ಕ್ಲೀನ್ ಗಂಗಾಕ್ಕೆ ದೇಣಿಗೆ ನೀಡಿ, ತೆರಿಗೆ ಲಾಭ ಪಡೆಯಿರಿ
ನವದೆಹಲಿ. ಸೆ. 25 : ಗಂಗಾ ನದಿಯನ್ನು ಸ್ವಚ್ಛಗೊಳಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ಯೋಜನೆಗೆ ದೇಣಿಗೆ ನೀಡಿದರೆ ನೀವು ತೆರಿಗೆ ವಿನಾಯಿತಿ ಪಡೆಯಬಹುದು. 'ನಮಾಮಿ ಗಂಗಾ' ಯೋಜನೆಯ ಕ್ಲೀನ್ ಗಂಗಾ ಫಂಡ್(ಜಿಜಿಎಫ್)ಗೆ ದೇಣಿಗೆ ನೀಡಿದರೆ ತೆರಿಗೆ ವಿನಾಯಿತಿ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಬುಧವಾರ ಸಭೆ ಸೇರಿದ ಕೇಂದ್ರ ಕ್ಯಾಬಿನೆಟ್ ಈ ತೀರ್ಮಾನ ತೆಗೆದುಕೊಂಡಿದೆ. ಭಾರತದ ನಾಗರಿಕರು, ಎನ್ಆರ್ಐಗಳು ಅಲ್ಲದೇ ವಿದೇಶಿಯರು ಸಹ ಈ ಯೋಜನೆಗೆ ದೇಣಿಗೆ ನೀಡಬಹುದು. ಭಾರತೀಯ ನಾಗರಿಕರಿಗೆ ತೆರಿಗೆ ವಿನಾಯಿತಿಯೊಂದಿಗೆ ಆದಾಯ ತೆರಿಗೆ ಲಾಭವೂ ದೊರೆಯಲಿದೆ ಎಂದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಮಾಹಿತಿ ನೀಡಿದ್ದಾರೆ.(ಕೇಂದ್ರದ ಗಂಗಾ ಶುದ್ಧೀಕರಣ ನೀಲನಕ್ಷೆಯಲ್ಲೇನಿದೆ?)

ಹಣ ಸಂಗ್ರಹಣೆ ಕೆಲಸದ ಸಂಪೂರ್ಣ ಜವಾಬ್ದಾರಿಯನ್ನು ಕೇಂದ್ರ ಹಣಕಾಸು ಸಚಿವರ ನೇತೃತ್ವದ ಸಮಿತಿ ವಹಿಸಿಕೊಂಡಿರುತ್ತದೆ. ಬೃಹತ್ ಗಾತ್ರದ ಯೋಜನೆ ಅನುಷ್ಠಾನಕ್ಕೆ ಅಪಾರ ಪ್ರಮಾಣದ ಹಣದ ಅಗತ್ಯವಿದ್ದು ಸರ್ಕಾರದೊಂದಿಗೆ ಜನರು ಕೈಜೋಡಿಸಬೇಕು ಎಂದು ಕೇಂದ್ರ ಸರ್ಕಾರ ಹೇಳಿದೆ.(ಅಮೆಜಾನ್ ತೆರಿಗೆ ಹೇರಿಕೆಗೆ ದಿಗ್ವಿಜಯ್ ಡಿಚ್ಚಿǃ)
ಸಂಗ್ರಹವಾಗುವ ಹಣವನ್ನು ವಿವಿಧ ಯೋಜನೆಗಳಿಗೆ ಬಳಸಲಾಗುವುದು. ಬಯಲು ಶೌಚ ಮುಕ್ತ ಮಾಡಲು ಶೌಚಾಲಯಗಳ ನಿರ್ಮಾಣ, ಕೃಷಿಗೆ ವಿಶೇಷ ಒತ್ತು, ನಗರದೆಡೆಗೆ ಆಗಮಿಸುತ್ತಿರುವ ಯುವಕರನ್ನು ಹಳ್ಳಿಯಲ್ಲೇ ಉಳಿಸಿಕೊಳ್ಳಲು ವಿನೀತನ ಯೋಜನೆ, ಸಾಕುಪ್ರಾಣಿಗಳಿಗೆ ಸಮರ್ಪಕ ಆಹಾರ ಪೂರೈಕೆ ಈ ರೀತಿಯ ಗಂಗಾ ನದಿ ಸ್ವಚ್ಛಗೊಳಿಸುವ ಕೆಲಸಕ್ಕೆ ಪೂರಕವಾದ ಕೆಲಸಗಳನ್ನು ಕೈಗೊತ್ತಿಕೊಳ್ಳಲಾಗುವುದು. ಇದು ಮಾಲಿನ್ಯ ನಿಯಂತ್ರಣದಲ್ಲಿ ಹೆಜ್ಜೆಯಾಗುತ್ತದೆ ಎಂದು ಕೇಂದ್ರ ಕ್ಯಾಬಿನೆಟ್ ತಿಳಿಸಿದೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications