ಎ.ಸಿ. ಕ್ಯಾಬಿನ್ ಗಳಿಂದ ಹೊರಬನ್ನಿ, ಕೆಲ್ಸ ಮಾಡಿ: ಕೇಜ್ರಿ ಗುಡುಗು
ತುಕ್ಕು ಹಿಡಿದಿರುವ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಸಲುವಾಗಿ ಅರವಿಂದ್ ಕೇಜ್ರಿವಾಲ್ ಅವರು, ತಮ್ಮ ಸರ್ಕಾರದ ಹಿರಿಯ ಅಧಿಕಾರಿಗಳಿಗೆ ಸೋಮಾರಿತನ ತೊರೆದು ಕೆಲಸ ಮಾಡುವಂತೆ ತಾಕೀತು ಮಾಡಿದ್ದಾರೆ.
ನವದಹೆಲಿ, ಮೇ 31: ಕೆಲಸ ಮಾಡದೇ ಸೋಮಾರಿಗಳಾಗಿರುವ ತಮ್ಮ ಸರ್ಕಾರದ ಅಧಿಕಾರಿಗಳ ವಿರುದ್ಧ ದೆಹಲಿ ಮುಖ್ಯಮಂತ್ರಿ ಗುಟುರು ಹಾಕಿದ್ದಾರೆ. ಈ ಎಲ್ಲಾ ಅಪಮಾನಗಳನ್ನು ಮೀರಿ ಮುಂದಿನ ವಿಧಾನಸಭೆ ಚುನಾವಣೆಯೊಳಗೆ ಪಕ್ಷಕ್ಕೊಂದು ಇಮೇಜ್ ತಂದುಕೊಡುವ ನಿಟ್ಟಿನಲ್ಲಿ ಕೇಜ್ರಿವಾಲ್ ಎಂದಿನಂತೆ ಪ್ರಯತ್ನ ಮುಂದುವರಿಸಿದ್ದಾರೆಂಬುದು ಅವರ ಈ ಆಣತಿಯಿಂದ ಸಾಬೀತಾಗಿದೆ.
ಎಲ್ಲಾ ಉನ್ನತ ಮಟ್ಟದ ಅಧಿಕಾರಿಗಳು ತಮ್ಮ ಹವಾ ನಿಯಂತ್ರಿತ ಕ್ಯಾಬಿನ್ ಗಳಿಂದ ಹೊರಬಂದು ಕೆಳ ಮಟ್ಟದ ಅಧಿಕಾರಿಗಳ ಜತೆ ಸಂಪರ್ಕ ಬೆಳೆಸಬೇಕು. ಚುರುಕಾಗಿ, ಅಚ್ಚುಕಟ್ಟಾಗಿ ಕೆಲಸ ಕಾರ್ಯಗಳನ್ನು ಮಾಡಬೇಕೆಂದು ತಾಕೀತು ಮಾಡಿದ್ದಾರೆ.[ಕಪಿಲ್ ಮಿಶ್ರಾ ಉಚ್ಛಾಟನೆಗೇಕೆ ಕೇಜ್ರಿ ಮುಂದಾಗುತ್ತಿಲ್ಲ?]

ಯಾವುದೇ ಕಾನೂನು, ಶಾಸನಗಳು ಜಾರಿಯಾಗಬೇಕಿದ್ದರೆ ಅಧಿಕಾರಿ ವರ್ಗದ ಸಹಕಾರ, ನಿಷ್ಠೆ ಬೇಕೇ ಬೇಕು. ಹಾಗಾಗಿ, ಅಧಿಕಾರಿಗಳು ತಮ್ಮ ಆಲಸ್ಯವನ್ನು ಬದಿಗೊತ್ತಿ ಬಂದು ಕೆಲಸ ಮಾಡಬೇಕು ಎಂದು ತಿಳಿಸಿದ್ದಾರೆ.[ಅರವಿಂದ್ ಕೇಜ್ರಿವಾಲ್ ಒಬ್ಬ 420 : ಸುಬ್ರಮಣಿಯನ್ ಸ್ವಾಮಿ]
ಇತ್ತೀಚೆಗೆ, ತಮ್ಮ ಪಕ್ಷದಲ್ಲಿನ ಒಡಕು, ಖುದ್ದು ಆಮ್ ಆದ್ಮಿ ಪಾರ್ಟಿ (ಆಪ್) ಸರ್ಕಾರದ ಸಚಿವರುಗಳೇ ಹಗರಣಗಳಲ್ಲಿ ಸಿಲುಕಿ ಹಾಕಿಕೊಂಡಿದ್ದಲ್ಲದೆ, ಖುದ್ದು ಅರವಿಂದ್ ಕೇಜ್ರಿವಾಲ್ ಅವರೇ ಲಂಚ ಆರೋಪಕ್ಕೆ ಗುರಿಯಾಗಿದ್ದರು.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications