ಮೇಲ್ಮನವಿ ತಿರಸ್ಕೃತ: ಸಲಿಂಗಕಾಮಿಗಳಿಗೆ ಬಂಧನ ಭೀತಿ

'ಸಲಿಂಗರತಿ ಅಪರಾಧವಲ್ಲ' ಎಂದು ದೆಹಲಿ ಹೈಕೋರ್ಟ್ ಡಿಸೆಂಬರ್ 11, 2013ರಂದು ನೀಡಿದ್ದ ತೀರ್ಪನ್ನು ತಳ್ಳಿಹಾಕುತ್ತಾ ಸುಪ್ರೀಂ ಕೋರ್ಟ್, ಇಂಡಿಯನ್ ಪೀನಲ್ ಕೋಡ್ ನ 377 ಸೆಕ್ಷನ್ ಪ್ರಕಾರ ಸಲಿಂಗರತಿಯನ್ನು ಕಾನೂನುಬಾಹಿರ ಎಂದು ಘೋಷಿಸಿತ್ತು. [ಸಲಿಂಗಕಾಮದ ಬಗ್ಗೆ ರವಿಶಂಕರ ಗುರೂಜಿ ಹೀಗಂತಾರೆ]
ಭಾರತೀಯ ದಂಡ ಸಂಹಿತೆಯ 377ನೇ ಸೆಕ್ಷನ್ ಅನ್ನು ತೆಗೆದುಹಾಕುವ ಅಧಿಕಾರ ಸಂಸತ್ತಿಗಿದೆ. ಆದರೆ, ಆ ನಿಯಮವನ್ನು ಸಂಸತ್ತು ರದ್ದು ಮಾಡುವವರೆಗೆ ಈ ಬಗೆಯ ಲೈಂಗಿಕ ಸಂಬಂಧಕ್ಕೆ ಕಾನೂನಿನ ಮಾನ್ಯತೆ ನೀಡುವುದಿಲ್ಲ ಎಂದು ಸುಪ್ರೀಂಕೋರ್ಟ್ ವಿಭಾಗೀಯ ಪೀಠ ಖಡಾಖಂಡಿತವಾಗಿ ಹೇಳಿತ್ತು. ಆದರೆ ಈ ತೀರ್ಪಿನ ಬಗ್ಗೆ ಭಾರಿ ವಿರೋಧ/ ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದವು. ( ಐಪಿಸಿ 377 : ಸುಪ್ರೀಂ ತೀರ್ಪೂ, ಲೈಂಗಿಕ ಆಸಕ್ತಿಯೂ )
ಕೇಂದ್ರ ಸರಕಾರ ಮತ್ತು ಸಲಿಂಗ ಕಾಮಿಗಳ ಹಕ್ಕು ಪರ ಹೋರಾಟಗಾರರು ಜಂಟಿಯಾಗಿ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ಇಂದು ಮಂಗಳವಾರ ತಿರಸ್ಕರಿಸಿದೆ. ಸುಪ್ರೀಂಕೋರ್ಟಿನ ಇಂದಿನ ತೀರ್ಪಿನ ಬಗ್ಗೆ ತೀವ್ರ ನಿರಾಶೆ ವ್ಯಕ್ತಪಡಿಸಿರುವ ಅರ್ಜಿದಾರರು ಮತ್ತೊಂದು ಮೇಲ್ಮನವಿಯನ್ನು ಪುನಃ ಸಲ್ಲಿಸುವುದಾಗಿ ಹೇಳಿದ್ದಾರೆ. ( ಸಲಿಂಗಕಾಮ ಅನೈತಿಕ, ಅಪರಾಧ : ಸುಪ್ರೀಂಕೋರ್ಟ್ )
ಚುನಾವಣೆ ಹಿನ್ನೆಲೆಯಲ್ಲಿ ಆಡಳಿತಾರೂಢ ಯುಪಿಎ ಸರಕಾರವು ಅಪರೂಪದ ಪ್ರಕರಣವಾಗಿ ಸುಪ್ರೀಂ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿತ್ತು. ಇದೀಗ ಸುಪ್ರೀಂಕೋರ್ಟ್ ತನ್ನ ತೀರ್ಪಿಗೆ ಬದ್ಧವಾಗಿರುವುದರಿಂದ ಚುನಾವಣೆಗೆ ಮುನ್ನ 'ಸಲಿಂಗರತಿ ಅಪರಾಧವಲ್ಲ' ಎಂಬ ಕಾಯಿದೆಯನ್ನು ಸಂಸತ್ತಿನಲ್ಲಿ ಮಂಡಿಸಿ, ಅದಕ್ಕೆ ಕಾನೂನಿನ ಚೌಕಟ್ಟು ತೊಡಿಸುತ್ತದಾ? ಕಾದುನೋಡಬೇಕಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications