First Rail: ದಶಕ ಪೂರೈಸಿದ ದೇಶದ ಮೊದಲ ಸೆಮಿ-ಹೈ-ಸ್ಪೀಡ್ ರೈಲು; ಅದರ ಸಂಚಾರ ವೇಗ, ಮಾರ್ಗದ ವಿವರ
ದಶಕದ ಹಿಂದೆ ಅಂದಿನ ರೈಲ್ವೆ ಸಚಿವ ಸುರೇಶ್ ಪ್ರಭಾಕರ್ ಪ್ರಭು ಅವರು ದೆಹಲಿಯ ಹಜರತ್ ನಿಜಾಮುದ್ದೀನ್ (NZM) ರೈಲ್ವೆ ನಿಲ್ದಾಣದಿಂದ ಉದ್ಘಾಟಿಸಿದ್ದ 'ಭಾರತದ ಮೊದಲ ಸೆಮಿ-ಹೈ-ಸ್ಪೀಡ್ ರೈಲು' ಇಂದು ಭಾನುವಾರ ಏಪ್ರಿಲ್ 5ಕ್ಕೆ 10 ವರ್ಷ ಪೂರೈಸಿದೆ. ಸದ್ಯ ಉತ್ತರ ರೈಲ್ವೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಈ ರೈಲಿನ ಮಾರ್ಗ, ವೇಗ ಎಷ್ಟಿದೆ, ಇನ್ನಿತರ ವಿವರ ಇಲ್ಲಿದೆ.
'ಗತಿಮಾನ್ ಎಕ್ಸ್ಪ್ರೆಸ್' ಹೆಸರಿನ ರೈಲು ಭಾರತದ ಮೊದಲ ಸೆಮಿ-ಹೈ-ಸ್ಪೀಡ್ ರೈಲು ಆಗಿ ಹತ್ತು ವರ್ಷಗಳ ಹಿಂದೆ ಸೇವೆ ಆರಂಭಿಸಿತ್ತು. ಹಜರತ್ ನಿಜಾಮುದ್ದೀನ್ (NZM) ಮತ್ತು ಆಗ್ರಾ ಕ್ಯಾಂಟ್ ನಡುವೆ ಸಂಚಾರ ಶುರು ಮಾಡಿತ್ತು. ನಂತರ ಅದರ ಸೇವೆಯನ್ನು 2018 ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಬುಂದೇಲ್ಖಂಡ್ ವರೆಗೂ ವಿಸ್ತರಣೆ ಮಾಡಲಾಯಿತು. ಸದ್ಯ ಈ ರೈಲು ವಿರಂಗನ ಲಕ್ಷ್ಮಿಬಾಯಿ ಝಾನ್ಸಿ ಜಂಕ್ಷನ್ ವರೆಗೆ ಸೇವೆ ನೀಡುತ್ತಿದೆ ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ.

ಗ್ವಾಲಿಯರ್ ಮತ್ತು ಝಾನ್ಸಿ ಮತ್ತು ಸುತ್ತಮುತ್ತಲಿನ ವಿವಿಧ ಪ್ರವಾಸಿ ತಾಣಗಳಿಗೆ ಈ ರೈಲು ಮಹತ್ವದ ಸೇವೆ ನೀಡುತ್ತಿತ್ತು. ಪ್ರವಾಸಿಗರ ಸಂಚಾರ ಸುಗಮ ಗೊಳಿಸಿದ ಕೀರ್ತಿ ಈ ರೈಲಿಗೂ ಸಲ್ಲಿಸುತ್ತದೆ. ಪ್ರತಿ ಗಂಟೆಗೆ ಗರಿಷ್ಠ 160 ಕಿಲೋ ಮೀಟರ್ ವೇಗದಲ್ಲಿ ಚಲಿಸುವ ಶಕ್ತಿ ಇದಕ್ಕಿದೆ.
ಗತಿಮಾನ್ ಎಕ್ಸ್ಪ್ರೆಸ್ ರೈಲು ನಿಲ್ದಾಣಗಳು, ರೈಲು ಸಂಖ್ಯೆ
ಹಜರತ್ ನಿಜಾಮುದ್ದೀನ್ ಮತ್ತು ವಿರಂಗನ ಲಕ್ಷ್ಮಿಬಾಯಿ ಝಾನ್ಸಿ ಮಧ್ಯದ ಮಾರ್ಗದಲ್ಲಿ ಸಂಚರಿಸುವ ಈ ರೈಲು (12050/12049) ಎರಡು ರೈಲು ನಿಲ್ದಾಣಗಳಲ್ಲಿ ನಿಲುಗಡೆ ನೀಡುತ್ತದೆ. ಆಗ್ರಾ ಕ್ಯಾಂಟ್ ಮತ್ತು ಗ್ವಾಲಿಯರ್ ನಿಲ್ದಾಣದಲ್ಲಿ ನಿಲ್ಲುತ್ತದೆ. ವಾರದಲ್ಲಿ ಒಂದು ದಿನ (ಶುಕ್ರವಾರ) ಬಿಟ್ಟು ಉಳಿದೆಲ್ಲ ದಿನಗಳು ಸೇವೆ ನೀಡುವ ರೈಲಾಗಿದೆ.
ಗತಿಮಾನ್ ಎಕ್ಸ್ಪ್ರೆಸ್ ರೈಲು ಎರಡು ಎಕ್ಸಿಕ್ಯುಟಿವ್ ಎಸಿ ಚೇರ್ ಕಾರ್ ಮತ್ತು ಎಂಟು ಎಸಿ ಚೇರ್ ಕಾರ್ ಕೋಚ್ಗಳನ್ನು ಹೊಂದಿದ್ದು, 5500 ಎಚ್ಪಿ ಎಲೆಕ್ಟ್ರಿಕ್ ಲೋಕೋಮೋಟಿವ್ ಎಂಜಿನ್ನಿಂದ ಸಂಚರಿಸುತ್ತದೆ. ಕೋಚ್ಗಳಲ್ಲಿ ಬಯೋ ಟಾಯ್ಲೆಟ್ಗಳನ್ನು ಅಳವಡಿಸಲಾಗಿದೆ. ಈ ರೈಲನ್ನು ರೈಲ್ ಕೋಚ್ ಫ್ಯಾಕ್ಟರಿ (RCF) ತಯಾರಿಸಿದೆ. ವಿಭಿನ್ನ ಬಣ್ಣಗಳಿಂದ ರೈಲು ಕೋಚ್ಗಳ ಹೊರಭಾಗ ಸಿಂಗರಿಸಲಾಗಿದೆ. ಒಳಾಂಗಣದಲ್ಲಿ ಅಗತ್ಯ ಸೌಕರ್ಯ ಕಲ್ಪಿಸಲಾಗಿದೆ. ದಶಕದಿಂದಲೂ ಕೋಟ್ಯಾಂತರ ಪ್ರಯಾಣಿಕರಿಗೆ ಆರಾಮದಾಯಕ ಸೇವೆ ನೀಡುತ್ತಾ ಬಂದಿದೆ.
ಹಜರತ್ ನಿಜಾಮುದ್ದೀನ್ (ಎನ್ಜೆಡ್ಎಂ) ಮತ್ತು ವಿರಂಗನ ಲಕ್ಷ್ಮಿಬಾಯಿ ಝಾನ್ಸಿ ಜಂಕ್ಷನ್ ವರೆಗೆ ಚೇರ್ ಕಾರ್ ನಲ್ಲಿ ಚಲಿಸಲು ಒಬ್ಬರಿಗೆ ಟಿಕೆಟ್ 1,140 ರೂ., ಅದೇ ಎಕ್ಸಿಕ್ಯೂಟಿವ್ ಕ್ಲಾಸ್ ದರ 2,300 ರೂ. ಇದೆ. ಇವತ್ತಿಗೂ ಈ ಭಾಗದ ಪ್ರಯಾಣಿಕರ ಪ್ರಮುಖ ರೈಲು ಇದಾಗಿದೆ.
-
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
Amrit Bharat Express 3.0: ಹೊಸ ವಿನ್ಯಾಸ, ಎಸಿ ಕೋಚ್ ಸಹಿತ ಅಮೃತ್ ಭಾರತ್ ರೈಲು ಸೇವೆ -
High Speed Rail: ಬೆಂಗಳೂರು ಸೇರಿ 3 ಹೈಸ್ಪೀಡ್ ರೈಲು ಕಾರಿಡಾರ್ ಡಿಪಿಆರ್ 2027ಕ್ಕೆ ಪೂರ್ಣ, ವಿವರ -
Railway Alert: ಚನ್ನಸಂದ್ರ ನಿಲ್ದಾಣದಲ್ಲಿ ಕಾಮಗಾರಿ, ವಿವಿಧ ರೈಲುಗಳ ಮಾರ್ಗ ಬದಲಾವಣೆ, ಸಂಚಾರ ರದ್ದು -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು











Click it and Unblock the Notifications