ಉತ್ತರಾಖಂಡ ಹಿಮನದಿ ಸ್ಫೋಟ; ಭೌಗೋಳಿಕ ತಜ್ಞರ ತಂಡದಿಂದ ಪರಿಶೀಲನೆ
ನವದೆಹಲಿ, ಫೆಬ್ರುವರಿ 08: ಉತ್ತರಾಖಂಡದ ಚಾಮೋಲಿಯಲ್ಲಿ ಹಿಮನದಿ ಸ್ಫೋಟ ಘಟನೆಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಲು ಭಾರತೀಯ ಭೌಗೋಳಿಕಾ ಸಮೀಕ್ಷೆಯು ತಜ್ಞರ ತಂಡ ರೂಪಿಸುವುದಾಗಿ ತಿಳಿಸಿದೆ.
ತಜ್ಞರ ತಂಡವು ಮ್ಯಾಪಿಂಗ್, ಸ್ಯಾಟಲೈಟ್ ಚಿತ್ರಗಳು ಹಾಗೂ ಘಟನಾ ಸ್ಥಳದ ಪರಿಶೀಲನೆ ನಡೆಸಿ ಹಿಮನದಿ ಸ್ಫೋಟದ ಹಿಂದಿನ ಕಾರಣ ವಿವರಿಸುವ ವರದಿ ನೀಡುವುದಾಗಿ ತಿಳಿದುಬಂದಿದೆ.
ಈ ಕುರಿತು ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ ಭಾರತೀಯ ಭೌಗೋಳಿಕಾ ಸಮೀಕ್ಷೆಯ ಪ್ರಧಾನ ನಿರ್ದೇಶಕ ರಂಜೀತ್ ರಾಥ್, "ಕೆಲವು ಪ್ರಾಕೃತಿಕ ಅಂಶಗಳಿಂದ ಈ ದುರ್ಘಟನೆ ಸಂಭವಿಸಿದ್ದು, ಘಟನೆಗೆ ಕಾರಣವನ್ನು ಈಗಲೇ ವಿವರಿಸುವುದು, ಅಂದಾಜಿಸುವುದು ಕಷ್ಟ. ಡೆಹ್ರಾಡೂನ್ ನಲ್ಲಿ ನಮ್ಮ ಅಧಿಕಾರಿಗಳು ಸಮೀಕ್ಷೆ ನಡೆಸಲು ಸಿದ್ಧವಿದ್ದು, ನಾವು ತಜ್ಞರ ತಂಡ ರಚನೆಗೆ ಯೋಜನೆ ರೂಪಿಸಿದ್ದೇವೆ. ಈ ತಂಡವು ಸ್ಥಳಕ್ಕೆ ಹೋಗಿ, ಪ್ರಾಯೋಗಿಕವಾಗಿ ಪರಿಶೀಲನೆ ನಡೆಸಲಿದೆ. ಉಪಗ್ರಹಗಳಿಂದ ಚಿತ್ರಗಳನ್ನು ಪಡೆದು, ಪರಿಶೀಲನಾ ಕೆಲಸದಲ್ಲಿ ನಿರತವಾಗಲಿದೆ" ಎಂದು ಹೇಳಿದ್ದಾರೆ.

ಹಿಮಾಲಯದ ಮೇಲ್ಭಾಗದಲ್ಲಿ ಈ ಘಟನೆ ಸಂಭವಿಸಿದ್ದು, ಆತಂಕ ಹೆಚ್ಚಾಗಿದೆ. ಇದು ಹಿಮ ನದಿಯ ಸಮಗ್ರ ಪರಿಸರದ ಮೇಲೆ ಪರಿಣಾಮ ಬೀರಬಹುದು. ವರದಿ ಬಂದ ನಂತರವಷ್ಟೇ ನಿಖರ ಕಾರಣ ಹೇಳಲು ಸಾಧ್ಯ. ಭವಿಷ್ಯದಲ್ಲಿ ಅಣೆಕಟ್ಟುಗಳನ್ನು, ರಸ್ತೆಗಳನ್ನು ಹಾಗೂ ಇತರೆ ಮೂಲಸೌಲಭ್ಯಗಳ ನಿರ್ಮಾಣ ಮಾಡುವಾಗ ಪರಿಸರಕ್ಕೆ ಧಕ್ಕೆಯಾಗದಂತೆ ಇನ್ನಷ್ಟು ಕ್ರಮಗಳನ್ನು ತೆಗೆದುಕೊಳ್ಳುವುದು ಅವಶ್ಯಕವಾಗಿದೆ. ಇಂಥ ಪ್ರದೇಶಗಳನ್ನು ಮೊದಲೇ ಗುರುತಿಸಬೇಕಿದೆ. ಪರಿಶೀಲನೆ ನಂತರ ಸಮಿತಿ ರಚಿಸಲಾಗುವುದು" ಎಂದು ಹೇಳಿದ್ದಾರೆ.
ಭಾನುವಾರ ಉತ್ತರಾಖಂಡದ ಚಾಮೋಲಿ ಜಿಲ್ಲೆಯ ತಪೋವನ, ರೇಣಿ ಪ್ರದೇಶದಲ್ಲಿ ಹಿಮನದಿ ಸ್ಫೋಟ ಸಂಭವಿಸಿದ್ದು, ದೌಲಿ ಗಂಗಾ ಹಾಗೂ ಅಲಕಾನಂದ ನದಿಗಳಲ್ಲಿ ಪ್ರವಾಹ ಪರಿಸ್ಥಿತಿ ಏರ್ಪಟ್ಟಿದೆ. ಘಟನೆಯಲ್ಲಿ 204 ಮಂದಿ ನಾಪತ್ತೆಯಾಗಿದ್ದು, ಇದುವರೆಗೂ 11 ಮಂದಿಯ ಮೃತದೇಹಗಳು ದೊರಕಿವೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಭಾರತೀಯ ವಾಯು ಸೇನೆ ಎಂಐ 17 ಹಾಗೂ ಚಿನೂಕ್ ಹೆಲಿಕಾಪ್ಟರ್ ಗಳನ್ನು ರಕ್ಷಣಾ ಕಾರ್ಯಾಚರಣೆಗೆ ಕಳುಹಿಸಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications