ನವೆಂಬರ್ 4ರೊಳಗೆ ಮಲ್ಯರನ್ನು ಭಾರತಕ್ಕೆ ಕರೆ ತನ್ನಿ : ಕೋರ್ಟ್
ನವದೆಹಲಿ, ಆಗಸ್ಟ್ 06: ಸಾಲಗಾರ ಉದ್ಯಮಿ ವಿಜಯ್ ಮಲ್ಯ ಅವರು ಎಲ್ಲೇ ಇರಲಿ ನವೆಂಬರ್ 04ರಂದು ವಿಚಾರಣೆಗೆ ಕರೆ ತನ್ನಿ ಎಂದು ವಿದೇಶಾಂಗ ಸಚಿವಾಲಯಕ್ಕೆ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಶನಿವಾರ ಆದೇಶ ನೀಡಿದೆ.
ಸರ್ಕಾರಿ ಸ್ವಾಮ್ಯದ ಎಸ್ ಬಿಐ ಸೇರಿದಂತೆ ವಿವಿಧ ಬ್ಯಾಂಕುಗಳಿಂದ 9,000 ಕೋಟಿ ರು ಗೂ ಅಧಿಕ ಸಾಲ ಪಡೆದುಕೊಂಡು ತೀರಿಸಲಾಗದೆ ಮಲ್ಯ ಅವರು ಬ್ರಿಟನ್ನಿನಲ್ಲಿ ಬೀಡು ಬಿಟ್ಟಿದ್ದಾರೆ. ಈಗಾಗಲೇ ರೆಡ್ ಕಾರ್ನರ್ ನೋಟಿಸ್, ಜಾಮೀನು ರಹಿತ ವಾರೆಂಟ್ ಗಳು ಜಾರಿಯಾಗಿವೆ. [ಮಲ್ಯ, ಲೇಟೆಸ್ಟ್ ಆಗಿ ರಾಜೀನಾಮೆ ನೀಡಿದ ಕಂಪನಿ ಯಾವುದು?]

ಈ ನಡುವೆ ಚೆಕ್ ಬೌನ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಪಟಿಯಾಲ ಹೌಸ್ ಕೋರ್ಟ್, ವಿದೇಶಾಂಗ ಸಚಿವಾಲಯಕ್ಕೆ ಮೇಲ್ಕಂಡಂತೆ ನಿರ್ದೇಶನ ನೀಡಿದೆ. ಲಂಡನ್ನಿನಲ್ಲಿರುವ ಮಲ್ಯ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಲಾಗಿದ್ದು, ವಿಚಾರಣೆಗಾಗಿ ನವೆಂಬರ್ 04ರಂದು ಕೋರ್ಟಿಗೆ ಹಾಜರಾಗಬೇಕಿದೆ. [ಮಲ್ಯ ವಿರುದ್ಧ ಮತ್ತೆ ಸುಪ್ರೀಂ ಮೊರೆಹೋದ ಬ್ಯಾಂಕ್ಗಳು]
ಕೋರ್ಟಿನಿಂದ ಅನೇಕ ವಾರೆಂಟ್ ಗಳು ಜಾರಿಯಾದರೂ ಮಲ್ಯ ಅವರು ಯಾವುದಕ್ಕೂ ಉತ್ತರಿಸಿಲ್ಲ. ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ ಸಂಸ್ಥೆ ವತಿಯಿಂದ ಕಿಂಗ್ ಫಿಷರ್ ಏರ್ ಲೈನ್ಸ್ ಮಾಲೀಕ ಮಲ್ಯ ವಿರುದ್ಧ 7.5 ಕೋಟಿ ರು ಮೌಲ್ಯದ ಚೆಕ್ ಬೌನ್ಸ್ ಆರೋಪ ಹೊರೆಸಲಾಗಿದೆ. [ಮಲ್ಯರನ್ನು ಗಡಿಪಾರು ಮಾಡಲು ಸಾಧ್ಯವಿಲ್ಲ: ಯುಕೆ]
ಕೆಳಹಂತದ ನ್ಯಾಯಾಲಯದಲ್ಲಿ ಬಂದಿದ್ದ ಆದೇಶವನ್ನು ಪ್ರಶ್ನಿಸಿದ್ದ ಮಲ್ಯ ಪರ ವಕೀಲರು ದೆಹಲಿ ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ, ಅರ್ಜಿ ಪುರಸ್ಕರಿಸದ ನ್ಯಾಯಾಲಯ, ಮಲ್ಯ ಅವರು ಖುದ್ದು ವಿಚಾರಣೆಗೆ ಹಾಜರಾಗಬೇಕು, ಮಲ್ಯರನ್ನು ಭಾರತಕ್ಕೆ ಕರೆ ತರುವ ಜವಾಬ್ದಾರಿ ವಿದೇಶಾಂಗ ಸಚಿವಾಲಯ ವಹಿಸಿಕೊಳ್ಳಬೇಕು ಎಂದು ಸೂಚನೆ ನೀಡಿದೆ. (ಒನ್ಇಂಡಿಯಾ ಸುದ್ದಿ)
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications