ಎಫ್ ಐಆರ್ ದಾಖಲು, ಬಂಧನ ಭೀತಿಯಲ್ಲಿ ತೇಜಪಾಲ್
ಬೆಂಗಳೂರು, ನ.22: ತೆಹಲ್ಕಾ ಸುದ್ದಿಸಂಸ್ಥೆ ಸ್ಥಾಪಕ ಹಾಗೂ ಮುಖ್ಯ ಸಂಪಾದಕ ತರುಣ್ ತೇಜಪಾಲ್ ತನ್ನ ಸಹದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೇಜಪಾಲ್ ವಿರುದ್ಧ ಗೋವಾ ಪೊಲೀಸರು ಶುಕ್ರವಾರ ಎಫ್ ಐಆರ್ ದಾಖಲಿಸಿದ್ದಾರೆ. ಗೋವಾ ಸರ್ಕಾರ ತೇಜಪಾಲ್ ವಿರುದ್ಧ ತನಿಖೆ ಚುರುಕುಗೊಳಿಸುವಂತೆ ಆದೇಶಿಸಿತ್ತು. 6 ತಿಂಗಳ ರಜೆ ಪಡೆದಿರುವ ತೇಜ್ ಪಾಲ್ ಸದ್ಯಕ್ಕೆ ಬಂಧನ ಭೀತಿ ಎದುರಿಸುತ್ತಿದ್ದಾರೆ.
ಪ್ರಕರಣದ ಬಗ್ಗೆ ಮೊಟ್ಟ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ತೇಜಪಾಲ್. ಯಾವುದೇ ರೀತಿಯ ತನಿಖೆಗೆ ಸಿದ್ಧ ಎಂದಿದ್ದಾರೆ. ತೇಜಪಾಲ್ ರಕ್ಷಿಸಲಾಗುತ್ತಿದೆ ಯಾವುದೇ ಶಿಕ್ಷೆಗೊಳಗಾಗದೆ ತಪ್ಪಿಸಿಕೊಳ್ಳುವ ಸಾಧ್ಯತೆಯಿದೆ, ಭಾರತ ಬಿಟ್ಟು ಬೇರೆ ದೇಶಕ್ಕೆ ತೆರಳಿದ್ದಾರೆ ಎಂಬ ಸುದ್ದಿಗಳನ್ನು ತೆಹೆಲ್ಕಾ ವ್ಯವಸ್ಥಾಪಕ ನಿರ್ದೇಶಕಿ ಶೋಮಾ ಅಲ್ಲಗೆಳೆದಿದ್ದಾರೆ.
ಪ್ರಕರಣಕ್ಕೆ ಸಾಕ್ಷಿ ಎನ್ನಲಾಗಿರುವ ಸಿಸಿಟಿವಿ ಕೆಮೆರಾ ತುಣುಕು ಬಗ್ಗೆ ಪ್ರತಿಕ್ರಿಯೆ ನೀಡಿರುವ ತೇಜಪಾಲ್, ಹೊಟೆಲ್ ನವರನ್ನು ಕೇಳಿ ಸಿಸಿಟಿವಿ ಫುಟೇಜ್ ತರೆಸಿಕೊಂಡು ನೋಡಲಿ ನಾನು ಏನು ತಪ್ಪು ಮಾಡಿಲ್ಲ. ಈಗಾಗಲೇ ಕ್ಷಮೆಯಾಚಿಸಿ, ಸಂಸ್ಥೆ ನಿಯಮದಂತೆ ನಡೆದುಕೊಂಡಿದ್ದೇನೆ ಎಂದಿದ್ದಾರೆ. ಗೋವಾ ಪೊಲೀಸರು ಐಪಿಸಿ ಸೆಕ್ಷನ್ 376(ಅತ್ಯಾಚಾರ) ಹಾಗೂ 344 ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಮುಂದುವರೆಸಿದ್ದಾರೆ.

ವೃತ್ತಿಯಲ್ಲಿ ಪತ್ರಕರ್ತರಾಗಿರುವ ತರುಣ್ ತೇಜಪಾಲ್ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ, ಪ್ರಕರಣ ಸಂಬಂಧ ರಾಜ್ಯ ಪೊಲೀಸರು ತನಿಖೆ ಕೈಗೊಳ್ಳಲಿದ್ದು, ಆರೋಪ ಸಾಬೀತಾದರೆ ಕೇಸು ದಾಖಲಿಸಲಾಗುವುದು ಎಂದು ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರೀಕಾರ್ ಹೇಳಿದ್ದಾರೆ.
ಗೋವಾದ ಹೋಟೆಲ್ ವೊಂದರಲ್ಲಿ ತರುಣ್ ಅವರು ಎರಡು ಬಾರಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳಾ ಸಹದ್ಯೋಗಿ ಆರೋಪಿಸಿದ್ದರು. ತರುಣ್ ಅವರ ಮೇಲೆ ಲೈಂಗಿಕ ಆರೋಪ ಕೇಳಿ ಬರುತ್ತಿದ್ದಂತೆ, ನೈತಿಕ ಹೊಣೆ ಹೊತ್ತು ಕ್ಷಮೆಯಾಚಿಸಿ, ತಮ್ಮ ಸಹ ಸಂಪಾದಕ ಸ್ಥಾನದಿಂದ ಆರು ತಿಂಗಳ ಕಾಲ ದೂರಸರಿದಿದ್ದರು.
10 ದಿನಗಳ ಹಿಂದೆ ಗೋವಾದಲ್ಲಿ ಆಯೋಜಿಸಿದ್ದ ಸಮಾರಂಭದ ವೇಳೆ ತೇಜ್ ಪಾಲ್ ತಮ್ಮ ಜತೆ ಅನುಚಿತವಾಗಿ ವರ್ತಿಸಿದರು ಎಂದು ಆರೋಪಿಸಿ ಪತ್ರಕರ್ತೆಯೊಬ್ಬರು, ತೆಹಲ್ಕಾದ ವ್ಯವಸ್ಥಾಪಕ ಸಂಪಾದಕಿ ಸೋಮಾ ಚೌಧರಿಗೆ ಇಮೇಲ್ ಕಳುಹಿಸಿದ್ದರು.
''ಇದು ನಮ್ಮ ಸಂಸ್ಥೆಯ ಆಂತರಿಕ ವಿಷಯ,'' ಎಂಬ ಚೌಧರಿ ಹೇಳಿಕೆ ಮಹಿಳಾ ಪರ ಕಾರ್ಯಕರ್ತರನ್ನು ಕೆರಳಿಸಿದ್ದು, ಪ್ರಕರಣ ಸಂಬಂಧ ಕಾನೂನು ಸೂಕ್ತ ಕ್ರಮ ಕೈಗೊಳ್ಳಲಿ ಎಂದು ಒತ್ತಾಯಿಸಿದ್ದಾರೆ.
ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ತರುಣ್ ತೇಜ್ ಪಾಲ್ ವಿರುದ್ಧ ಎಫ್ ಐಆರ್ ದಾಖಲಿಸಿ ಬಂಧಿಸಬೇಕು ಎಂದು ಬಿಜೆಪಿ ಆಗ್ರಹಿಸಿತ್ತು.
ತಪ್ಪು ಮಾಡಿರುವುದಾಗಿ ಸ್ವತಃ ಒಪ್ಪಿಕೊಂಡಿರುವ ತೇಜ್ ಪಾಲ್ ಅವರನ್ನು ತೆಹಲ್ಕಾದಿಂದ ಹೊರಹಾಕಿದ ಮಾತ್ರಕ್ಕೆ ಪ್ರಕರಣ ಇತ್ಯರ್ಥವಾಗುವುದಿಲ್ಲ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಪಕ್ಷ ಒತ್ತಾಯಿಸಿದೆ.
ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ತರುಣ್ ತೇಜ್ಪಾಲ್ ಪ್ರಸಾರ ಭಾರತಿ ಮಂಡಳಿಯ ಸದಸ್ಯತ್ವ ಕಳೆದುಕೊಂಡಿದ್ದಾರೆ. ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ನೇತೃತ್ವದ ಸಮಿತಿ ಪ್ರಸಾರ ಭಾರತಿ ಮಂಡಳಿಯ ಸದಸ್ಯರಾಗಿ ತೇಜ್ಪಾಲ್ ಅವರನ್ನು ಮಂಗಳವಾರ ಆಯ್ಕೆ ಮಾಡಿತ್ತು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications