ಗಾಜಿಯಾಬಾದ್: ಪ್ರಿಯಕರ ಮತ್ತು ಪತ್ನಿಯ ಪ್ರೇಮ್ ಕಹಾನಿಗೆ ಬಲಿಯಾಯ್ತು ಪತಿಯ ಜೀವ
ಶ್ರದ್ಧಾ ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಈ ಪ್ರಕರಣ ಕಣ್ಮುಂದೆ ಇರುವಾಗಲೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಸಿನಿಮಿಯ ಮಾದರಿಯಲ್ಲಿ ಪತ್ನಿ ಪತಿಯನ್ನು ಕೊಲೆ ಮಾಡಿದ ಘಟನೆ ಗಾಜಿಯಾಬಾದ್ನಲ್ಲಿ ನಡೆದಿದೆ. ಪ್ರಿಯಕರನ ಸಹಾಯದಿಂದ ಪತಿಯನ್ನು ಕೊಂದು ಮನೆಯೊಳಗೆ ಪತಿಯ ದೇಹವನ್ನು ಹೂತುಹಾಕಿದ್ದ ಪತ್ನಿ ನಾಲ್ಕು ವರ್ಷದ ಬಳಿಕ ಸಿಕ್ಕಿಬಿದ್ದಿದ್ದಾಳೆ.
ಘಟನೆ ನಡೆದು ನಾಲ್ಕು ವರ್ಷದ ಬಳಿಕ ಪ್ರಕರಣವನ್ನು ಭೇದಿಸಿರುವುದಾಗಿ ಪೊಲೀಸರು ಹೇಳಿಕೊಂಡಿದ್ದಾರೆ. 2018 ರಲ್ಲಿ ಈ ಘಟನೆ ನಡೆದಿದ್ದು ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸರು ಹತ್ಯೆಗೈದ ವ್ಯಕ್ತಿಯ ದೇಹವನ್ನು ಹೊರತೆಗೆದಿರುವುದಾಗಿ ತಿಳಿಸಿದ್ದಾರೆ. ಕೊಲೆಯಾದ ವ್ಯಕ್ತಿಯ ಪತ್ನಿ ನೆರೆಯ ಗೆಳೆಯನೊಂದಿಗೆ ಸಂಬಂಧ ಹೊಂದಿದ್ದರು ಎಂದು ತನಿಖೆಯಿಂದ ಬಯಲಾಗಿದೆ. ವ್ಯಕ್ತಿಯ ಶವವನ್ನು ಆತನ ಪತ್ನಿಯ ಪ್ರಿಯಕರನ ಒಡೆತನದ ಮನೆಯಲ್ಲಿ ಹೂಳಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಸಿಕ್ರೋಡ್ ಗ್ರಾಮದ ಸಂತ್ರಸ್ತ ಚಂದ್ರವೀರ್ ಎಂಬಾತ ಸೆಪ್ಟೆಂಬರ್ 28, 2018 ರಂದು ನಾಪತ್ತೆಯಾಗಿದ್ದನು. ಈ ಬಗ್ಗೆ ಸಿಹಾನಿ ಗೇಟ್ ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿತ್ತು. ಪೊಲೀಸರು ಪ್ರಗತಿ ಸಾಧಿಸಲು ಸಾಧ್ಯವಾಗದ ಕಾರಣ ಪ್ರಕರಣವನ್ನು ಮುಕ್ತಾಯಗೊಳಿಸಲಾಗಿತ್ತು. ಆದರೆ ಹೊಸ ಮಾಹಿತಿಯ ಆಧಾರದ ಮೇಲೆ, ಪೊಲೀಸರು ಇತ್ತೀಚೆಗೆ ಪ್ರಕರಣವನ್ನು ಪುನಃ ಕೈಗೆತ್ತಿಕೊಂಡಿದ್ದರು.

ಚಂದ್ರವೀರ್ ಅವರ ಪತ್ನಿ ಸವಿತಾ ಮದುವೆಗೂ ಮುನ್ನ ಅರುಣ್ ಅಲಿಯಾಸ್ ಅನಿಲ್ ಕುಮಾರ್ ಜೊತೆ ಸಂಬಂಧ ಹೊಂದಿದ್ದರು. ಮದುವೆಯ ನಂತರವೂ ಸವಿತಾ ಅನಿಲ್ ಜೊತೆ ಸಂಬಂಧ ಹೊಂದಿದ್ದರು. ಅರುಣ್ ಮನೆಗೆ ಬಂದು ಹೋಗುವಾಗ ಹಲವಾರು ಬಾರಿ ಚಂದ್ರವೀರ್ ಕೈಗೆ ಸಿಕ್ಕಿಬಿದ್ದಿದ್ದನು. ಇದಕ್ಕಾಗಿ ಅರುಣ್ನನ್ನು ಚಂದ್ರವೀರ್ ಥಳಿಸಿದ್ದಾನೆ. ಇದೇ ದ್ವೇಷವನ್ನು ಅರುಣ್ ಚಂದ್ರವೀರ್ ಮೇಲೆ ಇಟ್ಟುಕೊಂಡಿದ್ದನು.
ಪುನ: ಪ್ರಕರಣದ ತನಿಖೆ ಆರಂಭ
ಸೆಪ್ಟೆಂಬರ್ 28, 2018 ರಂದು ಚಂದ್ರವೀರ್ ಅಮಲೇರಿದ ಸ್ಥಿತಿಯಲ್ಲಿ ಮನೆಗೆ ಮರಳಿದ್ದನು. ನಿದ್ದೆಗೆ ಜಾರಿದಾಗ ಸವಿತಾ ಅರುಣ್ ಅನ್ನು ತನ್ನ ಮನೆಗೆ ಕರೆದಿದ್ದಾಳೆ. ಅರುಣ್ ಪಿಸ್ತೂಲ್ ಬಳಸಿ ಚಂದ್ರವೀರ್ ಅವರ ತಲೆಗೆ ಗುಂಡು ಹಾರಿಸಿದ್ದಾನೆ. ಆಗ ಚಂದ್ರವೀರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಳಿಕ ಅರುಣ್ ಮನೆಯಲ್ಲಿ ಹೂತು ಹಾಕಲಾಗಿದೆ. ಪ್ರಕರಣದ ಬಗ್ಗೆ ಹೆಚ್ಚು ಸಾಕ್ಷಿಗಳು ಸಿಗದ ಬೆನ್ನಲ್ಲೆ ಪ್ರಕರಣವನ್ನು ಕೈಬಿಡಲಾಗಿತ್ತು. ಇತ್ತೀಚೆಗೆ ಸಿಕ್ಕ ಮಾಹಿತಿ ಆಧಾರದ ಮೇಲೆ ಪುನ: ಪ್ರಕರಣದ ತನಿಖೆ ಆರಂಭಿಸಿದ ಪೊಲೀಸರಿಗೆ ಅಸಲಿಯತ್ತು ತಿಳಿದಿದೆ. ಸದ್ಯ ಇಬ್ಬರು ಅಪರಾಧಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕೃತ್ಯಕ್ಕೆ ಬಳಸಿದ್ದ ಪಿಸ್ತೂಲ್ ಹಾಗೂ ಗುಂಡಿ ಅಗೆಯಲು ಬಳಸಿದ್ದ ಕೊಡಲಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅನಿಲ್ ಅವರ ಮನೆಯೊಳಗಿನ ಆರು ಅಡಿ ಆಳದ ಗುಂಡಿಯಿಂದ ಅಸ್ಥಿಪಂಜರವನ್ನು ಹೊರತೆಗೆಯಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಅಪರಾಧ) ದೀಕ್ಷಾ ಶರ್ಮಾ ಅವರು ತಿಳಿಸಿದ್ದಾರೆ. ಡಿಎನ್ಎ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications