ಕಣಿವೆ ರಾಜ್ಯದಲ್ಲಿ ಕೋಲಾಹಲ ಎಬ್ಬಿಸಲು ಹುರಿಯತ್ ಹುನ್ನಾರ!
ನವದೆಹಲಿ, ನವೆಂಬರ್ 24: ಜಮ್ಮು-ಕಾಶ್ಮೀರದಲ್ಲಿ ನಿಧಾನಕ್ಕೆ ಶಾಂತಿ ಮರಳುತ್ತಿದೆ. ಸಹಜ ಸ್ಥಿತಿಗೆ ಕಣಿವೆ ರಾಜ್ಯ ಬರುತ್ತಿದ್ದು, ಹುರಿಯತ್ ನಾಯಕರು ಮತ್ತೊಂದು ಸುತ್ತು ಕೋಲಾಹಲ ಎಬ್ಬಿಸಲು ಯೋಜನೆ ಹಾಕಿಕೊಂಡಿದ್ದಾರೆ ಎಂದು ಗುಪ್ತಚರ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ನೋಟು ರದ್ದು ಹುರಿಯತ್ ಗೂ ಬಿಸಿ ಮುಟ್ಟಿಸಿದೆ.
ಅದರೆ, ಹೊಸದಾಗಿ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡುವ ಸಲುವಾಗಿ ಹುರಿಯತ್ ನವರು ನಿಧಾನಕ್ಕೆ ಹಣ ಒಟ್ಟು ಮಾಡಿಕೊಳ್ಳುತ್ತಿದ್ದಾರೆ ಎಂದು ಗುಪ್ತಚರ ಇಲಾಖೆ ಎಚ್ಚರಿಸಿದೆ. ಹುರಿಯತ್ ಹೊಸದಾಗಿ ಕೋಲಾಹಲ ಎಬ್ಬಿಸಲು ಹವಣಿಸುತ್ತಿದ್ದರೆ, ಪಾಕಿಸ್ತಾನವು ಭಾರತದೊಳಗೆ ಹೆಚ್ಚಿನ ಸಂಖ್ಯೆಯ ಉಗ್ರರನ್ನು ಕಳಿಸಲು ಯತ್ನಿಸುತ್ತಿದೆ.[ಪಾಕ್ ಕ್ರೌರ್ಯಕ್ಕೆ ಸಾಕ್ಷಿಯಾದ ಮಚಿಲ್ ನಲ್ಲಿ ಪಹರೆ ಸುಲಭವಲ್ಲ!]

ಈ ಎರಡೂ ಪ್ರಯತ್ನಗಳು ಗಂಡಾಂತಕಾರಿ ಎಂದು ಗುಪ್ತಚರ ಅಧಿಕಾರಿಗಳು ಮಾಹಿತಿ ನೀಡಿದ್ದು, ಸ್ಥಳೀಯ ಪೊಲೀಸರು ತುಂಬ ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದಿದ್ದಾರೆ. ಹುರಿಯತ್ ಮಾಡಿದ ಎಲ್ಲ ಯೋಜನೆಗಳು ಕಳೆದ ಕೆಲವು ವಾರಗಳಲ್ಲಿ ಹಾಳಾಗಿವೆ. ಇತ್ತೀಚೆಗೆ ಕಾಶ್ಮೀರದಲ್ಲಿ ಶಾಂತಿಯುತವಾಗಿ ನಡೆದ ವಿದ್ಯಾರ್ಥಿಗಳ ಪರೀಕ್ಷೆಗಳಿಂದ ಅದಕ್ಕೆ ಹಿನ್ನಡೆಯಾದಂತಾಗಿದೆ.
ಪರೀಕ್ಷೆಗಳು ತೊಂದರೆ ನೀಡಲು ಮಾಡಿದ ಯತ್ನಗಳು ವಿಫಲವಾದವು. ಸದ್ಯಕ್ಕೆ ಅವರಿಗೆ ನಗದಿಗೆ ಸಮಸ್ಯೆಯಾಗಿದೆ. ಹಿಂಸಾಚಾರಕ್ಕಾಗಿ ಇಟ್ಟುಕೊಂಡಿದ್ದದ್ದು ಕಪ್ಪು ಹಣ. 500, 1000 ನೋಟುಗಳನ್ನು ರದ್ದು ಮಾಡಿದ ನಂತರ ಅವು ಪ್ರಯೋಜನಕ್ಕೆ ಇಲ್ಲದಂತಾಗಿವೆ. ಆದ್ದರಿಂದ ಮತ್ತೆ ಹಣ ಒಗ್ಗೂಡಿಸುವ ಪ್ರಯತ್ನದಲ್ಲಿದ್ದಾರೆ.[ಹತರಾದ ಉಗ್ರರ ಬಳಿ ಸಿಕ್ಕಿತು 2 ಸಾವಿರ ರು. ನೋಟು]
ಅದು ಪೂರ್ಣ ಆಗುತ್ತಿದ್ದಂತೆ ಮತ್ತೆ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡುತ್ತಾರೆ ಎಂದು ಗುಪ್ತಚರ ಇಲಾಖೆ ಅಧಿಕಾರಿಗಳು ಎಚ್ಚರಿಕೆ ಮಾತನಾಡಿದ್ದಾರೆ. ಇದೇ ವೇಳೆ ಪ್ರತ್ಯೇಕತಾವಾದಿಗಳ ಆರ್ಥಿಕ ವ್ಯವಹಾರಗಳ ಮೇಲೆ ಕಣ್ಣಿಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications