ಗೋವಾದ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ: ಆರು ಜನ ಸಾವು- ಅನೇಕರಿಗೆ ಗಾಯ
ಪಣಜಿ ಮೇ 3: ದೇವಾಲಯ ಉತ್ಸವದ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ ಆರು ಜನರು ಸಾವನ್ನಪ್ಪಿದ ಭೀಕರ ಘಟನೆ ಉತ್ತರ ಗೋವಾದಲ್ಲಿ ನಡೆದಿದೆ. ಈ ಘಟನೆಯಲ್ಲಿ ಹಲವರು ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಕುಟುಂಬಸ್ಥರನ್ನು ಕಳೆದುಕೊಂಡ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
ಶಿರ್ಗಾವೊ ಗ್ರಾಮದ ಶ್ರೀ ಲೈರೈ ದೇವಿ ದೇವಸ್ಥಾನದಲ್ಲಿ ಇಂದು ಬೆಳಗಿನ ಜಾವ ಉತ್ಸವ ನಡೆದಿತ್ತು. ಈ ಉತ್ಸವಕ್ಕಾಗಿ ಗೋವಾ, ಮಹಾರಾಷ್ಟ್ರ ಮತ್ತು ಕರ್ನಾಟಕದ ಸಾವಿರಾರು ಭಕ್ತರು ದೇವಾಲಯದಲ್ಲಿ ಜಮಾಯಿಸಿದ್ದರು. ಏಕಾಏಕಿ ಜನ ಓಡಲು ಆರಂಭಿಸಿದ್ದರಿಂದ ಕಾಲ್ತುಳಿತ ಉಂಟಾಗಿದೆ. ಆದರೆ ಘಟನೆಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ತನಿಖೆಯ ನಂತರವಷ್ಟೇ ಕಾರಣ ಗೊತ್ತಾಗಲಿದೆ.

ಘಟನೆಯಲ್ಲಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅವರಲ್ಲಿ ಎಂಟು ಜನರ ಸ್ಥಿತಿ ಗಂಭೀರವಾಗಿದ್ದು ಇಬ್ಬರನ್ನು ಬಂಬೋಲಿಮ್ನ ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಮಾತನಾಡಿದ ರಾಜ್ಯ ಆರೋಗ್ಯ ಸಚಿವ ವಿಶ್ವಜಿತ್ ರಾಣೆ, ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು ಆರು ಜನರು ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಮೃತರನ್ನು ಮಾಪುಸಾದ ಉತ್ತರ ಗೋವಾ ಜಿಲ್ಲಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ಇನ್ನೂ ಎಂಟು ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, 10 ಜನರಿಗೆ ಸಣ್ಣಪುಟ್ಟ ಗಾಯಗಳಿಗೆ ಚಿಕಿತ್ಸೆ ನೀಡಲಾಗಿದೆ ಎಂದು ಹೇಳಿದರು.
ಇನ್ನೂ ಪರಿಸ್ಥಿತಿಯನ್ನು ನಿರ್ವಹಿಸಲು ಆರೋಗ್ಯ ಇಲಾಖೆ ತಕ್ಷಣದ ಕ್ರಮಗಳನ್ನು ತೆಗೆದುಕೊಂಡಿದೆ. ಘಟನೆಯ ನಂತರ 108 ಆಂಬ್ಯುಲೆನ್ಸ್ ಸೇವೆಗೆ ನಾವು ಕರೆ ಮಾಡಿದೆವು. ಐದು ಆಂಬ್ಯುಲೆನ್ಸ್ಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಇನ್ನೂ ಮೂರು ಆಂಬ್ಯುಲೆನ್ಸ್ಗಳನ್ನು ಉತ್ತರ ಗೋವಾ ಜಿಲ್ಲಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಆಸ್ಪತ್ರೆಯಲ್ಲಿ ಹೆಚ್ಚುವರಿ ವೈದ್ಯರನ್ನು ನಿಯೋಜಿಸಲಾಗಿದ್ದು ಸಮಗ್ರ ಆರೈಕೆಯನ್ನು ಒದಗಿಸಲು ವೆಂಟಿಲೇಟರ್ಗಳೊಂದಿಗೆ ಮೀಸಲಾದ ಐಸಿಯು ಅನ್ನು ಸ್ಥಾಪಿಸಲಾಗಿದೆ. ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದ್ದು ನಾವು ಪ್ರತಿ ರೋಗಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ರಾಣೆ ಹೇಳಿದರು.
ಅಲ್ಲದೆ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಕೂಡ ಉತ್ತರ ಗೋವಾ ಜಿಲ್ಲಾ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ಭೇಟಿ ಮಾಡಿದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications