ತಿರುಪತಿ: ತಾಯಿ ಶವ ಮನೆಯಲ್ಲಿದ್ದರೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ಹುಡುಗಿ
ತಿರುಪತಿ,ಮಾರ್ಚ್,23: ಹೆತ್ತ ತಾಯಿಯನ್ನು ಉಳಿಸಿಕೊಳ್ಳಲಾಗಲಿಲ್ಲ. ತಾಯಿಯ ಮಾತನ್ನಾದರೂ ಉಳಿಸಿಕೊಳ್ಳೋಣ ಎಂದು ಮನದಲ್ಲಿರುವ ತಾಯಿಯನ್ನು ಕಳೆದುಕೊಂಡ ಅಗಾಧ ನೋವನ್ನು ಬದಿಯಲ್ಲಿರಿಸಿ ಪರೀಕ್ಷೆ ಬರೆದು ಆಕೆಯ ಆತ್ಮಕ್ಕೆ ಶಾಂತಿ ತಂದಿದ್ದಾಳೆ ಎಸ್ಎಸ್ಎಲ್ ಸಿ ಹುಡುಗಿ.
ಆಂಧ್ರಪ್ರದೇಶದ ತಿರುಪತಿಯವಳಾದ ಜಯಶ್ರೀ ಎಂಬ ಬಾಲಕಿ ಮನೆಯಲ್ಲಿ ತಾಯಿಯ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಯುತ್ತಿರುವಾಗಲೇ ತಾಯಿಯ ಆಸೆಯನ್ನು ಈಡೇರಿಸುವುದೇ ನನ್ನ ಮುಂದಿರುವ ಸವಾಲು ಎಂದು ಯೋಚಿಸುತ್ತಾ ಕಂಬನಿ ಗರೆಯುತ್ತಲೇ ಪರೀಕ್ಷೆ ಬರೆದು ಮುಗಿಸಿದ್ದಾಳೆ.['ಸಾಯೋದ್ರೊಳಗೆ ಒಂದು ಮಗುವಾದ್ರೂ ಎಸ್ಸೆಸ್ಸೆಲ್ಸಿ ಮಾಡಲಿ'!]

ಘಟನೆಯ ವಿವರ?
ಜಯಶ್ರೀ ಸೋಮವಾರ ಇರುವ ತನ್ನ ಜೀವನದ ತಿರುವು ಬದಲಾಯಿಸುವ ಎಸ್ಎಸ್ಎಲ್ ಸಿ ಪರೀಕ್ಷೆಗೆ ತೆರಳಲು ತಯಾರಾಗುತ್ತಿದ್ದಳು. ಆಗ ತಾಯಿ ನಿರ್ಮಲಾ ಅಡುಗೆ ಮನೆಯಲ್ಲಿ ತಿಂಡಿ ತಯಾರಿಸುತ್ತಿದ್ದಾಗ ಎಕಾಏಕಿ ಪಾರ್ಶ್ವವಾಯು ಬಂದು ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದು, ಕೆಲವೇ ಕ್ಷಣಗಳಲ್ಲಿ ಮೃತಪಟ್ಟಿದ್ದಾರೆ.[ಸಿಂಗಪುರದಲ್ಲಿ ಕನ್ನಡ ಹುಡುಗಿಯ ಅಪರೂಪದ ಸಾಧನೆ]
ಪರೀಕ್ಷೆ ಬರೆಯಲು ಸಜ್ಜಾಗಿದ್ದ ಜಯಶ್ರೀಗೆ ಸಿಡಿಲು ಬಡಿದಂತಾಯಿತು. ಆದರೂ ಧೃತಿಗೆಡಲಿಲ್ಲ. ಶಿಕ್ಷಣದ ಮಹತ್ದದ ಬಗ್ಗೆ ತಾಯಿ ಆಡುತ್ತಿದ್ದ ಮಾತುಗಳನ್ನು ಆಲಿಸುತ್ತಿದ್ದ ಜಯಶ್ರೀ ತಾಯಿ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ನಾನು ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣಳಾಗಬೇಕು ಎಂದು ಮನದಲ್ಲಿ ಗಟ್ಟಿ ನಿರ್ಧಾರ ಮಾಡಿ ಕಣ್ಣೀರುಗರೆಯುತ್ತಲೇ ಪರೀಕ್ಷೆ ಬರೆದು ಬಳಿಕ ತಾಯಿಯ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದಾಳೆ.
ತಾಯಿ ಸತ್ತ ದಿನ ಪರೀಕ್ಷೆ ಬರೆಯಲು ಹೋಗುವುದಾಗಿ ತಿಳಿಸಿದ ಜಯಶ್ರೀಗೆ ಸಂಬಂಧಿಕರು ತೀವ್ರ ವಿರೋಧ ಒಡ್ಡಿದರು. ಆದರೂ ಪರೀಕ್ಷೆಗೆ ತೆರಳಿದ ಆಕೆ ಮುಂದಿನ ಎಲ್ಲಾ ಪರೀಕ್ಷೆಗಳನ್ನು ಎದುರಿಸುವೆ. ನನ್ನ ತಾಯಿಯ ಕಡೆಯ ಆಸೆ ಈಡೇರಿಸುವೆ ಎಂದು ಹೇಳಿದ್ದಾಳೆ.
-
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
ಇಂದಿನಿಂದ SSLC ಪರೀಕ್ಷೆ: 8.66 ಲಕ್ಷ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಶುಭಹಾರೈಕೆ; ಆತಂಕಬೇಡ ಎಂದ ಸರ್ಕಾರ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು












Click it and Unblock the Notifications