ಗೋವಾಕ್ಕೆ ಹೊಸ ಸಿಎಂ ಹುಡುಕಾಟ: ಅವಕಾಶ ಕೊಡುವಂತೆ ಮಿತ್ರ ಪಕ್ಷದ ಬೇಡಿಕೆ
ಪಣಜಿ, ಸೆಪ್ಟೆಂಬರ್ 15: ಸತತ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಗೋವಾದ ಬಿಜೆಪಿ ಮುಖ್ಯಮಂತ್ರಿ ಮನೋಹರ ಪರಿಕ್ಕರ್ ಅವರು ಸಿಎಂ ಹುದ್ದೆಯನ್ನು ಬೇರೆಯವರಿಗೆ ಬಿಟ್ಟುಕೊಡಲಿದ್ದಾರೆ. ಗೋವಾದ ಹೊಸ ಸಿಎಂ ಹುಡುಕಾಟ ಆರಂಭವಾಗಿದ್ದು ಮಿತ್ರಪಕ್ಷಗಳೂ ತಮಗೂ ಅವಕಾಶ ಕೊಡುವಂತೆ ಒತ್ತಾಯಿಸುತ್ತಿವೆ.
ಮೆದೋಜೀರಕ ಗ್ರಂಥಿ ಸಮಸ್ಯೆಯಿಂದ ಸತತವಾಗಿ ಬಳಲುತ್ತಿರುವ ಮನೋಹರ ಪರಿಕ್ಕರ್ ಅವರು ಕೆಲವು ದಿನಗಳ ಹಿಂದಷ್ಟೆ ಅಮೆರಿಕದಿಂದ ಚಿಕಿತ್ಸೆ ಪಡೆದು ಗೋವಾಕ್ಕೆ ವಾಪಸ್ಸಾಗಿದ್ದರು. ಬಂದ ನಂತರವೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ನರೇಂದ್ರ ಮೋದಿ ಅವರ ಸಲಹೆ ಮೇರೆಗೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ಪರಿಕ್ಕರ್ ಅವರು ದಾಖಲಾಗಲಿದ್ದು, ಹಾಗಾಗಿ ಮುಖ್ಯಮಂತ್ರಿ ಹುದ್ದೆಯನ್ನು ತ್ಯಜಿಸಿ ಬೇರೆಯವರಿಗೆ ಆ ಸ್ಥಾನ ನೀಡಲಿದ್ದಾರೆ.
ಈಗಾಗಲೇ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಮನೋಹರ ಪರಿಕ್ಕರ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ಮನೋಹರ ಪರಿಕ್ಕರ್ ಅವರ ಬದಲಿಗೆ ಬಿಜೆಪಿಯವರೇ ಆದ ವಿಜಯ್ ಪುರಾಣಿಕ್ ಅಥವಾ ಪಕ್ಷದ ಕಾರ್ಯದರ್ಶಿ ಬಿ.ಎಲ್.ಸಂತೋಶ್ ಅವರನ್ನು ಮುಖ್ಯಮಂತ್ರಿ ಮಾಡುವ ಬಗ್ಗೆ ಚಿಂತನೆ ನಡೆಸಿದ್ದಾರೆ.

ಆದರೆ ಸರ್ಕಾರಿ ರಚಿಸಲು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಮಿತ್ರ ಪಕ್ಷಗಳು ತಮ್ಮ ಸದಸ್ಯರಿಗೆ ಸಿಎಂ ಸ್ಥಾನ ನೀಡುವಂತೆ ಒತ್ತಾಯ ಮಾಡುತ್ತಿದ್ದು. ಸಿಎಂ ಆಯ್ಕೆ ಕಗ್ಗಂಟಾಗುವ ಎಲ್ಲ ಲಕ್ಷಣಗಳೂ ಇವೆ.
ಕಾಂಗ್ರೆಸ್ ಪಕ್ಷವು ಗೋವಾದಲ್ಲಿ ಅತಿ ಹೆಚ್ಚು ಸ್ಥಾನ ಗೆದ್ದಿದ್ದರೂ ಸಹಿತ ಬಿಜೆಪಿಯು ಜಿಎಫ್ಪಿ, ಎಂಜಿಪಿ ಮತ್ತು ಪಕ್ಷೇತರರ ಸಹಾಯದೊಂದಿಗೆ ಸರ್ಕಾರ ರಚಿಸಿದೆ. ಸರ್ಕಾರ ತನ್ನ ಐದು ವರ್ಷ ಪೂರೈಸಲು ಇನ್ನು ಹದಿನೆಂಟು ತಿಂಗಳು ಬಾಕಿ ಇದ್ದು ಈ ಅವಧಿಯನ್ನು ಮಿತ್ರ ಪಕ್ಷಗಳ ಸದಸ್ಯರಿಗೆ ಸಿಎಂ ಆಗಲು ಬಿಟ್ಟುಕೊಡಬೇಕು ಎಂಬ ಧ್ವನಿಯೂ ಎದ್ದಿದೆ.
ಇಂದು ಸಂಜೆ ವೇಳೆಗೆ ಬಿಜೆಪಿಯ ಹಿರಿಯ ಮುಖಂಡರೊಬ್ಬರು ಗೋವಾಕ್ಕೆ ತೆರಳಿ ಸಿಎಂ ಆಯ್ಕೆ ವಿಷಯವನ್ನು ಅಂತಿಮಗೊಳಿಸುವುದಾಗಿ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಆದರೆ ಹೊಸ ಮುಖ್ಯಮಂತ್ರಿಯು ತಾತ್ಕಾಲಿಕವಾಗಿಯಷ್ಟೆ ಇರಲಿದ್ದು, ಪರಿಕ್ಕರ್ ಅವರು ಗುಣವಾದ ನಂತರ ಮತ್ತೆ ಅವರೇ ಸಿಎಂ ಖುರ್ಚಿ ಮೇಲೆ ವಿರಾಜಮಾನರಾಗಲಿದ್ದಾರೆ.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications