Breaking: NDTV ಖರೀದಿಸಲು ಓಪನ್ ಆಫರ್ ನೀಡಿದ ಅದಾನಿ
ನವದೆಹಲಿ, ಆಗಸ್ಟ್ 23: ನ್ಯೂ ಡೆಲ್ಲಿ ಟೆಲಿವಿಷನ್(NDTV) ಮಾಧ್ಯಮ ಸಂಸ್ಥೆಯಲ್ಲಿ ಹೂಡಿಕೆ ಮಾಡುವ ಮೂಲಕ ಮಾಧ್ಯಮ ಕ್ಷೇತ್ರಕ್ಕೆ ಉದ್ಯಮಿ ಗೌತಮ್ ಅದಾನಿ ಎಂಟ್ರಿ ಕೊಟ್ಟಿದ್ದಾರೆ. ಸರಿ ಸುಮಾರು 29.18 ರಷ್ಟು ಪಾಲನ್ನು ಅದಾನಿ ಎಂಟರ್ ಪ್ರೈಸಸ್ ಖರೀದಿಸಿದ್ದು, ಈ ಮೂಲಕ NDTV ಖರೀದಿಗೆ ಅದಾನಿ ಸಂಸ್ಥೆ ಓಪನ್ ಆಫರ್ ನೀಡಿದೆ.
ಅದಾನಿ ಎಂಟರ್ಪ್ರೈಸಸ್ ಮಂಗಳವಾರ ತನ್ನ ಮಾಧ್ಯಮ ಘಟಕವು ನವದೆಹಲಿ ಟೆಲಿವಿಷನ್ ಲಿಮಿಟೆಡ್ನಲ್ಲಿ ಪರೋಕ್ಷವಾಗಿ ಶೇಕಡಾ 29.18 ಪಾಲನ್ನು ಖರೀದಿಸಲಿದೆ ಮತ್ತು ಮೀಡಿಯಾ ಹೌಸ್ನಲ್ಲಿ ಶೇ 26ರಷ್ಟು ಪಾಲನ್ನು ಖರೀದಿಸಲು ಓಪನ್ ಆಫರ್ ನೀಡಿದೆ ಎಂದು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಅದಾನಿ ಸ್ವಾಮ್ಯದ AMG ಮೀಡಿಯಾ ನೆಟ್ವರ್ಕ್ಸ್ ಲಿಮಿಟೆಡ್ (AMNL) ಓಪನ್ ಆಫರ್ ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ ಮಾಧ್ಯಮ ಕಂಪನಿಯಲ್ಲಿ ಪರೋಕ್ಷವಾಗಿ ಶೇಕಡಾ 29.18 ಪಾಲನ್ನು ಪಡೆದುಕೊಳ್ಳುತ್ತದೆ.
ವಿಶ್ವಪ್ರಧಾನ್ ಕಮರ್ಷಿಯಲ್ ಪ್ರೈವೇಟ್ ಲಿಮಿಟೆಡ್ ಜೊತೆಗೆ AMG ಮೀಡಿಯಾ ನೆಟ್ವರ್ಕ್ಸ್ ಮತ್ತು ಅದಾನಿ ಎಂಟರ್ಪ್ರೈಸಸ್ ಲಿಮಿಟೆಡ್ ಮೂರು ಸಂಸ್ಥೆಗಳು, ಸಾರ್ವಜನಿಕ ಷೇರುದಾರರಿಂದ ರೂ 4 ಮುಖಬೆಲೆಯಂತೆ NDTV ಯ 1,67,62,530 ರಷ್ಟು ಸಂಪೂರ್ಣ ಪಾವತಿಸಿದ ಈಕ್ವಿಟಿ ಷೇರುಗಳನ್ನು ಸ್ವಾಧೀನಪಡಿಸಿಕೊಳ್ಳಲು 294 ರೂ ಬೆಲೆಯ ಆಫರ್ ನೀಡಿವೆ.

"ವಿಶ್ವಪ್ರಧಾನ್ ಕಮರ್ಷಿಯಲ್ ಪ್ರೈವೇಟ್ ಲಿಮಿಟೆಡ್ (VCPL), AMG ಮೀಡಿಯಾ ನೆಟ್ವರ್ಕ್ಸ್ ಲಿಮಿಟೆಡ್ (AMNL) ನ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾಗಿದ್ದು, NDTV ಯ ಪ್ರವರ್ತಕ ಸಮೂಹ ಕಂಪನಿಯಾದ RRPR ಹೋಲ್ಡಿಂಗ್ ಪ್ರೈವೇಟ್ ಲಿಮಿಟೆಡ್ನ 99.5% ಈಕ್ವಿಟಿ ಷೇರುಗಳನ್ನು ಸ್ವಾಧೀನಪಡಿಸಿಕೊಳ್ಳುವ ಹಕ್ಕುಗಳನ್ನು ಚಲಾಯಿಸಿದೆ'' ಎಂದು AMG ಮೀಡಿಯಾ ನೆಟ್ವರ್ಕ್ ಮಂಗಳವಾರ ಸಂಜೆ ನೀಡಿದ ಪ್ರಕಟಣೆಯಲ್ಲಿ ತಿಳಿಸಿದೆ.
SEBI ಯ ಸ್ವಾಧೀನ ನಿಯಮಗಳ ಪ್ರಕಾರ NDTVಯಲ್ಲಿ 26% ರಷ್ಟು ಪಾಲನ್ನು ಪಡೆಯಲು ಓಪನ್ ಆಫರ್ ಆಗಿ ಪರಿಣಮಿಸಲಿದೆ. ಆದರೆ, ಅದಾನಿ ನೀಡಿರುವ ಆಫರ್ ಅನ್ನು ಎನ್ ಡಿ ಟಿ ವಿ ತಿರಸ್ಕರಿಸುವ ಅವಕಾಶ ಇದೆ.
NDTV ಯ ಪ್ರವರ್ತಕ ಸಮೂಹ ಕಂಪನಿಯಾಗಿರುವ RRPR, NDTV ನಲ್ಲಿ 29.18% ಪಾಲನ್ನು ಹೊಂದಿದೆ. VCPL, AMNL & AEL (ಕನ್ಸರ್ಟ್ನಲ್ಲಿ ಕಾರ್ಯನಿರ್ವಹಿಸುವ ವ್ಯಕ್ತಿಗಳು) ಜೊತೆಗೆ SEBI ಯ (ಷೇರುಗಳು ಮತ್ತು ಸ್ವಾಧೀನಗಳ ಗಣನೀಯ ಸ್ವಾಧೀನ) ನಿಯಮಗಳು, 2011 ರ ಅಗತ್ಯತೆಗಳಿಗೆ ಅನುಗುಣವಾಗಿ NDTV ಯಲ್ಲಿ 26% ವರೆಗೆ ಪಾಲನ್ನು ಪಡೆಯಲು ಓಪನ್ ಆಫರ್ ನೀಡಿದೆ.

ಬಿಎಸ್ಇಗೆ ಸಂಸ್ಥೆ ನೀಡಿದ ಮಾಹಿತಿ ಪ್ರಕಾರ ಈ ಓಪನ್ ಆಫರ್ ನಗದು ರೂಪದಲ್ಲಿ ಪಾವತಿಸಬಹುದಾದ 492.8 ಕೋಟಿ ರೂ. ಮೌಲ್ಯ ಎಂದು ಅಂದಾಜಿಸಲಾಗಿದೆ. ಇಂದು ಬಿಎಸ್ಇಯಲ್ಲಿ ಎನ್ಡಿಟಿವಿ ಷೇರುಗಳು 396.75 ರು ನಂತೆ ವ್ಯವಹರಿಸಿದೆ.
"ಹೊಸ ಯುಗದ ಮಾಧ್ಯಮದ ಹಾದಿಯನ್ನು ಸುಗಮಗೊಳಿಸುವ ಪ್ಲಾಟ್ಫಾರ್ಮ್ಗಳಲ್ಲಿ AMNL ಗುರಿಯ ಪ್ರಯಾಣದಲ್ಲಿ ಈ ಸ್ವಾಧೀನವು ಮಹತ್ವದ ಮೈಲಿಗಲ್ಲು" ಎಂದು AMG ಮೀಡಿಯಾ ನೆಟ್ವರ್ಕ್ಸ್ ಲಿಮಿಟೆಡ್ನ ಸಿಇಒ ಸಂಜಯ್ ಪುಗಾಲಿಯಾ ಹೇಳಿದರು.
2021ರಲ್ಲಿ ಸೋರಿಕೆಯಾಗಿದ್ದ ಮಾಹಿತಿ:
"ಎನ್ಡಿಟಿವಿ ಲಿಮಿಟೆಡ್ ಮಾಲೀಕತ್ವದ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ, ಮಾಲೀಕತ್ವದ ಬದಲಾವಣೆ ಅಥವಾ ಯಾವುದೇ ರೀತಿಯ ಪಾಲುದಾರಿಕೆ, ಅನ್ಯಸಂಸ್ಥೆಯಿಂದ ಹೂಡಿಕೆ, ಯಾವುದೇ ಘಟಕದೊಂದಿಗೆ ಕೈಜೋಡಿಸುವುದರ ಬಗ್ಗೆ ಕೂಡಾ ಚರ್ಚೆಯಾಗಿಲ್ಲ. ಸಂಸ್ಥಾಪಕ-ಪ್ರವರ್ತಕರು, ರಾಧಿಕಾ ಮತ್ತು ಪ್ರಣಯ್ ರಾಯ್, ಇಬ್ಬರೂ ಪತ್ರಕರ್ತರಾಗಿದ್ದು, ಕಂಪನಿಯ ಶೇ 61.45 ಪಾಲನ್ನು ಹೊಂದಿದ್ದಾರೆ ಮತ್ತು ಅದರ ನಿಯಂತ್ರಣದಲ್ಲಿರುತ್ತಾರೆ, ಇದರಲ್ಲಿ ಯಾವುದೇ ಬದಲಾವಣೆಯಿಲ್ಲ'' ಎಂದು ಸಂಸ್ಥೆ ಸ್ಪಷ್ಪನೆ ನೀಡಿದೆ.
ಸಂಸ್ಥಾಪಕ-ಪ್ರವರ್ತಕರು, ರಾಧಿಕಾ ಮತ್ತು ಪ್ರಣಯ್ ರಾಯ್, ಇಬ್ಬರೂ ಪತ್ರಕರ್ತರಾಗಿದ್ದು ಇವರಿಬ್ಬರು ಸಿಇಒ ವಿಕ್ರಮಾದಿತ್ಯ ಚಂದ್ರ ಸೇರಿದಂತೆ ಕೆಲ ಅಧಿಕಾರಗಳ ವಿರುದ್ಧ ವಿದೇಶಿ ನೇರ ಬಂಡವಾಳ ಹೂಡಿಕೆ(ಎಫ್ ಡಿಐ) ನಿಯಮ ಉಲ್ಲಂಘನೆ ಆರೋಪದ ಮೇಲೆ ಸಿಬಿಐ ಪ್ರಕರಣ ದಾಖಲಿಸಿಕೊಂಡಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications