25 ವರ್ಷಗಳ ಹಿಂದಿನ ಜಾಗತೀಕರಣದಿಂದ ಸದೃಢ ಆರ್ಥಿಕತೆ: ಸಿಂಗ್
ನವದೆಹಲಿ, ಸೆಪ್ಟೆಂಬರ್ 23: ಇಪ್ಪತ್ತೈದು ವರ್ಷಗಳ ಹಿಂದೆ ಭಾರತದ ಆರ್ಥಿಕತೆಯು ಜಾಗತೀಕರಣಕ್ಕೆ ತನ್ನನ್ನು ತಾನು ತೆರೆದುಕೊಂಡ ನಂತರವೇ ಸಾಮಾಜಿಕವಾಗಿ, ಆರ್ಥಿಕವಾಗಿ ಬೆಳೆಯಲು ಸಹಾಯವಾಯಿತು ಎಂದು ಮಾಜಿ ಪ್ರಧಾನಿ ಹಾಗೂ ಖ್ಯಾತ ವಿತ್ತ ಸಚಿವ ಮನಮೋಹನ್ ಸಿಂಗ್ ಅವರು ತಿಳಿಸಿದ್ದಾರೆ.
ನವದೆಹಲಿಯಲ್ಲಿ ಶನಿವಾರ (ಸೆ. 23) ನಡೆದ 'ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್ ಲೀಡರ್ ಶಿಪ್ ಸಮ್ಮೇಳನ 2017' ಮಾತನಾಡಿದ ಅವರು, ''ಜಾಗತೀಕರಣವು ಮಾರ್ಪಾಟು ಮಾಡಲಾಗದ್ದು. ಅಂದು ಭಾರತದ ಆರ್ಥಿಕತೆ ಕಷ್ಟದ ಪರಿಸ್ಥಿತಿಯಲ್ಲಿದ್ದಾಗ ನಾವು (1991ರಲ್ಲಿ ಮನಮೋಹನ್ ಸಿಂಗ್ ಅವರು ವಿತ್ತಮಂತ್ರಿಯಾಗಿದ್ದಾಗಲೇ ಭಾರತವು ಡಬ್ಲ್ಯೂಟಿಒ ಒಪ್ಪಂದಕ್ಕೆ ಸಹಿ ಹಾಕಿತ್ತು) ಜಾಗತೀಕರಣಕ್ಕೆ ಮುನ್ನುಡಿ ಬರೆದಿದ್ದವು. 25 ವರ್ಷಗಳ ಹಿಂದೆ ಭಾರತದ ಆರ್ಥಿಕತೆ ಹೇಗಿತ್ತು, ಈಗ ಹೇಗಿದೆ ಎಂಬುದೇ ಇದಕ್ಕೆ ಸಾಕ್ಷಿ'' ಎಂದು ಅವರು ತಿಳಿಸಿದರು.

ಜಾಗತೀಕರಣದ ಹಿನ್ನೆಲೆಯಲ್ಲಿ ನಾವು ಹೊಸ ಹೊಸ ಆರ್ಥಿಕ ನೀತಿಗಳನ್ನು ಜಾರಿಗೊಳಿಸಿದಾಗ ಅನೇಕರು ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಆದರೆ, 25 ವರ್ಷಗಳ ನಂತರ, ಅಂದು ನಾವು ಕೈಗೊಂಡಿದ್ದ ನಿರ್ಧಾರ ಫಲ ಕೊಟ್ಟಿದೆ. ಅಂದು ಟೀಕಿಸಿದ್ದವರೂ ಇಂದು ಆ ನಿರ್ಧಾರವನ್ನು ಶ್ಲಾಘಿಸುತ್ತಿದ್ದಾರೆ'' ಎಂದು ಅವರು ತಿಳಿಸಿದರು.
-
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications