ದೇವರೇ ಸರ್ವೋಚ್ಚ ನ್ಯಾಯಾಲಯವನ್ನು ರಕ್ಷಿಸಬೇಕು : ಫಾಲಿ ನಾರಿಮನ್
ನವದೆಹಲಿ, ಜುಲೈ 06 : ಸರ್ವೋಚ್ಚ ನ್ಯಾಯಾಲಯದ ವಿರುದ್ಧವೇ ತಿರುಗಿಬಿದ್ದಿದ್ದ ನಾಲ್ವರು ನ್ಯಾಯಮೂರ್ತಿಗಳನ್ನು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ಸಂಪರ್ಕಿಸಬೇಕಿತ್ತು. ಇದೀಗ ಆ ದೇವರೇ ಸುಪ್ರೀಂ ಕೋರ್ಟನ್ನು ಕಾಪಾಡಬೇಕು ಎಂದು 90 ವರ್ಷದ ಹಿರಿಯ ನ್ಯಾಯವಾದಿ ಫಾಲಿ ನಾರಿಮನ್ ಅವರು ಅಲವತ್ತುಕೊಂಡಿದ್ದಾರೆ.
ನ್ಯಾಯಮೂರ್ತಿ ಚಲಮೇಶ್ವರ ಸೇರಿದಂತೆ ನಾಲ್ವರು ಹಿರಿಯ ನ್ಯಾಯಮೂರ್ತಿಗಳು ಬಹಿರಂಗ ಪತ್ರಿಕಾಗೋಷ್ಠಿ ನಡೆಸಿದಾಗ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ಚಲಮೇಶ್ವರ ಅವರೊಂದಿಗೆ ಮಾತುಕತೆ ನಡೆಸಿ ಸಾಮರಸ್ಯ ತರಬೇಕಿತ್ತು ಎಂದು ಸಿಎನ್ಎನ್-ನ್ಯೂಸ್18ಗೆ ನೀಡಿದ ಸಂದರ್ಶನದಲ್ಲಿ ಅಭಿಪ್ರಾಯ ಪಟ್ಟಿದ್ದಾರೆ.
'ದೇವರೇ, ಸರ್ವೋಚ್ಚ ನ್ಯಾಯಾಲಯವನ್ನು ರಕ್ಷಿಸು' (God Save the Hon'ble Supreme Court) ಎಂಬ ಶೀರ್ಷಿಕೆಯ ಅವರ ಪುಸ್ತಕ ಮಾರುಕಟ್ಟೆಗೆ ಬರಲು ಸಜ್ಜಾಗಿದೆ. ಅದರಲ್ಲಿ, ಭಿನ್ನಮತದ ಹೊಗೆ ಎಬ್ಬಿಸಿದ್ದ ನಾಲ್ವರು ನ್ಯಾಯಮೂರ್ತಿಗಳು ಮತ್ತು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನಡುವಿನ ವಿವಾದವನ್ನು ಸಂಪೂರ್ಣವಾಗಿ ಅನಾವರಣ ಮಾಡಿರುವುದಾಗಿ ಹೇಳಿದ್ದಾರೆ.

ಪುಸ್ತಕದ ಶೀರ್ಷಿಕೆಯ ಬಗ್ಗೆ ಪ್ರಸ್ತಾಪಿಸಿದಾಗ, ಹೌದು ಶೀರ್ಷಿಕೆ ಇತ್ತೀಚೆಗೆ ನಡೆದ ಅಹಿತಕರ ವಿದ್ಯಮಾನದಿಂದಲೇ ಪ್ರೇರಿತವಾಗಿದ್ದು, ಅದೇ ಪುಸ್ತಕದ ತಿರುಳು ಎಂದಿರುವ ಅವರು, ಈ ವಿವಾದ ನ್ಯಾಯಾಂಗದ ಬಗ್ಗೆ ಜನರಲ್ಲಿ ಸರ್ವೋಚ್ಚ ನ್ಯಾಯಾಲಯದಿಂದ ಏನನ್ನು ನಿರೀಕ್ಷಿಸಲು ಸಾಧ್ಯ ಎಂಬ ಸಂಶಯ ಏಳುವಂತೆ ಮಾಡಿದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.
ನಾಲ್ವರು ನ್ಯಾಯಮೂರ್ತಿಗಳು ಒಂದು ವಿಷಯ ಹೇಳುತ್ತಿದ್ದರೆ, ಮುಖ್ಯ ನ್ಯಾಯಮೂರ್ತಿ ಮತ್ತೊಂದು ಹೇಳುತ್ತಿದ್ದಾರೆ. ಜೊತೆಗೆ, ಇತರ ನ್ಯಾಯಮೂರ್ತಿಗಳು ಏನನ್ನೂ ಹೇಳುತ್ತಿಲ್ಲ. ಹೀಗಾಗಿ ನ್ಯಾಯಾಂಗದ ಮೇಲೆಯೇ ಜನರಿಗೆ ಅನುಮಾನ ಮೂಡುವಂತೆ ಮಾಡಿದೆ ಎಂದು ಅವರು ಅಭಿಪ್ರಾಯ ಹೇಳಿದ್ದಾರೆ.
ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ನ್ಯಾಯಮೂರ್ತಿ ಚಲಮೇಶ್ವರ ಅವರು ನೀಡಿದ್ದ ಆದೇಶವನ್ನು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ರದ್ದು ಪಡಿಸಿದ್ದು ವಿವಾದಕ್ಕೆ ಮೊದಲ ಕಿಡಿ ಹಚ್ಚಿತ್ತು. ನಂತರ ಚಲಮೇಶ್ವರ ಅವರು ಜನವರಿ 12ರಂದು ಇಡೀ ದೇಶವೇ ನಿಬ್ಬೆರಗಾಗುವಂತೆ ಪತ್ರಿಕಾಗೋಷ್ಠಿ ಕರೆದು ಎಲ್ಲವನ್ನೂ ಹೇಳಿಕೊಂಡಿದ್ದರು.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications