ಪುರುಷರು ತಿಲಕ, ಮಹಿಳೆ ಕುಂಕುಮ ಇಡುವುದು ತಪ್ಪಾ?
ಗೋವಾ, ಏ. 6 : ಹಿಂದೂ ಪುರುಷರು ಮನೆಯಿಂದ ಹೊರಗೆ ಕಾಲಿಡುವಾಗ ಹಣೆಗೆ ತಿಲಕ ಧರಿಸಬೇಕು, ಮಹಿಳೆಯರು ಕುಂಕುಮ ಇಟ್ಟುಕೊಳ್ಳಬೇಕು. ಭಾರತೀಯ ನಾರಿಯರು ಪಾಶ್ಚಿಮಾತ್ಯ ಸಂಸ್ಕೃತಿಯ ದಾಸರಾಗಬಾರದು. ಉದ್ರೇಕಿಸುವಂತೆ ಬಿಗಿಯಾದ ಬಟ್ಟೆ ಧರಿಸಬಾರದು ಎಂದು ಹೇಳಿಕೆ ನೀಡಿರುವ ಗೋವಾದ ಸಚಿವರ ಪತ್ನಿಯೊಬ್ಬರು ವಿವಾದಕ್ಕೆ ನಾಂದಿ ಹಾಡಿದ್ದಾರೆ.
ಬಟ್ಟೆ ಧರಿಸುವುದು ಬಿಡುವುದು, ಕೂದಲು ಕೆದರಿಕೊಳ್ಳುವುದು ಬಿಡುವುದು, ಮದುವೆಗೆ ಮುನ್ನ ಲೈಂಗಿಕತೆಯಲ್ಲಿ ತೊಡಗುವುದು ಬಿಡುವುಗು #MyChoice ಎಂದು ನಟಿಯರು ಹೇಳಿಕೆಕೊಟ್ಟು ಸಮಾಜದ ಕೆಂಗಣ್ಣಿಗೆ ಗುರಿಯಾಗಿರುವ ಸಂದರ್ಭದಲ್ಲಿ, ಗೋವಾದ ಸಚಿವ ದೀಪಕ್ ಧವಳಿಕರ್ ಅವರ ಹೆಂಡತಿ ಲತಾ ಅವರು ನೀಡಿರುವ ಈ ಹೇಳಿಕೆ ಕೂಡ ವಿವಾದಕ್ಕೆ ಕಾರಣವಾದರೆ ಅಚ್ಚರಿಯಿಲ್ಲ.

ಬಲಪಂಥೀಯ ಸಂಘಟನೆಯಾದ ಸನಾತನ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಲತಾ ಅವರು, ಮಡಗಾಂವ್ ನಲ್ಲಿ ಭಾನುವಾರ ಬಹಿರಂಗ ಸಭೆಯನ್ನು ಉದ್ದೇಶಿಸಿ, ಪೋಷಕರು ಮಕ್ಕಳನ್ನು ಕಾನ್ವೆಂಟಿಗೆ ಕಳುಹಿಸಬಾರದು, ಮಹಿಳೆಯರು ಪಾಶ್ಚಿಮಾತ್ಯ ಸಂಸ್ಕೃತಿಯನ್ನು ಅನುಸರಿಸಬಾರದು ಎಂದು ಭಾಷಣ ಬಿಗಿದಿದ್ದಾರೆ.
ಇಂದಿನ ಭಾರತೀಯ ಮಹಿಳೆಯರಲ್ಲಿ ಪಾಶ್ಚಿಮಾತ್ಯ ಸಂಸ್ಕೃತಿಯನ್ನು ಅನುಸರಿಸುವುದೇ ಫ್ಯಾಷನ್ ಆಗಿದೆ. ಅಲ್ಲದೆ, ಪ್ರಚೋದಿಸುವಂತೆ ಬಿಗಿಯಾಗಿ ಬಟ್ಟೆ ದರಿಸುತ್ತಾರೆ. ಪಾಶ್ಚಿಮಾತ್ಯ ಸಂಸ್ಕೃತಿಯ ದಾಸರಾಗಿದ್ದರಿಂದಲೇ ಮಹಿಳೆಯರ ಮೇಲೆ ಅತ್ಯಾಚಾರಗಳು ಹೆಚ್ಚುತ್ತಿವೆ ಎಂದು ಖಡಾಖಂಡಿತವಾಗಿ ನುಡಿದು ಪಾಶ್ಚಿಮಾತ್ಯಪ್ರಿಯರ ಕೋಪಕ್ಕೆ ಗುರಿಯಾಗಿದ್ದಾರೆ.
ಇಷ್ಟು ಮಾತ್ರವಲ್ಲದೆ, ಭಾರತೀಯರು ಜನವರಿ 1ರ ಬದಲು ಗುಡಿ ಪಡ್ವಾ (ಯುಗಾದಿ) ಹಬ್ಬವನ್ನು ಹೊಸ ವರ್ಷವನ್ನಾಗಿ ಆಚರಿಸಬೇಕು. ದೂರವಾಣಿಯಲ್ಲಿ ಮಾತನಾಡುವಾಗ ಹಲೋ ಅನ್ನುವ ಬದಲು ನಮಸ್ಕಾರ ಅಂತ ಭಾರತೀಯ ಭಾಷೆಯಲ್ಲಿ ಹೇಳಬೇಕು ಎಂದು ಕೂಡ ಲತಾ ಅವರು ತಾಕೀತು ಮಾಡಿದ್ದಾರೆ.
ಲತಾ ಅವರು ಇಂಥ ಹೇಳಿಕೆ ನೀಡಿರುವ ಕುರಿತು ಅವರ ಪತಿದೇವ ದೀಪಕ್ ಅವರನ್ನು ಸಂಪರ್ಕಿಸಿದಾಗ, ಇದರ ಬಗ್ಗೆ ನನಗೇನೂ ಗೊತ್ತಿಲ್ಲ. ಎಲ್ಲ ತಿಳಿದುಕೊಂಡ ಮೇಲೆ ಪ್ರತಿಕ್ರಿಯಿಸುತ್ತೇನೆ ಎಂದು ಉತ್ತರಿಸಿದ್ದಾರೆ. ಗೋವಾದ ಸಚಿವರು ಪ್ರತಿಕ್ರಿಯಿಸಲಿ ಬಿಡಲಿ, ಲತಾ ಅವರು ನೀಡಿರುವ ಹೇಳಿಕೆಯಲ್ಲಿ ಏನಾದರೂ ತಪ್ಪಿದೆಯಾ? ನೀವು ಹೇಳಿರಿ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications