ಮೋದಿ 'ಮನದ ಮಾತು' ನಿಜ ಮಾಡಲಿದೆ ಈ ರಾಜ್ಯ!
ಪ್ರಧಾನಿ ನರೇಂದ್ರ ಮೋದಿ ಅವರ 'ಮನ್ ಕಿ ಬಾತ್' ಆಶಯವನ್ನು ಕಾರ್ಯರೂಪಕ್ಕೆ ಇಳಿಸಲು ಗೋವಾ ರಾಜ್ಯ ಸಜ್ಜಾಗಿದೆ. ಡಿಸೆಂಬರ್ 31ರಿಂದ ನಗದು ರೂಪದ ವ್ಯವಹಾರವನ್ನು ಸಂಪೂರ್ಣ ನಿಲ್ಲಿಸಿ, ನಗದು ರಹಿತ ರಾಜ್ಯವಾಗಿ ಪರಿವರ್ತನೆಯಾಗಲಿದೆ.
ಪಣಜಿ, ನವೆಂಬರ್ 27: ಪ್ರಧಾನಿ ನರೇಂದ್ರ ಮೋದಿ ಅವರ 'ಮನ್ ಕಿ ಬಾತ್' ಆಶಯವನ್ನು ಕಾರ್ಯರೂಪಕ್ಕೆ ಇಳಿಸಲು ಗೋವಾ ರಾಜ್ಯ ಸಜ್ಜಾಗಿದೆ. ಡಿಸೆಂಬರ್ 31ರಿಂದ ನಗದು ರೂಪದ ವ್ಯವಹಾರವನ್ನು ಸಂಪೂರ್ಣ ನಿಲ್ಲಿಸಿ, ನಗದು ರಹಿತ ರಾಜ್ಯವಾಗಿ ಪರಿವರ್ತನೆಯಾಗಲಿದೆ.
ಗೋವಾ ಈ ವರ್ಷಾಂತ್ಯದ ಒಳಗಾಗಿ ದೇಶದ ಮೊಟ್ಟಮೊದಲ ನಗದು ರಹಿತ ರಾಜ್ಯವಾಗಿ ಬದಲಾಗಲಿದೆ. ಮೀನು, ಮಾಂಸ, ತರಕಾರಿ ಹಾಗೂ ಇತರ ಅಗತ್ಯ ವಸ್ತುಗಳನ್ನು ಸ್ಮಾರ್ಟ್ ಫೋನ್ ಮೂಲಕ ಮನೆಬಾಗಿಲಿಗೆ ತರಿಸಿಕೊಳ್ಳಲು ವ್ಯವಸ್ಥೆ ಸಿದ್ಧವಾಗುತ್ತಿದೆ.[ನಗದು ರಹಿತ ವ್ಯವಹಾರಕ್ಕೆ ಹೆಚ್ಚು ಒತ್ತು ನೀಡಿ: ಮೋದಿ ಮನವಿ]
ಗೋವಾದಲ್ಲಿ ಇನ್ಮೇಲೆ ಮಾರುಕಟ್ಟೆಗೆ ಹೋದರೆ ಪರ್ಸ್ ಮರೆತರೂ ಚಿಂತೆಯಿಲ್ಲ. ಪಿಕ್ ಪಾಕೆಟರ್ಗಳಿಗಂತೂ ಈ ವ್ಯವಸ್ಥೆ ದುಃಸ್ವಪ್ನವಾಗಿ ಕಾಡಲಿದೆ. ಎಲ್ಲವೂ ಇನ್ಮೇಲೆ ಮೊಬೈಲ್ ಮೂಲಕವೇ ನಡೆಯಲಿದೆಯಂತೆ. ನಾಗರಿಕರು ಮಾಡುವ ಖರೀದಿಗೆ ಅವರ ಬ್ಯಾಂಕ್ ಖಾತೆಯಿಂದಲೇ ಹಣ ಕಡಿತವಾಗಲಿದೆ ಎಂದು ಮುಖ್ಯ ಕಾರ್ಯದರ್ಶಿ ಆರ್.ಕೆ.ಶ್ರೀವಾಸ್ತವ ವಿವರಿಸಿದ್ದಾರೆ.

ನಾಗರಿಕರು ತಮ್ಮ ಮೊಬೈಲ್ನಿಂದ *99#ಗೆ ಕರೆ ಮಾಡುವ ಮೂಲಕ ಈ ಸೌಲಭ್ಯ ಪಡೆಯಬಹುದು. ಇದಕ್ಕೆ ಸ್ಮಾರ್ಟ್ ಫೋನ್ಗಳೇ ಬೇಕಿಲ್ಲ. ಅದರಲ್ಲಿ ಬರುವ ಸೂಚನೆಗಳಿಗೆ ಅನುಗುಣವಾಗಿ ವಹಿವಾಟು ನಡೆಸಬಹುದು. ಸಣ್ಣ ವ್ಯಾಪಾರಿಗಳಿಗೆ ಹಣವನ್ನು ವರ್ಗಾವಣೆ ಮಾಡಲು ಅವರು ಕಾರ್ಡ್ ಸ್ವೈಪ್ ಮಾಡಬೇಕಿಲ್ಲ. ಆದರೆ,ಈಗ ಮಳಿಗೆಗಳಲ್ಲಿ ಬಳಕೆಯಲ್ಲಿರುವ ಸ್ವೈಪಿಂಗ್ ಯಂತ್ರ ಕಾರ್ಯ ಮುಂದುವರಿಯಲಿದೆ ಎಂದು ವಿವರ ನೀಡಿದರು.
ಈ ನಗದುರಹಿತ ವ್ಯವಸ್ಥೆಯಲ್ಲಿ ಹೇಗೆ ವಹಿವಾಟು ನಡೆಸಬೇಕು ಎಂಬ ಬಗ್ಗೆ ವ್ಯಾಪಾರಿಗಳಿಗೆ ಅರಿವು ಮೂಡಿಸಲಾಗುತ್ತಿದೆ. ಮೊದಲಿಗೆ ಈ ವ್ಯವಸ್ಥೆ ಮಪೂಸಾ ಹಾಗೂ ಪಣಜಿಯಲ್ಲಿ ಜಾರಿಗೆ ಬರಲಿದೆ. ನಗದುರಹಿತ ವ್ಯವಸ್ಥೆಯಲ್ಲಿ ಹಣ ವರ್ಗಾವಣೆಗೆ ಕನಿಷ್ಠ ಮಿತಿ ಇರುವುದಿಲ್ಲ ,ವರ್ಗಾವಣೆಗಾಗಿ ಯಾವುದೇ ವಿಶೇಷ ಶುಲ್ಕ ವಿಧಿಸುವುದಿಲ್ಲ ಎಂದಿದ್ದಾರೆ.
ಮೋದಿ ಅವರ ಕನಸು ಮೊದಲಿಗೆ ಗೋವಾದಲ್ಲಿ ಸಾಕಾರಗೊಳ್ಳಲಿದೆ ಎಂದು ರಕ್ಷಣಾ ಸಚಿವ ಮನೋಹರ್ ಪಾರಿಕ್ಕಾರ್ ಅವರು ಕೂಡಾ ಹೇಳಿದ್ದಾರೆ. ನಿಮ್ಮ ಕೈಲಿರುವ ಮೊಬೈಲೇ ನಿಮ್ಮ ಬ್ಯಾಂಕ್, ಎಟಿಎಂ ಎಲ್ಲವೂ ಆಗಲಿದೆ. ಪ್ರವಾಸಿಗರು, ವಿದೇಶಿಯರಿಗೂ ಈ ಹೊಸ ವ್ಯವಸ್ಥೆ ಅನುಕೂಲಕರ ಎಂದು ಮನೋಹರ್ ಹೇಳಿದರು.
ನಗದು ರಹಿತ ಸಮಾಜ ನಿರ್ಮಾಣದ ನಿಟ್ಟಿನಲ್ಲಿ ನಗದು ವ್ಯವಹಾರವನ್ನು ನಿಷೇಧಿಸಲಾಗುವುದು. ನಗದುರಹಿತ ವ್ಯವಸ್ಥೆಯಲ್ಲಿ ಹಣ ವರ್ಗಾವಣೆಗೆ ಕನಿಷ್ಠ ಮಿತಿ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಜತೆಗೆ ಈ ವರ್ಗಾವಣೆಗಾಗಿ ಯಾವುದೇ ವಿಶೇಷ ಶುಲ್ಕ ವಿಧಿಸುವುದಿಲ್ಲ ಎಂದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications