BMC Elections: ಮಹಾರಾಷ್ಟ್ರ ಸ್ಥಳೀಯ ಚುನಾವಣೆಯಲ್ಲಿ ಗೌರಿ ಲಂಕೇಶ್ ಹತ್ಯೆ ಆರೋಪಿ ಭರ್ಜರಿ ಗೆಲುವು
ಮುಂಬೈ: ಕರ್ನಾಟಕದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಶ್ರೀಕಾಂತ್ ಪಂಗಾರ್ಕರ್ ಅವರು ಬೃಹನ್ ಮುಂಬೈ ಮಹಾನಗರ ಪಾಲಿಕೆ 2026 ಜಲ್ನಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದಾರೆ. ಬಹುಮತಗಳಿಂದ ಇತರ ಪಕ್ಷಗಳ ಅಭ್ಯರ್ಥಿಗಳನ್ನು ಸೋಲಿಸಿ ಜಲ್ನಾ ದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದಿದ್ದಾರೆ. ಫಲಿತಾಂಶ ಹೊರ ಬೀಳುತ್ತಿದ್ದಂತೆ ತಮ್ಮ ಬೆಂಬಲಿಗರೊಂದಿಗೆ ವಿಜಯೋತ್ಸವ ಆಚರಿಸಿದರು.
ಮಹಾರಾಷ್ಟ್ರದ ಬಿಎಂಸಿ ಚುನಾವಣೆ ಫಲಿತಾಂಶವು ರಾಷ್ಟ್ರಮಟ್ಟದಲ್ಲಿ ಗಮನ ಸೆಳೆಯುತ್ತಿದೆ. ಜಲ್ನಾದಲ್ಲಿ ಗೆದ್ದಿರುವ ಈ ಶ್ರೀಕಾಂತ್ ಅವರು 2017 ರಲ್ಲಿ ಕರ್ನಾಟಕದ ಬೆಂಗಳೂರಿನ ಆರ್ಆರ್. ನಗರದಲ್ಲಿ ನಡೆದಿದ್ದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಆರೋಪಿಯಾಗಿದ್ದರು. ಅವರು ಜಲ್ನಾದಲ್ಲಿ ಬಿಜೆಪಿ ಹಾಗೂ ಇತರ ಪಕ್ಷಗಳ ಅಭ್ಯರ್ಥಿಗಳನ್ನು ಸೋಲಿಸಿದರು. ಒಟ್ಟು 2,621 ಮತಗಳ ಅಂತರದಿಂದ ಗೆದ್ದು ಬೀಗಿದರು.

ಶ್ರೀಕಾಂತ್ ಅವರಿದ್ದ ವಾರ್ಡ್ನಲ್ಲಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯು ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ. ಹೀಗಾಗಿ ಸ್ಪರ್ಧೆಯು ಸ್ವತಂತ್ರರು ಮತ್ತು ಪ್ರತಿಸ್ಪರ್ಧಿ ಪಕ್ಷಗಳ ಅಭ್ಯರ್ಥಿಗಳ ನಡುವೆ ನಡೆಯಿತು. ಇಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣವು ವಿಚಾರಣೆಯಲ್ಲಿದ್ದಾಗಲೂ ಶ್ರೀಕಾಂತ್ ಪಂಗಾರ್ಕರ್ ಅವರು ಬಿಎಂಸಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದು ಗಮನ ಸೆಳೆಯಿತು.
2017 ರಂದು ಕರ್ನಾಟಕದ ಬೆಂಗಳೂರಿನಲ್ಲಿ ಅವರ ಮನೆಯ ಹೊರಗೆ ಪತ್ರಕರ್ತೆ ಮತ್ತು ಕಾರ್ಯಕರ್ತೆ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ತೆ ಮಾಡಲಾಗಿತ್ತು. ಈ ಹತ್ಯೆಯು ರಾಷ್ಟ್ರದಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ಅಭಿವ್ಯಕ್ತಿ ಸ್ವಾತಂತ್ರ್ಯ ಹರಣವಾಘಿದೆ. ಭಿನ್ನಾಭಿಪ್ರಾಯ ಮತ್ತು ರಾಜಕೀಯ ಅಸಹಿಷ್ಣುತೆಯ ಬಗ್ಗೆ ಚರ್ಚೆಗಳು ಭುಗಿಲೆದ್ದವು. ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿಗಳನ್ನು ಬಂಧಿದ್ದರು. ಶ್ರೀಕಾಂತ್ ಪಂಗಾರ್ಕರ್ ಅವರನ್ನು ಪ್ರಕರಣದಲ್ಲಿ ಆರೋಪಿಯನ್ನಾಗಿ ಮಾಡಲಾಯಿತು. ಅವರಿಗೆ ಸೆಪ್ಟೆಂಬರ್ 4, 2024 ರಂದು ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು.
ವಿಜೇತ ಶ್ರೀಕಾಂತ್ ಪಂಗಾರ್ಕರ್ ಅವರು ಇದೇ ಜಲ್ನಾ ಪುರಸಭೆಯಲ್ಲಿ ಕಾರ್ಪೊರೇಟರ್ ಆಗಿ 2001 ಮತ್ತು 2006 ರ ನಡುವೆ ಕೆಲಸ ಮಾಡಿದ್ದರು. ಅವರು ಅವಿಭಜಿತ ಶಿವಸೇನೆಯಿಂದ ಆಯ್ಕೆ ಆಗಿದ್ದರು. ಅವರಿಗೆ 2011 ರಲ್ಲಿ ಟಿಕೆಟ್ ನಿರಾಕರಿಸಿದ ನಂತರ, ಅವರು ಬಲಪಂಥೀಯ ಹಿಂದೂ ಜನಜಾಗೃತಿ ಸಮಿತಿಗೆ ಸೇರಿದರು. 2018ರಲ್ಲಿ ಕಚ್ಚಾ ಬಾಂಬ್ಗಳು ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡ ಅವರನ್ನು ಭಯೋತ್ಪಾದನಾ ನಿಗ್ರಹ ದಳ ಬಂಧಿಸಿತ್ತು. ಗೌರಿ ಹತ್ಯೆ ಪ್ರಕರಣ ಪ್ರಮುಖ ಆರೋಪಿಯು ಅವರಾಗಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications