ಮೂರನೇ ಬಾರಿಗೆ ಗೋವಾ ಸಿಎಂ ಆಗಿ ಪರಿಕ್ಕರ್ ಪ್ರಮಾಣ ವಚನ
ಗೋವಾದಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶ ಹೊರ ಬಿದ್ದ ನಂತರ ಯಾರು ಸರ್ಕಾರ ರಚಿಸುತ್ತಾರೆ ಎಂಬ ಕುತೂಹಲಕ್ಕೆ ಇನ್ನೇನು ತೆರೆ ಬಿತ್ತು ಎನ್ನುವಷ್ಟರಲ್ಲೇ ಹೊರ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈ ದಿನ ಎಲ್ಲಾ ಅಪ್ಡೇಟ್ಸ್ ಇಲ್ಲಿದೆ
ಪಣಜಿ, ಮಾರ್ಚ್ 14 : ಗೋವಾದಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶ ಹೊರ ಬಿದ್ದ ನಂತರ ಯಾರು ಸರ್ಕಾರ ರಚಿಸುತ್ತಾರೆ ಎಂಬ ಕುತೂಹಲಕ್ಕೆ ಇನ್ನೇನು ತೆರೆ ಬಿತ್ತು ಎನ್ನುವಷ್ಟರಲ್ಲೇ ಹೊರ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ನಿಗದಿಯಂತೆ ಮನೋಹರ್ ಪರಿಕ್ಕರ್ ಅವರು ಮಂಗಳವಾರ ಪ್ರಮಾಣವಚನ ಸ್ವೀಕರಿಸಬೇಕಿದೆ.. ಈ ದಿನ ಎಲ್ಲಾ ಅಪ್ಡೇಟ್ಸ್ ಇಲ್ಲಿದೆ...
ಗೋವಾ ಫಲಿತಾಂಶ : 40 ಸ್ಥಾನಗಳು (ಬಹುಮತಕ್ಕೆ 21 ಬೇಕು): ಬಿಜೆಪಿ 13. ಕಾಂಗ್ರೆಸ್ 17, ಎನ್ ಸಿಪಿ 1, ಎಂಜಿಪಿ 3, ಜಿಎಫ್ಪಿ 3, ಇತರೆ 3
5.30: ಮೂರನೇ ಬಾರಿಗೆ ಗೋವಾ ಮುಖ್ಯಮಂತ್ರಿ ಆಗಿ ಮನೋಹರ್ ಪರಿಕ್ಕರ್ ಅವರಿಂದ ಪ್ರಮಾಣ ವಚನ ಸ್ವೀಕಾರ.
12.45 : ಬಹುಮತ ಸಾಬೀತುಪಡಿಸಲು ನಮಗೆ ಒಂದು ಅವಕಾಶ ಸಿಗಬೇಕಿದೆ. ಇದು ಪ್ರಜಾಪ್ರಭುತ್ವದ ಅಳಿವಿನ ಪ್ರಶ್ನೆ: ದಿಗ್ವಿಜಯ್ ಸಿಂಗ್.
12.30: ಮನೋಹರ್ ಪರಿಕ್ಕರ್ ಪ್ರಮಾಣ ವಚನ ಸಮಾರಂಭಕ್ಕೆ ತಡೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಮಂಗಳವಾರದಂದು ತಳ್ಳಿ ಹಾಕಿದೆ.
12.00: ಮಾರ್ಚ್ 16ರಂದು ಬೆಳಗ್ಗೆ 11 ಗಂಟೆಗೆ ಬಹುಮತ ಸಾಬೀತುಪಡಿಸಲು ಮನೋಹರ್ ಪರಿಕ್ಕರ್ ಅವರಿಗೆ ಸುಪ್ರೀಂಕೋರ್ಟ್ ಸೂಚಿಸಿದೆ.
11.45: ನಿಮ್ಮ (ಕಾಂಗ್ರೆಸ್) ಬಳಿ ಸರ್ಕಾರ ರಚನೆಗೆ ಬೇಕಾದ ಸ್ಥಾನಗಳಿಲ್ಲದ ಕಾರಣ ನಿಮಗೆ ಸರ್ಕಾರ ರಚಿಸಲು ಆಹ್ವಾನ ನೀಡಲಾಗಿಲ್ಲ. ನೀವು ಕೂಡಾ ಸರ್ಕಾರ ರಚಿಸುವ ಯತ್ನವನ್ನು ಮಾಡಿಲ್ಲ ಎಂದು ಸುಪ್ರೀಕೋರ್ಟ್ ಮುಖ್ಯ ನ್ಯಾಯಮೂರ್ತಿ ಜೆಎಸ್ ಖೆಹರ್ ತಮ್ಮ ಆದೇಶದಲ್ಲಿ ಹೇಳಿದರು.
ಗೋವಾದಲ್ಲಿ ಅತಂತ್ರ ವಿಧಾನಸಭೆ ಸ್ಥಿತಿ ಉಂಟಾದ ಹಿನ್ನಲೆಯಲ್ಲಿ ಅತಿ ಹೆಚ್ಚು ಸ್ಥಾನಗಳಿಸಿದ ಕಾಂಗ್ರೆಸಿಗೆ ಸರ್ಕಾರ ರಚಿಸಲು ರಾಜ್ಯಪಾಲೆ ಮೃದ್ದುಲಾ ಸಿನ್ಹಾ ಅವರು ಆಹ್ವಾನ ನೀಡುತ್ತಾರೆ ಎಂಬ ನಿರೀಕ್ಷೆಯಿತ್ತು. ಆದರೆ, ಎರಡನೇ ಸ್ಥಾನದಲ್ಲಿರುವ ಬಿಜೆಪಿ, ಪ್ರಾದೇಶಿಕ ಪಕ್ಷಗಳ ನೆರವಿನಿಂದ ಅಧಿಕಾರ ಸ್ಥಾಪಿಸಲು ಹಕ್ಕು ಮಂಡನೆ ಮಾಡಿದೆ.

ಈ ನಡುವೆ ಮನೋಹರ್ ಪರಿಕ್ಕರ್ ಅವರು ರಕ್ಷಣಾ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಸಿಎಂ ಆಗಲು ಗೋವಾಕ್ಕೆ ಬಂದಿದ್ದಾರೆ.
Panjim: Congress Legislative Party to meet at Congress House. All Congress MLAs along with Digvijaya Singh will meet Guv post CLP meet #Goa pic.twitter.com/csWQDIXIeP
— ANI (@ANI_news) March 14, 2017
ಕಾಂಗ್ರೆಸ್ ಪಕ್ಷದ ಶಾಸಕರನ್ನು ಒಟ್ಟು ಗೂಡಿಸಿ ದಿಗ್ವಿಜಯ್ ಸಿಂಗ್ ಅವರು ಶಾಸಕಾಂಗ ಸಭೆ ನಡೆಸಿದ್ದು, ನಂತರ ರಾಜ್ಯಪಾಲೆಯನ್ನು ಭೇಟಿ ಮಾಡಲಿದ್ದಾರೆ.
-
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ












Click it and Unblock the Notifications