗಲು ಅಪರಿಚಿತರು ಕಳುಹಿಸುವ ಯಾವುದೇ ಲಿಂಕ್ಗಳನ್ನು ಕ್ಲಿಕ್ ಮಾಡಬಾರದು ಹಾಗೂ ಅಧಿಕೃತ ಆಪ್ಗಳನ್ನು ಮಾತ್ರ ಬಳಸಬೇಕು ಎಂದು ಸೈಬರ್ ತಜ್ಞರು ಎಚ್ಚರಿಸಿದ್ದಾರೆ.

ಸಾರ್ವಜನಿಕರಿಗೆ ಎಚ್ಚರಿಕೆ
ಯಾವುದೇ ಗ್ಯಾಸ್ ಕಂಪನಿಯು ಎಸ್ಎಮ್ಎಸ್ ಮೂಲಕ ಆಪ್ ಡೌನ್ಲೋಡ್ ಮಾಡಲು ಅಥವಾ ವೈಯಕ್ತಿಕ ಮಾಹಿತಿ ಕೇಳಲು ಲಿಂಕ್ ಕಳುಹಿಸುವುದಿಲ್ಲ. ಗ್ಯಾಸ್ ಬಿಲ್ ಪಾವತಿಸಲು ಕಂಪನಿಯ ಅಧಿಕೃತ ವೆಬ್ಸೈಟ್ ಅಥವಾ ಪ್ಲೇ-ಸ್ಟೋರ್ನಲ್ಲಿರುವ ಅಧಿಕೃತ ಆಪ್ಗಳನ್ನು ಮಾತ್ರ ಬಳಸಿ. ವಾಟ್ಸಾಪ್ನಲ್ಲಿ ಯಾರೋ ಕಳುಹಿಸಿದ ಎಪಿಕೆ ಫೈಲ್ಗಳನ್ನು ಎಂದಿಗೂ ಇನ್ಸ್ಟಾಲ್ ಮಾಡಬೇಡಿ. ಕರೆ ಮಾಡಿದ ವ್ಯಕ್ತಿ ಎಷ್ಟೇ ಒತ್ತಾಯಿಸಿದರೂ ನಿಮ್ಮ ಬ್ಯಾಂಕ್ ವಿವರ ಅಥವಾ ಒಟಿಪಿ ನೀಡಬೇಡಿ.
ಇಂತಹ ಬೆದರಿಕೆ ಕರೆ ಬಂದಾಗ ಗಾಬರಿಯಾಗದೆ, ಗ್ಯಾಸ್ ಕಂಪನಿಯ ಅಧಿಕೃತ ಕಸ್ಟಮರ್ ಕೇರ್ ನಂಬರ್ಗೆ ಕರೆ ಮಾಡಿ ವಿಚಾರಿಸಿ. ಸೈಬರ್ ವಂಚನೆಗೆ ಒಳಗಾದರೆ ತಕ್ಷಣವೇ ಸೈಬರ್ ಕ್ರೈಮ್ ಹೆಲ್ಪ್ಲೈನ್ ನಂಬರ್ 1930ಕ್ಕೆ ಕರೆ ಮಾಡಿ ದೂರು ದಾಖಲಿಸಿ ಅಥವಾ www.cybercrime.gov.in ವೆಬ್ಸೈಟ್ನಲ್ಲಿ ದೂರು ನೀಡಿ. ಹಣ ಕಳೆದುಕೊಂಡ ತಕ್ಷಣ ದೂರು ನೀಡಿದರೆ ಹಣವನ್ನು ವಾಪಸ್ ಪಡೆಯುವ ಸಾಧ್ಯತೆ ಹೆಚ್ಚಿರುತ್ತದೆ.
-
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ













Click it and Unblock the Notifications