ಕುಟುಂಬದವರನ್ನು ಗುರುತಿಸದ ಗೀತಾ, ಡಿಎನ್ಎ ಬಳಿಕ ಮುಂದಿನ ನಿರ್ಧಾರ
ನವದೆಹಲಿ, ಅಕ್ಟೋಬರ್. 26: 13 ವರ್ಷಗಳ ಹಿಂದೆ ಸಂಜೋತಾ ಎಕ್ಸ್ ಪ್ರೆಸ್ ರೈಲಿನಲ್ಲಿ ಆಕಸ್ಮಿಕವಾಗಿ ಪಾಕಿಸ್ತಾನಕ್ಕೆ ತೆರಳಿದ್ದ ಗೀತಾ ಅಕ್ಟೋಬರ್ 26 ರಂದು ತಾಯಿ ನಾಡಿಗೆ ಆಗಮಿಸಿದ್ದಾರೆ. ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿದ್ದಾರೆ. ಡಿಎನ್ ಎ ಪರೀಕ್ಷೆ ನಂತರ ಗೀತಾ ಅವರನ್ನು ತಂದೆ ತಾಯಿ ಅವರಿಗೆ ರಕ್ಷಣೆಗೆ ಒದಗಿಸಲಾಗುವುದು ಎಂದು ವಿದೇಶಾಂಗ ಇಲಾಖೆ ತಿಳಿಸಿದೆ.
11 ವರ್ಷದ ಗೀತಾ ಸಂಜೋತಾ ಎಕ್ಸ್ಪ್ರೆಸ್ನಲ್ಲಿ ಆಕಸ್ಮಿಕವಾಗಿ ಪಾಕಿಸ್ತಾನಕ್ಕೆ ತೆರಳಿದ್ದಳು. ಆಕೆಯನ್ನು ಸೇನಾಧಿಕಾರಿಯೊಬ್ಬರು ಪಾಕಿಸ್ತಾನದ ಎನ್ಜಿಒ ಒಂದಕ್ಕೆ ಸೇರಿಸಿದ್ದರು. ಇದೀಗ ದಶಕದ ನಂತರ ತವರಿಗೆ ಮರಳಿದ್ದಾರೆ.[ಬಾಹ್ಯಾಕಾಶದಿಂದ ಕಂಡ ಭಾರತ-ಪಾಕಿಸ್ತಾನ ಗಡಿಭಾಗ]
ಗೀತಾ ಅವರಿಗೆ ಪಾಕಿಸ್ತಾನದಲ್ಲಿ ರಕ್ಷಣೆ ನೀಡಿರುವ ಎಧಿ ಫೌಂಡೇಶನ್ನ ನಾಲ್ವರು ಆಗಮಿಸಿದ್ದರು. ಅಲ್ಲದೆ ಪಾಕಿಸ್ತಾನದ ರಾಜತಾಂತ್ರಿಕ ಅಧಿಕಾರಿಗಳು ಇದ್ದರು. ನವದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಗೀತಾಳನ್ನು ಸ್ವಾಗತಿಸಿ ಬರಮಾಡಿಕೊಳ್ಳಲಾಯಿತು. ['ಭಜರಂಗಿ ಭಾಯ್ ಜಾನ್' ಕತೆ ಕೇಳ್ಕೊಂಡು ಬನ್ನಿ]
ಕುಟುಂಬದವರನ್ನು ಗುರುತಿಸದ ಗೀತಾ:
ಈ ಮಧ್ಯೆ, ಗೀತಾಳ ತಂದೆ ಎನ್ನಲಾಗಿರುವ ಬಿಹಾರ ಮೂಲದ ಜನಾರ್ದನ ಮೆಹ್ತೋ ನವದೆಹಲಿಗೆ ಆಗಮಿಸಿಸದ್ದರು. ಆದರೆ ಗೀತಾ ಇವರನ್ನು ಗುರುತಿಸಿಲ್ಲ. ಈ ಹಿನ್ನೆಲೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಲಾಗುವುದು ಎಂದು ವಿದೇಶಾಂಗ ಇಲಾಖೆ ಸ್ಪಷ್ಟಪಡಿಸಿದೆ. ನಡೆಸಲಾಗುವುದು. ಒಂದು ವೇಳೆ ಡಿಎನ್ ಎ ಪರೀಕ್ಷೆ ಯಲ್ಲಿ ಸಂಬಂಧ ದೃಢಪಡದಿದ್ದರೆ ಎನ್ ಜಿಒ ಸಂಸ್ಥೆಯೊಂದು ಗೀತಾ ಅವರ ಹೊಣೆ ಹೊರಲಿದೆ.[ಸೇನಾ ಬಲಾಢ್ಯತೆಯಲ್ಲಿ ಭಾರತಕ್ಕೆ 5 ನೇ ಸ್ಥಾನ]
ಭಾರತ ಮತ್ತು ಪಾಕಿಸ್ತಾನದ ನಡುವಣ ದ್ವಿಪಕ್ಷೀಯ ಸಂಬಂಧಗಳ ವೃದ್ಧಿಗೆ ಇಂಥ ಬೆಳವಣಿಗೆಗಳು ನಾಂದಿಯಾಗಬಹುದು. ಅಲ್ಲದೇ ಅಂತಾರಾಷ್ಟ್ರೀಯ ಮಟ್ಟದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ವೇದಿಕೆಯಾಗಬಹುದು ಎಂದು ಹೇಳಲಾಗಿದೆ.
Geeta lands in New Delhi from Karachi.( Pic source: MEA) pic.twitter.com/80mHRJAXHP
— ANI (@ANI_news) October 26, 2015 गीता - भारत की बेटी का भारत में स्वागत. Geeta - Welcome home our daughter.
— Sushma Swaraj (@SushmaSwaraj) October 26, 2015 -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video













Click it and Unblock the Notifications