ಗೋಧ್ರೋತ್ತರ ಹತ್ಯಾಕಾಂಡ, ಮೋದಿಗೆ ಕ್ಲೀನ್ ಚಿಟ್
ಗಾಂಧಿನಗರ, ನ.20: 2002ರ ಗೋಧ್ರಾ ಹತ್ಯಾಕಾಂಡ ನಂತರ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಹೊತ್ತಿದ್ದ ಅಂದಿನ ಗುಜರಾತ್ ಸಿಎಂ ನರೇಂದ್ರ ಮೋದಿ ಅವರಿಗೆ ತನಿಖಾ ಆಯೋಗ ಕ್ಲೀನ್ ಚಿಟ್ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಿಮ ವರದಿಯನ್ನು ನ್ಯಾ.ನಾನಾವತಿ ಆಯೋಗ ಹಾಲಿ ಸಿಎಂ ಆನಂದಿಬೇನ್ ಅವರಿಗೆ ಸಲ್ಲಿಸಿದೆ.
ಗೋಧ್ರೋತ್ತರ ಗಲಭೆಯಲ್ಲಿ ಅಂದಿನ ಸಿಎಂ ನರೇಂದ್ರ ಮೋದಿ ಹಾಗೂ ಅವರ ಸರ್ಕಾರ ಯಾವುದೇ ರೀತಿ ಹಸ್ತಕ್ಷೇಪ ಮಾಡಿರುವ ಬಗ್ಗೆ ಸಾಕ್ಷ್ಯಗಳು ದೊರೆತಿಲ್ಲ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೋದಿ ಅವರಿಗೆ ಸಮನ್ಸ್ ನೀಡುವ ಅಗತ್ಯವಿಲ್ಲ ಎಂದು ಹಾಲಿ ಸಿಎಂ ಆನಂದಿ ಬೇನ್ ಅವರಿಗೆ ಸಲ್ಲಿಸಿರುವ ವರದಿಯಲ್ಲಿ ಸಮಿತಿ ಹೇಳಿದೆ.
ಸುದೀರ್ಘ 12 ವರ್ಷಗಳ ವಿಚಾರಣೆ ಬಳಿಕ ನಾನಾವತಿ ಆಯೋಗ ಗುಜರಾತ್ ಮುಖ್ಯಮಂತ್ರಿ ಆನಂದಿಬೆನ್ ಅವರಿಗೆ ಈ ವರದಿಯನ್ನು ಸಲ್ಲಿಸಿದೆ. ಜಸ್ಟೀಸ್ ನಾನಾವತಿ ಅಲ್ಲದೆ ಗುಜರಾತಿನ ನಿವೃತ್ತ ಹೈಕೋರ್ಟ್ ಜಡ್ಜ್ ಅಕ್ಷಯ್ ಮೆಹ್ತಾ ಅವರು ಸಮಿತಿಯಲ್ಲಿದ್ದರು.

ಕೆ.ಆರ್ ನಾರಾಯಣನ್ ಅವರ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ನ್ಯಾ.ನಾನಾವತಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಸಂಚು ನಡೆದಿದೆ ಎನ್ನುವುದಾದರೆ ಅದಕ್ಕೆ ತಕ್ಕ ಪುರಾವೆಗಳಿರಬೇಕು, ಇಲ್ಲದಿದ್ದರೆ ಇದು ಸತ್ಯಕ್ಕೆ ದೂರವಾದ ಮಾತು ಎಂದು ಪರಿಗಣಿಸಲಾಗುವುದು ಎಂದಿದ್ದಾರೆ.
2005ರಲ್ಲಿ ಮಲೆಯಾಳಂ ಪತ್ರಿಕೆ ಮಾನವ ಸಂಸ್ಕೃತಿ ಜೊತೆ ಮಾತನಾಡಿದ್ದ ಮಾಜಿ ರಾಷ್ಟ್ರಪತಿ ಕೆಆರ್ ನಾರಾಯಣನ್ ಅವರು ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಘಟನೆ ಬಗ್ಗೆ ಕ್ರಮ ಜರುಗಿಸುವಂತೆ ಸಾಕಷ್ಟು ಪತ್ರ ಬರೆದಿದ್ದೆ ಆದರೆ, ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದಿದ್ದರು. ಈ ಬಗ್ಗೆ ತನಿಖೆ ನಡೆಸಿದ ನಾನಾವತಿ ಆಯೋಗ 2008ರಲ್ಲೇ ಮೋದಿ ಅವರಿಗೆ ಕ್ಲೀನ್ ಚಿಟ್ ನೀಡಿತ್ತು.
ಇದೀಗ 12 ವರ್ಷಗಳ ತನಿಖೆ ನಂತರ 50,000ಕ್ಕೂ ಅಧಿಕ ಅಫಿಡವಿಟ್ ಗಳು 2000ಕ್ಕೂ ಪುಟಗಳ ವಿವರಣೆ 10 ಸಂಪುಟದಲ್ಲಿ ಅಂತಿಮ ವರದಿಯನ್ನು ಸರ್ಕಾರಕ್ಕೆ ತನಿಖಾ ಆಯೋಗ ಸಲ್ಲಿಸಿದೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ












Click it and Unblock the Notifications