'ಬಾಲಿಕಾಗೃಹದಲ್ಲಿ ಲೈಂಗಿಕ ದೌರ್ಜನ್ಯ: ಇಂತಹ ಘಟನೆಗಳು ಇನ್ನೂ ಇವೆ'
ನವದೆಹಲಿ, ಆಗಸ್ಟ್ 6: 'ಮುಜಫ್ಫರ್ಪುರ ಮತ್ತು ಡಿಯೊರಿಯಾದಲ್ಲಿ ನಡೆದಿರುವ ಘಟನೆಗಳು ನಮಗೆ ತೀವ್ರ ಆಘಾತ ಮತ್ತು ದುಃಖ ಉಂಟುಮಾಡಿವೆ. ಇಂತಹ ಅನೇಕ ಸ್ಥಳಗಳನ್ನು ಹೊರಕ್ಕೆ ತೆಗೆಯುತ್ತೇವೆ' ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಮೇನಕಾ ಗಾಂಧಿ ಹೇಳಿದ್ದಾರೆ.
ಬಿಹಾರದ ಮುಜಫ್ಫರ್ ಪುರ ಮತ್ತು ಉತ್ತರ ಪ್ರದೇಶದ ಡಿಯೊರಿಯಾದಲ್ಲಿನ ಬಾಲಿಕಾಗೃಹಗಳಲ್ಲಿ ಬಾಲಕಿಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಗಳ ಬಗ್ಗೆ ಅವರು ಮೇನಕಾ ಕಳವಳ ವ್ಯಕ್ತಪಡಿಸಿದ್ದಾರೆ.
'ಎಲ್ಲ ಸಂಸದರೂ ತಮ್ಮ ಕ್ಷೇತ್ರಗಳಲ್ಲಿನ ಬಾಲಿಕಾಗೃಹಗಳು, ಸಂಸ್ಥೆಗಳಿಗೆ ಭೇಟಿ ನೀಡಿ ಅವುಗಳ ಸ್ಥಿತಿಗತಿ ಬಗ್ಗೆ ವರದಿ ನೀಡುವಂತೆ ಸೂಚಿಸಲಾಗುವುದು. ನಾನು ಕೂಡಲೇ ಕ್ರಮ ಕೈಗೊಳ್ಳುತ್ತೇನೆ.

ಇದಕ್ಕೆ ದೀರ್ಘಾವಧಿ ಪರಿಹಾರವೆಂದರೆ, ಸಣ್ಣ ಸಣ್ಣ ಕೇಂದ್ರಗಳನ್ನು ತೆರೆಯುವ ಬದಲು, ಸಂಪೂರ್ಣ ಮಹಿಳಾ ಸಿಬ್ಬಂದಿಯೇ ಇರುವಂತಹ 1000 ಮಹಿಳೆಯರು ಮತ್ತು 1000 ಮಕ್ಕಳು ವಾಸಿಸಲು ಯೋಗ್ಯವಾದ ಬೃಹತ್ ಮನೆಗಳನ್ನು ನಿರ್ಮಿಸುವುದು. ಇದಕ್ಕೆ ನಾನು ಹಣ ಮಂಜೂರು ಮಾಡಿಕೊಡುತ್ತೇನೆ' ಎಂದು ಹೇಳಿದ್ದಾರೆ.
ಈ ಘಟನೆಗಳು ಭಯ ಮತ್ತು ನೋವುಂಟುಮಾಡುತ್ತಿವೆ. ಏಕೆಂದರೆ, ನಾವು ಈ ಕೇಂದ್ರಗಳಿಗೆ ವರ್ಷಗಳಿಂದ ಹಣ ನೀಡುವುದರ ಹೊರತಾಗಿ ಬೇರೆ ಯಾವುದೇ ಗಮನ ಹರಿಸಿಲ್ಲ ಎಂದಿದ್ದಾರೆ.
ಬಿಹಾರದ ಮುಜಫ್ಫರ್ಪುರದ ಬಾಲಿಕಾ ಗೃಹವೊಂದರಲ್ಲಿ 34 ಬಾಲಕಿಯರ ಮೇಲೆ ಅತ್ಯಾಚಾರ ನಡೆದಿದೆ ಎಂಬ ಸಂಗತಿ ಇತ್ತೀಚೆಗೆ ಬಹಿರಂಗವಾಗಿತ್ತು.
ಉತ್ತರ ಪ್ರದೇಶದ ಡಿಯೊರಿಯಾದಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದ 24 ಬಾಲಕಿಯರನ್ನು ಭಾನುವಾರ ರಕ್ಷಿಸಲಾಗಿದೆ. ಇನ್ನು ಉಳಿದ 18 ಬಾಲಕಿಯರು ನಾಪತ್ತೆಯಾಗಿದ್ದಾರೆ.
ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದೆ. ಮಾ ವಿಂಧ್ಯವಾಸಿನಿ ಮಹಿಳಾ ಪ್ರಕಿಷಣ್ ಏವಂ ಸಮಾಜ ಸೇವಾ ಸಂಸ್ಥಾನ್ ಎಂಬ ಹೆಸರಿನ ಬಾಲಿಕಾಗೃಹದಲ್ಲಿ ಅಕ್ರಮಗಳು ನಡೆಯುತ್ತಿದ್ದವು ಎಂದು ಆರೋಪಿಸಲಾಗಿದೆ.
ಇದನ್ನು ಎನ್ಜಿಓ ಒಂದು ನಡೆಸುತ್ತಿದ್ದು, ಅದಕ್ಕೆ ನೀಡಲಾಗಿದ್ದ ಮಾನ್ಯತೆಯನ್ನು ಒಂದು ವರ್ಷದ ಹಿಂದೆಯೇ ರದ್ದುಗೊಳಿಸಲಾಗಿತ್ತು. ಅದಕ್ಕೆ ಹಣವನ್ನು ಸಹ ನೀಡಲಾಗುತ್ತಿರಲಿಲ್ಲ. ಇದುವರೆಗೂ ಅದು ಹೇಗೆ ಕಾರ್ಯನಿರ್ವಹಿಸುತ್ತಿತ್ತು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಉತ್ತರ ಪ್ರದೇಶ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ರೀಟಾ ಬಹುಗುಣ ಜೋಶಿ ತಿಳಿಸಿದ್ದಾರೆ.
#WATCH: Union Minister Maneka Gandhi says, "Yeh jo Muzaffarpur aur Deoria main hua hai, ussey hum log chakit bhi hain aur dukhi bhi. Aur mujhe maloom hai ki aise bahut saare jagah niklenge." pic.twitter.com/6PqedNFEiT
— ANI (@ANI) 6 August 2018
10 ವರ್ಷದ ಬಾಲಕಿಯೊಬ್ಬಳು ಅದರಿಂದ ತಪ್ಪಿಸಿಕೊಂಡು ಸಮೀಪದ ಮಹಿಳಾ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ ಬಳಿಕ ಈ ಘಟನೆ ಬಹಿರಂಗಗೊಂಡಿದೆ.
'ಅನೇಕ ಬಾರಿ ಬಿಳಿ, ಕಪ್ಪು ಮತ್ತು ಕೆಂಪು ಬಣ್ಣದ ಕಾರುಗಳು ಬಂದು ಹೆಣ್ಣುಮಕ್ಕಳನ್ನು ಕರೆದೊಯ್ಯುತ್ತಿದ್ದವು. ಬೆಳಿಗ್ಗೆ ಅವರು ಮರಳಿದಾಗ ಅಳುತ್ತಿದ್ದರು. ಅಲ್ಲದೆ, ಪ್ರತಿದಿನ ಸಂಜೆ 4 ಗಂಟೆಗೆ ಕೆಲವು ಮಂದಿ ಬಂದು ಕೆಲವು ಬಾಲಕಿಯರನ್ನು ಕರೆದೊಯ್ಯುತ್ತಿದ್ದರು. ಅವರ ಜತೆ ಮ್ಯಾನೇಜರ್ ಕೂಡ ಹೋಗುತ್ತಿದ್ದರು' ಎಂದು ಬಾಲಕಿ ತಿಳಿಸಿದ್ದಾರೆ.
ಅದನ್ನು ನಡೆಸುತ್ತಿದ್ದ ಗಿರಿಜಾ ತ್ರಿಪಾಠಿ ಮತ್ತು ಆಕೆಯ ಪತಿ ಮೋಹನ್ ತ್ರಿಪಾಠಿಯನ್ನು ಬಂಧಿಸಲಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications