ಹಳೇ 500, 1,000 ನೋಟು ಇಟ್ಟುಕೊಂಡವರಿಗೆ ಆಶಾಕಿರಣ !
ಹಳೆ ನೋಟುಗಳನ್ನು ಕಾರಣಾಂತರಗಳಿಂದ ಜಮೆ ಮಾಡದವರಿಗೆ ಮತ್ತೊಂದು ಅವಕಾಶ ನೀಡಲು ಸಾಧ್ಯವೇ ಎಂದು ಕೇಂದ್ರ ಸರ್ಕಾರವನ್ನು ಕೇಳಿದ ಸುಪ್ರೀಂ ಕೋರ್ಟ್. ಕಳೆದ ವರ್ಷ ಸರ್ಕಾರ ಕೈಗೊಂಡಿದ್ದ ಅಪನಗದೀಕರಣದಿಂದ ನಿಷೇಧಕ್ಕೊಳಗಾಗಿದ್ದ 500 ಹಾಗೂ 1000 ರು. ನೋಟು
ನವದೆಹಲಿ, ಜುಲೈ 4: ಹಳೆಯ 500 ರು. ಹಾಗೂ 1000 ರು. ನೋಟುಗಳನ್ನು ಪ್ರಮುಖ ಕಾರಣಗಳಿಂದಾಗಿ ಜಮೆ ಮಾಡಲಾಗದವರಿಗೆ ಮತ್ತೊಂದು ಅವಕಾಶ ನೀಡಲು ಸಾಧ್ಯವೇ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ಕೇಳಿದೆ.
ಕಳೆದ ವರ್ಷ ನವೆಂಬರ್ ನಲ್ಲಿ ಕೇಂದ್ರ ಸರ್ಕಾರ ಅಪನಗದೀಕರಣ ನಿರ್ಧಾರ ಕೈಗೊಂಡ ಹಿನ್ನೆಲೆಯಲ್ಲಿ ಹಳೆಯ 500 ರು. ಹಾಗೂ 1000 ರು.ನೋಟುಗಳನ್ನು ನಿಷೇಧಿಸಿತ್ತು.

ಆ ಹಳೆಯ ನೋಟುಗಳನ್ನು ಬ್ಯಾಂಕಿಗೆ ತುಂಬಲು ಹಾಗೂ ಬದಲಾಯಿಸಿಕೊಳ್ಳಲು ನಿಗದಿತ ಗಡುವನ್ನೂ ನೀಡಿತ್ತು. ಆದರೆ, ಹಲವಾರು ಜನರು ಆ ನೋಟುಗಳನ್ನು ತಮ್ಮಲ್ಲೇ ಉಳಿಸಿಕೊಂಡಿದ್ದಾರೆಂಬ ಮಾಹಿತಿ, ಗಡುವು ಮುಗಿದ ನಂತರವೂ ಲಭ್ಯವಾಗಿತ್ತು.
ಈಗಾಗಲೇ ಭಾರತೀಯ ರಿಸರ್ವ್ ಬ್ಯಾಂಕ್, ನಿಷೇಧಿತ ನೋಟುಗಳನ್ನ ಸ್ವೀಕರಿಸುವ ಪ್ರಮೇಯವೇ ಇಲ್ಲ ಎಂದು ಸ್ಪಷ್ಟವಾಗಿ ಹೇಳಿತ್ತು. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಈ ಬಗ್ಗೆ ಅರ್ಜಿಯೊಂದು ದಾಖಲಾಗಿತ್ತು.
ಮಂಗಳವಾರ ಆ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಹಳೆ ನೋಟು ಸ್ವೀಕೃತಿಗೆ ಮತ್ತೊಂದು ಅವಕಾಶ ನೀಡಬಲ್ಲಿರಾ ಎಂದು ಕೇಂದ್ರ ಸರ್ಕಾರವನ್ನು ಕೋರಿದೆ. ಅಲ್ಲದೆ, ಜುಲೈ 17ರೊಳಗೆ ಈ ಬಗ್ಗೆ ಉತ್ತರಿಸುವಂತೆ ಸೂಚನೆ ನೀಡಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications