ಕೊಳವೆ ಬಾವಿ ದುರಂತ : ಮರುಹುಟ್ಟು ಪಡೆದ ರಾಜಸ್ಥಾನ ಬಾಲೆ
ಜೈಪುರ, ಜೂ, 30 : ಕೊಳವೆ ಬಾವಿಗೆ ಬಿದ್ದು ಪ್ರಾಣ ಕಳೆದುಕೊಳ್ಳುತ್ತಿರುವ ಹಸುಳೆಗಳ ಸಂಖ್ಯೆಗೇನೂ ಕಡಿಮೆಯಿಲ್ಲ. ಆದರೆ ಇದರ ನಡುವೆ 5 ವರ್ಷದ ಸುನೀತಾ ಯಾದವ್ ಎಂಬಾಕೆ ಜೀವಂತವಾಗಿ ಪಾರಾದ ಘಟನೆ ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ನಡೆದಿದೆ.
ಈಕೆ ಸುಮಾರು ಶನಿವಾರ ಬೆಳಿಗ್ಗೆ 8 ಗಂಟೆಗೆ ತನ್ನ ತಂಗಿಯೊಂದಿಗೆ ತೋಟದಲ್ಲಿ ಆಟವಾಡುವ ಸಮಯದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದಾಳೆ. ಈ ಮಾಹಿತಿ ತಿಳಿದ ಸೇನಾ ಕಾರ್ಯಪಡೆ, ಪೊಲೀಸರು ಮತ್ತು ಜಿಲ್ಲಾ ಆಡಳಿತಗಾರರು ಸ್ಥಳಕ್ಕೆ ಧಾವಿಸಿ ಬೆಳಿಗ್ಗೆ 9 ಕ್ಕೆ ತಮ್ಮ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಸುಮಾರು 32 ಅಡಿ ಆಳ ಭೂಮಿ ಕೊರೆದ ಇವರು ಭಾನುವಾರ ಆಕೆಯನ್ನು ಜೀವಂತವಾಗಿ ಮೇಲಕ್ಕೆತ್ತುವಲ್ಲಿ ಯಶಸ್ವಿಯಾಗಿದ್ದಾರೆ.

ಆಮ್ಲಜನಕ, ನೀರು ಮತ್ತು ಆಹಾರವನ್ನು ಸುನೀತಾಳಿಗೆ ಪೈಪ್ ಮೂಲಕ ಒದಗಿಸಲಾಗಿತ್ತು. ಆಕೆಯಿಂದ ನಿರಂತರವಾಗಿ ಕೇಳಿ ಬರುತ್ತಿದ್ದ ಧ್ವನಿ ಹಾಗೂ ಅವಳ ಸ್ಥೈರ್ಯದ ಪರಿಣಾಮ ಅವಳನ್ನು ಜೀವಂತವಾಗಿ ಮೇಲೆತ್ತುವಲ್ಲಿ ಈ ಕಾರ್ಯಾಚರಣೆ ಸುಸೂತ್ರವಾಗಿ ನೆರವೇರಿದೆ ಎಂದು ಜಿಲ್ಲಾ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.
ಕಾರ್ಯಾಚರಣೆ ವೇಳೆಯಲ್ಲಿ ಒಂದು ಬೃಹದಾದ ಬಂಡೆ ಅಡ್ಡಿಯಾದ ಪರಿಣಾಮ ಸ್ವಲ್ಪ ಮಟ್ಟಿಗೆ ವಿಳಂಬವಾಯಿತು. ಒಟ್ಟಿನಲ್ಲಿ ಸುನೀತಾಳನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಮೇಲೆತ್ತಲಾಗಿದ್ದು, ಅಷ್ಟರಲ್ಲಾಗಲೇ ಸಮಯ ಭಾನುವಾರ ಮಧ್ಯಾಹ್ನ 3.25 ಆಗಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.
ಕಾರ್ಯಾಚರಣೆ ವಿವರ :
* ಸುನೀತಾ ಬೆಳಿಗ್ಗೆ 8 ಗಂಟೆಗೆ ಸುಮಾರು 30 ಅಡಿಯಷ್ಟು ಆಳದ ಕೊಳವೆ ಬಾವಿಗೆ ಬಿದ್ದಿದ್ದಳು.
* ಸುಮಾರು 9 ಗಂಟೆಗೆ ಆಕೆಯನ್ನು ಮೇಲೆತ್ತುವ ಕಾರ್ಯಾಚರಣೆ ಆರಂಭವಾಯಿತು.
* ಬೆಳಗ್ಗೆ 10 ಕ್ಕೆ 3 ಭೂಮಿ ಕೊರೆಯುವ ಯಂತ್ರಗಳು ಭೂಮಿಯನ್ನು ಸಮಾನಾಂತರವಾಗಿ ಕೊರೆಯಲು ಪ್ರಾರಂಭಿಸಿದವು
* ಶನಿವಾರ 3 ಗಂಟೆಯ ಸುಮಾರಿಗೆ ಸೇನೆಯವರು 25 ಅಡಿ ಆಳ ಕೊರೆದಿರುವುದಾಗಿ ತಿಳಿಸಿದರು.
* ರಾತ್ರಿ 10 ಕ್ಕೆ ಒಂದು ಬೃಹದಾದ ಕಲ್ಲು ಕಾರ್ಯಚರಣೆಗೆ ಅಡ್ಡಿ ಉಂಟು ಮಾಡಿತು.
* ಭಾನುವಾರ ಸುಮಾರು ಮಧ್ಯಾಹ್ನ 3 ಗಂಟೆ 25 ನಿಮಿಷಕ್ಕೆ ಸುನೀತಾಳನ್ನು ಮೇಲಕ್ಕೆತ್ತಲಾಯಿತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications